Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾಡಳಿತದಿಂದ ‘ಉಡುಪಿ ಫುಲ್...

ಉಡುಪಿ ಜಿಲ್ಲಾಡಳಿತದಿಂದ ‘ಉಡುಪಿ ಫುಲ್ ಮ್ಯಾರಥಾನ್’

ವಾರ್ತಾಭಾರತಿವಾರ್ತಾಭಾರತಿ24 Nov 2025 11:09 PM IST
share
ಉಡುಪಿ ಜಿಲ್ಲಾಡಳಿತದಿಂದ ‘ಉಡುಪಿ ಫುಲ್ ಮ್ಯಾರಥಾನ್’

ಮಣಿಪಾಲ: ಉಡುಪಿ ಜಿಲ್ಲಾಡಳಿತ ಇದೇ ಮೊದಲ ಬಾರಿ ಮ್ಯಾರಥಾನ್ ಸ್ಪರ್ಧೆಯನ್ನು ಸಂಘಟಿಸಲು ಮುಂದಾಗಿದ್ದು, ಇದು ಮುಂದೆ ಪ್ರತಿವರ್ಷ ನಿರ್ದಿಷ್ಟ ದಿನದಂದು ನಡೆಯುವಂತೆ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಬೆಂಗಳೂರಿನ ಕ್ರೀಡಾ ಸಂಘಟಕ ಸಂಸ್ಥೆ ಎನ್‌ಇಬಿಯ ಸಹಯೋಗದೊಂದಿಗೆ ಈ ಫುಲ್ ಮ್ಯಾರಥಾನ್ ಮುಂದಿನ ವರ್ಷದ ಜನವರಿ 11ರ ರವಿವಾರ ನಡೆಯಲಿದೆ. ಮುಂದೆ ಪ್ರತಿವರ್ಷ ಜನವರಿ ತಿಂಗಳ ಎರಡನೇ ರವಿವಾರದಂದು ಇದು ನಡೆಯಲಿದೆ ಎಂದವರು ಅವರು ಹೇಳಿದರು.

‘ಉಡುಪಿ ಫುಲ್ ಮ್ಯಾರಥಾನ್’ ಎಂದು ಕರೆಯಲಾಗುವ ಈ ಸ್ಪರ್ಧೆಯಲ್ಲಿ 42.195ಕಿ.ಮೀ.ನ ಫುಲ್ ಮ್ಯಾರಥಾನ್, 21.097 ಕಿ.ಮೀ.ನ ಹಾಫ್ ಮ್ಯಾರಥಾನ್, 10ಕಿ.ಮೀ. ಹಾಗೂ 5ಕಿ.ಮೀ.ನ ಮ್ಯಾರಥಾನ್ ಸ್ಪರ್ಧೆಗಳು ನಡೆಯಲಿದ್ದು, ಎಲ್ಲಾ ವಯೋಮಾನದ, ದೈಹಿಕವಾಗಿ ಸಮರ್ಥರಿರುವ ಪ್ರತಿಯೊಬ್ಬರು ಇದರಲ್ಲಿ ಭಾಗವಹಿಸಬಹುದು ಎಂದರು.

ಜಿಲ್ಲಾಡಳಿತದ ವತಿಯಿಂದ ಈ ಮ್ಯಾರಥಾನ್ ನಡೆಯಲಿದೆ. ದೇಶದ ಪ್ರಮುಖ ಕ್ರೀಡಾ ಸಂಘಟಕ ಸಂಸ್ಥೆ ಎನ್‌ಇಬಿ ಸ್ಪೋರ್ಟ್ಸ್ ಸ್ಪರ್ಧೆಯನ್ನು ಸಂಘಟಿಸಲಿದೆ ಎಂದ ಜಿಲ್ಲಾದಿಕಾರಿಗಳು, ಉಡುಪಿ ಫುಲ್ ಮ್ಯಾರಥಾನ್‌ನ ಲೋಗೊವನ್ನು ಬಿಡುಗಡೆಗೊಳಿಸಿದರು.

ಎನ್‌ಇಬಿಯ ಸ್ಪರ್ಧಾ ನಿರ್ದೇಶಕ ನಾಗರಾಜ್ ಅಡಿಗ ಮಾತನಾಡಿ, ತಮ್ಮ ಸಂಸ್ಥೆ ದೇಶದ 22 ನಗರಗಳಲ್ಲಿ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿ ಸುತ್ತಿದೆ. ತನ್ನ ಹುಟ್ಟೂರಿನಲ್ಲಿ ಇದೇ ಮೊದಲ ಬಾರಿ ಸ್ಪರ್ಧೆಯನ್ನು ಸಂಘಟಿಸುವ ಅವಕಾಶ ಸಿಕ್ಕಿದೆ ಎಂದರಲ್ಲದೇ ಮೊದಲ ವರ್ಷದ ಮ್ಯಾರಥಾನ್‌ನಲ್ಲಿ 6ರಿಂದ 7ಸಾವಿರ ಮಂದಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಮುಂದಿನ ವರ್ಷಗಳಲ್ಲಿ ಕನಿಷ್ಠ 10ಸಾವಿರ ಮಂದಿ ಪಾಲ್ಗೊಳ್ಳುವಂತೆ ನೋಡಲಾಗುವುದು. ತಮ್ಮ ಸಂಸ್ಥೆ ಈ ಮ್ಯಾರಥಾನ್‌ನ್ನು ಸಂಪೂರ್ಣವಾಗಿ ವೃತ್ತಿಪರವಾಗಿ ಸಂಘಟಿಸಲಿದೆ ಎಂದರು.

ಮುಂದಿನ ಜ.11ರಂದು ನಡೆಯುವ ಮೊದಲ ಫುಲ್ ಮ್ಯಾರಥಾನ್‌ನಲ್ಲಿ ಒಟ್ಟು 10 ಲಕ್ಷ ರೂ. ಬಹುಮಾನವಿದ್ದು, ಹೊಸ ರಾಷ್ಟ್ರೀಯ ದಾಖಲೆಯನ್ನು ಬರೆಯುವ ಪುರುಷ ಅಥವಾ ಮಹಿಳಾ ಮ್ಯಾರಥಾನ್‌ಪಟುವಿಗೆ 2.5 ಲಕ್ಷ ರೂ. ಬಂಪರ್ ಬಹುಮಾನ ಮೊತ್ತವನ್ನು ನೀಡಲಾಗುವುದು ಎಂದರು.

ಮ್ಯಾರಥಾನ್‌ನಲ್ಲಿ ಮುಕ್ತ, 18ರಿಂದ 35ವರ್ಷ, 35ರಿಂದ 45ವರ್ಷ, 45ರಿಂದ 55ವರ್ಷ ಹಾಗೂ 55+ ವರ್ಷದವರಿಗೆ ಪ್ರತ್ಯೇಕ ವಿಭಾಗಗಳಿವೆ. ಫುಲ್ ಮ್ಯಾರಥಾನ್ ಗೆಲ್ಲುವ ಪುರುಷ ಮತ್ತು ಮಹಿಳಾ ಅತ್ಲೀಟ್‌ಗೆ 20,000 ರೂ.ನಗದು ಬಹುಮಾನವಿದೆ. ಹಾಫ್ ಮ್ಯಾರಥಾನ್ ವಿಜೇತರಿಗೆ 10ಸಾವಿರ ಹಾಗೂ 10ಕಿ.ಮೀ. ವಿಜೇತರಿಗೆ 5,000ರೂ. ನಗದು ಬಹುಮಾನವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಎಡಿಸಿ ಅಬಿದ್ ಗದ್ಯಾಳ್, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಕ್ರೀಡಾಧಿಕಾರಿ ಡಾ.ರೋಶನ್‌ಕುಮಾರ್ ಶೆಟ್ಟಿ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X