Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಜುವ್ಯೆಲ್ಲರಿ ವರ್ಕ್‌ಶಾಪ್ ನಲ್ಲಿ...

ಉಡುಪಿ| ಜುವ್ಯೆಲ್ಲರಿ ವರ್ಕ್‌ಶಾಪ್ ನಲ್ಲಿ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ; 87.48 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ20 Sept 2025 8:14 PM IST
share
ಉಡುಪಿ| ಜುವ್ಯೆಲ್ಲರಿ ವರ್ಕ್‌ಶಾಪ್ ನಲ್ಲಿ ಕಳ್ಳತನ ಪ್ರಕರಣ: ಐವರು ಆರೋಪಿಗಳ ಬಂಧನ; 87.48 ಲಕ್ಷ ರೂ. ಮೌಲ್ಯದ ಸೊತ್ತು ವಶ

ಉಡುಪಿ, ಸೆ.20: ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಸೋಲಾಪುರ ಜಿಲ್ಲೆಯ ಮಲ್ಶಿರೋಸ್ ತಾಲೂಕಿನ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ(23), ನಿಲೇಶ ಬಾಪು ಕಸ್ತೂರಿ(19), ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25) ಬಂಧಿತ ಆರೋಪಿಗಳು.

ಬಂಧಿತರಿಂದ 74,88,000ರೂ. ಮೌಲ್ಯದ 748.8 ಗ್ರಾಂ ಚಿನ್ನ, 3,60,000 ರೂ. ಮೌಲ್ಯದ 4 ಕೆಜಿ 445 ಗ್ರಾಂ ಬೆಳ್ಳಿ, 5,00,000ರೂ. ನಗದು, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಒಟ್ಟು 87,48,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಕುಮಟೆ ಮೂಲದ, ಪ್ರಸ್ತುತ ನಗರದ ಅಪಾರ್ಟ್‌ಮೆಂಟ್ ನಿವಾಸಿ ವೈಭವ್ ಮೋಹನ ಘಾಟಗೆ ಎಂಬವರಿಗೆ ಸೇರಿದ ಮಾರುತಿ ವೀಥಿಕಾ ಬಳಿಯ ಉಪೇಂದ್ರ ಎಂಬ ಕಟ್ಟಡದ ನೆಲಮಹಡಿಯಲ್ಲಿ ರುವ ವೈಭವ ಗೋಲ್ಡ್ ಆ್ಯಂಡ್ ಸಿಲ್ವರ್ ಮೆಲ್ಟಿಂಗ್ ಮತ್ತು ರಿಫೈನರಿ ಅಂಗಡಿಗೆ ಸೆ.8ರಂದು ರಾತ್ರಿ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು, ರಿಫೈನರಿ ಮಷಿನ್‌ನಲ್ಲಿಟ್ಟಿದ್ದ 95,71,000ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸ್ ತಂಡ, ಆರೋಪಿಗಳನ್ನು ಸೆ.12ರಂದು ಮಹಾರಾಷ್ಟ್ರ ಸೋಲಾಪುರ ಜಿಲ್ಲೆಯ ಮಲ್ಶಿರೋಸ್ ತಾಲೂಕಿನ ನಿಮ್ಗಾಂವ್ ಎಂಬಲ್ಲಿ ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದೆ.

ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದಲ್ಲಿ ಎಸ್ಸೈ ಭರತೇಶ ಕಂಕಣ ವಾಡಿ, ಕಾಪು ಎಸ್ಸೈ ತೇಜಸ್ವಿ ಟಿ.ಐ., ಕೊಲ್ಲೂರು ಎಸ್ಸೈ ವಿನಯಕುಮಾರ್ ಕೆ., ಎಎಸ್ಸೈ ಹರೀಶ್, ಸಿಬ್ಬಂದಿ ಜೀವನ್ ಕುಮಾರ್, ಪ್ರಸನ್ನ ಕುಮಾರ್, ಸಂತೋಷ್ ಶೆಟ್ಟಿ, ಸಂತೋಷ್ ರಾಥೋಡ್, ಶಿವಕುಮಾರ್, ಹೇಮಂತ್ ಕುಮಾರ್, ಸುನೀಲ್ ರಾಥೋಡ್, ಮಣಿಪಾಲ್ ಠಾಣೆಯ ರವಿರಾಜ್, ಕೊಲ್ಲೂರು ಠಾಣೆಯ ನಾಗೇಂದ್ರ ಹಾಗೂ ಮಹಾರಾಷ್ಟ್ರ ರಾಜ್ಯದ ಅಕ್ಲುಜ್ ಪೋಲೀಸ್ ಠಾಣಾ ಸಿಬ್ಬಂದಿ ಎಸ್.ಆರ್.ಮಾದುಬಾವಿ, ವಿ.ಬಿ.ಘಾಟಗೆ, ವಿ.ಎ. ಸಾಟೆ ಅವರನ್ನೊಳ ಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X