Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸುಂಟರಗಾಳಿ: ಕುಂದಾಪುರ ತಾಲೂಕಿನ 12 ಮನೆ,...

ಸುಂಟರಗಾಳಿ: ಕುಂದಾಪುರ ತಾಲೂಕಿನ 12 ಮನೆ, ತೋಟಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ3 Aug 2023 6:02 PM IST
share
ಸುಂಟರಗಾಳಿ: ಕುಂದಾಪುರ ತಾಲೂಕಿನ 12 ಮನೆ, ತೋಟಗಳಿಗೆ ಹಾನಿ

ಉಡುಪಿ, ಆ.3: ಬುಧವಾರ ಬೆಳಗಿನ ಜಾವ 74 ಉಳ್ಳೂರು, ಮಚ್ಚಟ್ಟು, ಹೊಸಂಗಡಿ, ಅಜ್ರಿ, ಶಂಕರನಾರಾಯಣ ಗ್ರಾಮ ಗಳ ಆಸುಪಾಸು ಬೀಸಿದ ಸುಂಟರಗಾಳಿಗೆ 12ಕ್ಕೂ ಅಧಿಕ ಮನೆಗಳಿಗೆ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದರೆ, 16ಕ್ಕೂ ಅಧಿಕ ಮಂದಿಯ ವಿವಿಧ ತೋಟಗಾರಿಕಾ ಬೆಳೆಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಗೆ ಬಂದಿರುವ ಅಧಿಕೃತ ಮಾಹಿತಿಗಳಿಂದ ತಿಳಿದುಬಂದಿದೆ.

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬೀಸಿದ ಈ ಸುಂಟರಗಾಳಿ ಸುಮಾರು ಐದು ಕಿ.ಮೀ. ವ್ಯಾಪ್ತಿಯಲ್ಲಿ ಹಾನಿ ಯನ್ನು ಮಾಡಿದೆ. ಇದರಲ್ಲಿ ಮನೆ, ತೋಟಗಾರಿಕಾ ಬೆಳೆ, ಜಾನುವಾರು ಕೊಟ್ಟಿಗೆ, ದಾಸ್ತಾನು ಕೊಟ್ಟಿಗೆ, ಕೃಷಿ ಬೆಳೆಯೂ ಸೇರಿವೆ. ಅಧಿಕೃತವಾಗಿ ಸಿಕ್ಕಿರುವ ಪ್ರಾಥಮಿಕ ಮಾಹಿತಿಗಳಂತೆ 20 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ.

ಗಾಳಿಯ ರಭಸಕ್ಕೆ ಹಲವಾರು ಮನೆಗಳ ಮೇಲ್ಚಾವಣಿ, ಸಿಮೆಂಟ್ ಸೀಟುಗಳು ಹಾರಿ ದೂರಹೋಗಿ ಬಿದ್ದಿವೆ. ಸಾವಿರಾರು ಅಡಿಕೆ, ಬಾಳೆ, ಗೇರು, ಹಲಸು ಹಾಗೂ ಮಾವಿನ ಮರಗಳು ಬುಡಸಹಿತ ಧರಾಶಾಹಿಯಾಗಿವೆ. ಒಂದೆರಡು ನಾಗಬನ ಗಳಿಗೂ ಹಾನಿಯಾದ ವರದಿಗಳಿವೆ.

74 ಉಳ್ಳೂರು ಗ್ರಾಮದ ಜಯಕರ ಶೆಟ್ಟಿ, ಪಾರ್ವತಿ ಶೆಡ್ತಿ, ಸುಮತಿ ಶೆಡ್ತಿ, ರತ್ನಾಕರ, ನೀಲು ಪೂಜಾರ್ತಿ, ಗಿರಿಜ, ಅಣ್ಣಪ್ಪ ಪೂಜಾರಿ, ಮೊಳಹಳ್ಳಿಯ ಪದ್ಮಾವತಿ, ಶಂಕರನಾರಾಯಣ ಗ್ರಾಮದ ಸುಬ್ಬ ನಾಯ್ಕ, ಹೊಸಂಗಡಿಯ ಪಾರ್ವತಿ, ಹಕ್ಲಾಡಿಯ ಚಿಕ್ಕು ಇವರ ವಾಸ್ತವ್ಯದ ಮನೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ಇದರೊಂದಿಗೆ 74 ಉಳ್ಳೂರು ಗ್ರಾಮದ ಜಯಕರ ಶೆಟ್ಟಿ, ಪಾರ್ವತಿ ಶೆಡ್ತಿ, ರಾಮ ನಾಯ್ಕ, ನಾರಾಯಣ ಶೆಟ್ಟಿ, ಸುಮತಿ ಶೆಡ್ತಿ, ರತ್ನಾಕರ ಶೆಟ್ಟಿ, ದಿವಾಕರ ಶೆಟ್ಟಿ, ಕಲಾವತಿ ಶೆಡ್ತಿ, ಶಂಕರ ಶೆಟ್ಟಿ, ಮಹಾಬಲ ನಾಯ್ಕ, ಉದಯ ಪೂಜಾರಿ, ವನಜಾ ಆಚಾರ್ತಿ, ಮಚ್ಚಟ್ಟು ಗ್ರಾಮದ ರತ್ನ, ಲಕ್ಷ್ಮೀನಾರಾಯಣ, ಕೃಷ್ಣ ಆಚಾರಿ, ಆಜ್ರಿ ಗ್ರಾಮದ ಮುಕಾಂಬು ಇವರ ತೋಟ ಗಾರಿಕಾ ಬೆಳೆಗಳಿಗೆ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ.

74 ಉಳ್ಳೂರು ಗ್ರಾಮದ ಪಾರ್ವತಿ ಶೆಡ್ತಿ ಇವರ ಮನೆಯ ಜಾನುವಾರು ಕೊಟ್ಟಿಗೆ ಹಾನಿ ಸಂಭವಿಸಿದೆ. ಉಳಿದಂತೆ ಕಾಪು ತಾಲೂಕು ತೆಂಕ ಗ್ರಾಮದ ರಮೇಶ್ ಸೇರಿಗಾರ್ ಎಂಬವರ ಮನೆಯ ಗೋಡೆ ಕುಸಿದು 1.5 ಲಕ್ಷ ರೂ. ನಷ್ಟ ಸಂಭವಿಸಿ ದ್ದರೆ, ಹೆಬ್ರಿ ತಾಲೂಕು ಚಾರಾದ ನಾರಾಯಣ ಶೆಟ್ಟಿ ಇವರ ಭತದ ಬೆಳೆಗೆ ಅಪಾರ ಹಾನಿ ಸಂಭವಿಸಿದೆ.

ಕಾರ್ಕಳ ಕುಕ್ಕಂದೂರು ಗ್ರಾಮದ ಜಯಂತಿ ಎಂಬವರ ಮನೆ ಮೇಲೆ ಮರ ಬಿದ್ದು 75,000ರೂ. ನಷ್ಟ ಸಂಭವಿಸಿದ್ದರೆ, ಹೆಬ್ರಿಯ ಕುಚ್ಚೂರು ಗ್ರಾಮದ ತಿಮ್ಮಪ್ಪ ಆಚಾರಿ ಇವರ ಮನೆ ಗಾಳಿ-ಮಳೆಗೆ ಸಂಪೂರ್ಣ ಕುಸಿದಿದ್ದು ಮೂರು ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.

10.2ಮಿ.ಮೀ. ಮಳೆ: ಜಿಲ್ಲೆಯಲ್ಲಿ ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯ ಗೊಂಡಂತೆ ಸರಾಸರಿ 10.2ಮಿ.ಮೀ. ಮಳೆ ಯಾಗಿದೆ. ಉಡುಪಿಯಲ್ಲಿ 3.3, ಬ್ರಹ್ಮಾವರ 5.2, ಕಾಪು 1.9, ಕುಂದಾಪುರ 15.7, ಬೈಂದೂರು 14.7, ಕಾರ್ಕಳ 6.9 ಹಾಗೂ ಹೆಬ್ರಿಯಲ್ಲಿ 12.4ಮಿ.ಮೀ. ಮಳೆಯಾದ ವರದಿ ಬಂದಿದೆ.

ಬಿರುಗಾಳಿಯ ಎಚ್ಚರಿಕೆ: ಉಡುಪಿ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ನಾಳೆಯವರೆಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದುದರಿಂದ ಸಾರ್ವಜನಿಕರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ, ಹಳ್ಳ-ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X