Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಲುಮರದ ತಿಮ್ಮಕ್ಕಗೂ ಉಡುಪಿಗೂ ಅವಿನಾಭಾವ...

ಸಾಲುಮರದ ತಿಮ್ಮಕ್ಕಗೂ ಉಡುಪಿಗೂ ಅವಿನಾಭಾವ ಸಂಬಂಧ !

ವಾರ್ತಾಭಾರತಿವಾರ್ತಾಭಾರತಿ14 Nov 2025 9:07 PM IST
share
ಸಾಲುಮರದ ತಿಮ್ಮಕ್ಕಗೂ ಉಡುಪಿಗೂ ಅವಿನಾಭಾವ ಸಂಬಂಧ !

ಉಡುಪಿ, ನ.14: ವಯೋ ಸಹಜತೆಯಿಂದ ಇಂದು ನಿಧನರಾದ ‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೂ ಮತ್ತು ಉಡುಪಿಗೂ ಅವಿನಾಭಾವ ಸಂಬಂಧ ಇದೆ. 2014ರಿಂದ ಈ ನಂಟು ತುಂಬಾ ಗಟ್ಟಿಯಾಗಿ ನೆಲೆಯೂರಿತ್ತು.

2014ರಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಲುಮರದ ತಿಮ್ಮಕ್ಕ, ಬಹಳ ಆರ್ಥಿಕ ಸಂಕಷ್ಟಕ್ಕೂ ಒಳಗಾಗಿದ್ದರು. ಅವರನ್ನು ನೋಡಲು ಬೆಂಗಳೂರಿಗೆ ಹೋಗಿದ್ದ ಉಡುಪಿಯ ಅವಿನಾಶ್ ಕಾಮತ್ಗೆ ಈ ವಿಚಾರ ತಿಳಿಯಿತು. ಅದಕ್ಕೆ ಅವರು ಉಡುಪಿಯಲ್ಲಿ ಅಜ್ಜಿಯ ಆರೋಗ್ಯಕ್ಕೆ ಧನಸಹಾಯ ಮಾಡಬೇಕೆಂಬ ಉದ್ದೇಶದಿಂದ ‘ನೆರಳು- ನೆರವು’ ಅಭಿಯಾನವನ್ನು ನಡೆಸಿದರು.

ಈ ಅಭಿಯಾನದ ಮೂಲಕ ಸುಮಾರು 2,36,000ರೂ. ಮೊತ್ತವನ್ನು ಸಂಗ್ರಹಿಸಲಾಗಿತ್ತು. ಗುಣಮುಖರಾದ ಬಳಿಕ ತಿಮ್ಮಕ್ಕ ಅವರನ್ನು ಉಡುಪಿಗೆ ಕರೆಸಿ ಆ ಮೊತ್ತವನ್ನು ಅವರಿಗೆಯೇ ಹಸ್ತಾಂತರಿಸಲಾಗಿತ್ತು. ಅಲ್ಲಿಂದ ಸಾಲುಮರದ ತಿಮ್ಮಕ್ಕನವರಿಗೂ ನಮ್ಮ ಉಡುಪಿಗೂ ಅವಿನಾಭಾವ ಸಂಬಂಧ ಬೆಳೆಯಿತು.

ಆ ಬಳಿಕ ಅವರು ನಿರಂತರ ಉಡುಪಿಗೆ ಹಲವು ಬಾರಿ ಬಂದಿದ್ದರು. ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉದ್ಘಾಟನೆಯನ್ನು 2019ರಲ್ಲಿ ತಿಮ್ಮಕ್ಕ ಅವರು ಮಾಡಿದ್ದರು. ಪ್ರತಿಸಲ ಉಡುಪಿಗೆ ಬಂದಾಗ ತಿಮ್ಮಕ್ಕ ಗಿಡ ನೆಡುತ್ತಿದ್ದರು.

ಅಜ್ಜಿಯ ಕುರಿತ 24 ನಿಮಿಷದ ಸಾಕ್ಷಚಿತ್ರವನ್ನು ಉಡುಪಿಯ ರವಿರಾಜ್ ಎಚ್.ಪಿ. ಅವಿನಾಶ್ ಕಾಮತ್ ನಿರ್ಮಿಸಿದ್ದರು. ಇದನ್ನು ಅಂದಿನ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬಿಡುಗಡೆಗೊಳಿಸಿದ್ದರು. ಅದೇ ರೀತಿ ತಿಮ್ಮಕ್ಕ ಅವರ ಕುರಿತು ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ‘ನೆರಳನು ನೀಡುವ ಮರಕೇ ನರಳು ಸಾಲುಮರದ ತಿಮ್ಮಕ್ಕ’ ಎಂಬ ಹಾಡು ರಚಿಸಿದ್ದರು. ಆ ಹಾಡು ಇದೀಗ ಯೂಟ್ಯೂಬ್ ನಲ್ಲಿ ಲಭ್ಯವಿದೆ.

ಉಡುಪಿಯ ಬಡಗಬೆಟ್ಟು ಸೊಸೈಟಿ ಹಮ್ಮಿಕೊಂಡಿದ್ದ ಪರಿಸರ ಸಂಬಂಧ ಕಾರ್ಯಕ್ರಮಕ್ಕೆ ತಿಮ್ಮಕ್ಕ ಅವರೇ ಚಾಲನೆ ನೀಡಿದ್ದರು. ಅದೇ ಸಂದರ್ಭದಲ್ಲಿ ಶಾಲೆಯ ಮೆಟ್ಟಿಲನ್ನೇ ಹತ್ತದ ಸಾಲುಮರದ ತಿಮ್ಮಕ್ಕ ಅವರನ್ನು ಮಣಿಪಾಲ ಮಾಹೆ ವಿವಿಯವರು ಕರೆಸಿ ಸನ್ಮಾನಿಸಿರುವುದು ವಿಶೇಷ. ಅದೇ ರೀತಿ ಅವಿನಾಶ್ ಕಾಮತ್ ಅವರ ಉಡುಪಿ ಎಂಜಿಎಂ ಕಾಲೇಜಿನಲ್ಲಿ ನಡೆದಿದ್ದ ಹೆಜ್ಜೆ ಗುರುತು ಕಾರ್ಯಕ್ರಮದಲ್ಲಿ ತಿಮ್ಮಕ್ಕ ಅವರನ್ನು ಕರೆಸಿ ಅವರ ಬದುಕನ್ನು ಜನರ ಮುಂದೆ ಇಡಲಾಗಿತ್ತು.

ಹೀಗೆ ಸಾಲುಮರದ ತಿಮ್ಮಕ್ಕ ಹಾಗೂ ಉಡುಪಿಯ ಸಂಬಂಧದ ಬಗ್ಗೆ ಅವಿನಾಶ್ ಕಾಮತ್ ಹಾಗೂ ರವಿರಾಜ್ ಎಚ್.ಪಿ. ನೆನಪಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X