Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ರಾತ್ರಿಯ ಶುಭ್ರಾಕಾಶದಲ್ಲಿ...

ಉಡುಪಿ: ರಾತ್ರಿಯ ಶುಭ್ರಾಕಾಶದಲ್ಲಿ ಉಲ್ಕೆಗಳ ವರ್ಷಧಾರೆ

ವಾರ್ತಾಭಾರತಿವಾರ್ತಾಭಾರತಿ14 Dec 2023 7:29 PM IST
share
ಉಡುಪಿ: ರಾತ್ರಿಯ ಶುಭ್ರಾಕಾಶದಲ್ಲಿ ಉಲ್ಕೆಗಳ ವರ್ಷಧಾರೆ

ಉಡುಪಿ, ಡಿ.14: ಪ್ರತೀ ವರ್ಷ ಡಿಸೆಂಬರ್ ತಿಂಗಳ ಮಧ್ಯ ಭಾಗದಲ್ಲಿ ಗೋಚರಿಸುವ ಮಿಥುನ ರಾಶಿಯಿಂದ ಚಿಮ್ಮುವ ಜೆಮಿನಿಡ್ ಉಲ್ಕಾಪಾತ ಇಂದು ಮತ್ತು ನಾಳೆ ಎರಡು ದಿನ ಮಧ್ಯರಾತ್ರಿಯಿಂದ ವಿಜೃಂಭಿಸಲಿದೆ.

ವರ್ಷದಲ್ಲಿ ಸುಮಾರು 22 ಉಲ್ಕಾಪಾತಗಳು ಸಂಭವಿಸುವವಾದರೂ ಎಲ್ಲವೂ ಚೆನ್ನಾಗಿರುವುದಿಲ್ಲ. ಉಲ್ಕೆಗಳ ಸಂಖ್ಯೆ ಹೆಚ್ಚೇನೂ ಇರುವುದಿಲ್ಲ. ಆದರೆ ಗುರುವಾರ ಮತ್ತು ಶುಕ್ರವಾರಗಳಂದು ಗಂಟೆಗೆ ಸುಮಾರು ನೂರಕ್ಕಿಂತಲೂ ಅಧಿಕ ಬಣ್ಣಬಣ್ಣದ ಉಲ್ಕೆಗಳನ್ನು ಆಕಾಶದಿಂದ ಕೆಳಗೆ ಉದುರುವುದನ್ನು ನೋಡಿ ಆನಂದಿಸಬಹುದು ಎಂದು ಖ್ಯಾತ ಖಭೌತ ವಿಜ್ಞಾನಿ ಹಾಗೂ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎ.ಪಿ. ಭಟ್ ತಿಳಿಸಿದ್ದಾರೆ.

ಈ ಉಲ್ಕೆಗಳಲ್ಲಿ ಹೆಚ್ಚಿನವು ಸೂರ್ಯನ ಸುತ್ತ ಸುತ್ತುವ ಧೂಮಕೇತುಗಳ ಧೂಳು. ಆದರೆ ಇಂದಿನ ಜೆಮಿನಿಡ್ ಹಾಗಲ್ಲ. ಇದೊಂದು ದೀರ್ಘ ವೃತ್ತಾಕಾರದಲ್ಲಿ ಸೂರ್ಯನನ್ನು ಸುತ್ತುವ ಸುಮಾರು 6 ಕಿಮೀ ಗಾತ್ರದ ಕಲ್ಲುಂಡೆಯ, 3200 ಪೇಥಾನ್ ಅಸ್ಟೆರೊಯ್ಡ್‌ನ ಧೂಳು.

ರಾತ್ರಿ ಸುಮಾರು 1 ಗಂಟೆಗೆ ನಡು ನೆತ್ತಿಗೆ ಬರುವ ಮಿಥುನ ರಾಶಿಯಿಂದ ಗಂಟೆಗೆ 120 ಉಲ್ಕೆಗಳನ್ನು ಗುರುತಿಸಬಹು ದೆಂದು ಅಂದಾಜಿಸಲಾಗಿದೆ. ಬೇರೆಲ್ಲಾ ಉಲ್ಕಾಪಾತಗಳಿಗಿಂತ ಇದು ವಿಭಿನ್ನ. ಇಂದು ಎಲ್ಲಾ ಬಣ್ಣಗಳ ಉಲ್ಕೆಗಳನ್ನೂ ನೋಡಬಹುದು. ಬಿಳಿ, ಕೆಂಪು, ಹಳದಿ, ಹಸಿರು ಹಾಗೂ ನೀಲಿ.

ಆಕಾಶದಿಂದ ಕೆಳಕ್ಕೆ ಬೀಳುವಾಗ ನಮ್ಮ ಮೇಲೆಯೇ ಬಿತ್ತು ಅಂತ ಅನಿಸುವ ಈ ಉಲ್ಕಾಪಾತಗಳು ಹಾಗೇನೂ ಅಲ್ಲ. ಭೂಮಿಯ ವಾತಾವರಣದಿಂದಾಗಿ ಸುಮಾರು 60- 70 ಕಿಮಿ ಎತ್ತರದ ಆಕಾಶದಲ್ಲೇ ಈ ಧೂಳಿನ ಕಣಗಳು ಘರ್ಷಣೆಯಿಂದ ಉರಿದು ಹೋಗುತ್ತವೆ.

ಮಿಥುನ ರಾಶಿಯೇ ನೋಡಲು ಚೆಂದ. ಮಹಾವ್ಯಾಧ ನಕ್ಷತ್ರ ಪುಂಜವೇ ಚೆಂದ. ಅದರ ಪಕ್ಕ ಇರುವ ಪುನರ್ವಸು ನಕ್ಷತ್ರ ನೋಡಲು ಇನ್ನೂ ಚೆಂದ. ಅದರಲ್ಲೂ ಇದೀಗ ಸಿಡಿಯಬಹುದಾದ ಬೃಹತ್ ಆರ್ದ್ರಾ ನಕ್ಷತ್ರ, ರೆಡ್ ಸೂಪರ್ ಜಯಂಟ್.

ಆಕಾಶವೀಕ್ಷಣೆಯ ಹವ್ಯಾಸ ಉಳ್ಳ ಆಸಕ್ತ ಖಗೋಳಶಾಸ್ತ್ರಜ್ಞರಿಗೆ ಎರಡು ದಿನ ಆಕಾಶವನ್ನು ಗಮನಿಸಲು ಒಳ್ಳೆಯ ಅವಕಾಶ. ಆಕಾಶಕಾಯಗಳೊಂದಿಗೆ ಎರಡು ದಿನ ಆಕಾಶದ ಈ ಉಲ್ಕಾಪಾತದ ದುರುಸಿನ ಆಟವನ್ನು ನೋಡಿ ಖುಷಿ ಪಡುವಂತೆ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X