Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ 73 BSNL ಟವರ್‌ಗಳಲ್ಲಿ...

ಉಡುಪಿ ಜಿಲ್ಲೆಯ 73 BSNL ಟವರ್‌ಗಳಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ!

ಬಿಎಸ್‌ಎನ್‌ಎಲ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ

ವಾರ್ತಾಭಾರತಿವಾರ್ತಾಭಾರತಿ17 April 2025 7:57 PM IST
share
ಉಡುಪಿ ಜಿಲ್ಲೆಯ 73 BSNL ಟವರ್‌ಗಳಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ!

ಕುಂದಾಪುರ, ಎ.17: ಉಡುಪಿ ಜಿಲ್ಲೆಯಲ್ಲಿ 196 ಬಿಎಸ್‌ಎನ್‌ಎಲ್ ಟವರ್‌ಗಳ ಪೈಕಿ 73ರಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ ಎಂಬ ಮಾಹಿತಿಯನ್ನು ಬಿಎಸ್‌ಎನ್‌ಎಲ್ ಅಧಿಕಾರಿಗಳು ಗುರುವಾರ ಕುಂದಾಪುರ ತಾಪಂ ಸಭಾಂಗಣ ದಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟವನ್ನು ಉತ್ತಮಗೊಳಿಸುವಿಕೆ ಹಾಗೂ ಸಲಹೆ ಸೂಚನೆಗಳ ಕುರಿತ ಸಭೆಯಲ್ಲಿ ನೀಡಿದ್ದಾರೆ.

ಬ್ಯಾಟರಿ ಬ್ಯಾಕಪ್ ಇಲ್ಲದೆ ಗುಡುಗು-ಮಿಂಚು ಬಂದಾಗ ಬ್ಯಾಟರಿ ದುಸ್ಥಿತಿಗೆ ತಲುಪುತ್ತದೆ. ಈಗಾಗಾಲೇ 10 ಬ್ಯಾಟರಿ ಬ್ಯಾಕಪ್ ಕೇಂದ್ರ ಸರಕಾರದ ಅನುದಾನದಿಂದ ಬಂದಿದ್ದು ಉಳಿದಿದ್ದಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ವಿದ್ಯುತ್ ಸಂಪರ್ಕ ಕಡಿತವಾದಾಗ ಬ್ಯಾಟರಿ, ಜನರೇಟರ್ ಸಂಪರ್ಕ ಗೊಳಿಸಲು ಗ್ರಾ.ಪಂ ಸಿಬ್ಬಂದಿ (ಪಂಪು ಚಾಲಕ) ನೇಮಕ ಸೂಕ್ತ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿದರು. ತುರ್ತು ಸಮಯಕ್ಕೆ ಅನುಕೂಲವಾಗುವಂತೆ ಪ್ರತಿ ಟವರ್ ಇರುವಲ್ಲಿ ಡಿ.ಜಿ. ಬ್ಯಾಟರಿ ನೀಡಲು ಹಾಗೂ ಗ್ರಾಪಂ ಒಂದಕ್ಕೆ ನಿರ್ವಹಣೆಗೆ ತಿಂಗಳಿಗೆ 3 ಸಾವಿರ ಹಣ ನೀಡಲು ನಿರ್ಧರಿಸಲಾಯಿತು.

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ವಾದರೆ ಬಿಎಸ್‌ಎನ್‌ಎಲ್ ಸಂಪರ್ಕ ಕಡಿತಗೊಳ್ಳುತ್ತದೆ. ಬ್ಯಾಟರಿ, ಜನರೇಟರ್ ಮೊದಲಾದ ಮೂಲ ಸೌಕರ್ಯ ಒದಗಿಸಿ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಮಡಾಮಕ್ಕಿ, ಅಮಾಸೆಬೈಲು ಬೊಳ್ಮೆನೆ ಮೊದಲಾದೆಡೆ ಹೊಸದಾಗಿ ಟವರ್ ನಿರ್ಮಿಸಿದ್ದು ಸರಿಯಾದ ನೆಟ್‌ವರ್ಕ್ ಇಲ್ಲದೆ ಜನರು ಪರದಾಡುತ್ತಿದ್ದಾರೆ ಎಂದು ದೂರಿದರು.

ಟವರ್ ಮಾಡುವುದರಿಂದ ಪ್ರಯೋಜನವಿಲ್ಲ. ಅದು ಜನರಿಗೆ ಅನುಕೂಲ ವಾಗುವ ರೀತಿ ಇರಬೇಕು. ಕುಂದಾಪುರದ ಬಿಎಸ್‌ಎನ್‌ಎಲ್ ಕಚೇರಿಗೆ ಯಾವ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂಬ ಆರೋಪವಿದೆ. ಅಧಿಕಾರಿ-ಸಿಬ್ಬಂದಿಗಳು ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಕಾರ್ಯ ನಿರ್ವಹಿಸ ಬೇಕು ಎಂದು ಅವರು ತಿಳಿಸಿದರು.

ಕ್ರಿಮಿನಲ್ ಕೇಸ್ ಎಚ್ಚರಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೆಲವು ಕಡೆ ಬಿಎಸ್‌ಎನ್‌ಎಲ್ ಸಂಸ್ಥೆಯಿಂದ ಹೊಸ ಟವರ್ ಮಾಡಿದರೂ ಕೂಡ ಸಮರ್ಪಕ ನೆಟ್‌ವರ್ಕ್ ಇಲ್ಲ ಎಂಬ ದೂರುಗಳು ಗ್ರಾಹಕರಿಂದ ಬರುತ್ತಿವೆ. ಕೇವಲ ಉತ್ತಮ ನೆಟ್‌ವರ್ಕ್ ನೀಡುತ್ತೇವೆ ಎಂದು ಪ್ರಚಾರ ಗಿಟ್ಟಿಸಿ ಕೊಂಡು ಏನು ಪ್ರಯೋಜನವಿಲ್ಲ. ಉತ್ತಮ ಸೇವೆ ನೀಡುವ ಮೂಲಕ ಇರುವ ಗ್ರಾಹಕರನ್ನು ಉಳಿಸಿ ಕೊಂಡು, ಸಂಸ್ಥೆ ಬೆಳೆಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಿ.ಎಸ್.ಎನ್.ಎಲ್.ಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಖಾಸಗಿಯ ವರಿಗಿಂತ ಉತ್ತಮ ಸೇವೆ ಕೊಟ್ಟರೆ ಗ್ರಾಹಕರನ್ನು ಉಳಿಸಿಕೊಳ್ಳುವುದಲ್ಲದೆ ಹೊಸ ಗ್ರಾಹಕರನ್ನು ಸೆಳೆಯಬಹುದು. ಟವರ್ ನಿರ್ಮಿಸಿ ಸಂಪರ್ಕ ಸಾಧಿಸಲು ಸಾಧ್ಯವಾಗದೆ ಇದ್ದು ಸುಮ್ಮನೆ ಕಾಟಾಚಾರದ ಕೆಲಸ ಮಾಡಿದರೆ ಸಂಬಂಧ ಪಟ್ಟವರ ಮೇಲೆ ಕ್ರಿಮಿನಿಲ್ ಕೇಸು ದಾಖಲಿಸಲು ಪತ್ರ ಬರೆಯಲಾಗುತ್ತದೆ. ಆಯಾಯ ಗ್ರಾಪಂಗಳ ಗ್ರಾಮಸಭೆ, ಸಾಮಾನ್ಯ ಸಭೆಗಳಿಗೆ ಖುದ್ದು ಬಿಎಸ್‌ಎನ್‌ಎಲ್ ಅಧಿಕಾರಿಗಳು ಹೋಗಬೇಕು. ಆ ಗ್ರಾಮದ ಜನರ ಸಮಸ್ಯೆ ಅರಿತು ಪರಿಹಾರ ನೀಡಲು ಸಾಧ್ಯ ಎಂದು ಅವರು ತಿಳಿಸಿದರು.

ಗೋಪಾಡಿ ಗ್ರಾಪಂ ಅಧ್ಯಕ್ಷ ಸ್ಥಳೀಯವಾಗಿರುವ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಬಗ್ಗೆ ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆ ಅಧ್ಯಕ್ಷ ಕೆ.ಮೋಹನದಾಸ್ ಶೆಣೈ, ಬಿಎಸ್‌ಎನ್‌ಎಲ್ ಪಿಜಿಎಂ ನವೀನ್ ಗುಪ್ತಾ, ಮುಖ್ಯಸ್ಥ ಜನಾರ್ದನ್, ಬಿಎಸ್‌ಎನ್‌ಎಲ್ ನಾಮನಿರ್ದೇಶಿತ ಸದಸ್ಯರಾದ ಪ್ರದೀಪ್ ಕೊಠಾರಿ, ಶೈಲೇಂದ್ರ ಶೆಟ್ಟಿ, ಗೋಪಾಲ ಕೃಷ್ಣ, ಸಂಸ್ಥೆಯ ವಿವಿಧ ವಿಭಾಗದ ಅಧಿಕಾರಿಗಳು, ಮೆಸ್ಕಾಂ ಸಂಬಂದಪಟ್ಟವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X