Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲೆಕುಡಿಯ ಜನಾಂಗದ ಸಮಸ್ಯೆ ಆಲಿಸಿದ ಉಡುಪಿ...

ಮಲೆಕುಡಿಯ ಜನಾಂಗದ ಸಮಸ್ಯೆ ಆಲಿಸಿದ ಉಡುಪಿ ಜಿಲ್ಲಾಧಿಕಾರಿ, ಸಿಇಓ

ಪಶ್ಚಿಮ ಘಟ್ಟ ತಪ್ಪಲಿನ ಕಾಡಿನ ಮಧ್ಯೆ ಓಡಾಡಿದ ಸರಕಾರಿ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ9 Oct 2023 8:26 PM IST
share
ಮಲೆಕುಡಿಯ ಜನಾಂಗದ ಸಮಸ್ಯೆ ಆಲಿಸಿದ ಉಡುಪಿ ಜಿಲ್ಲಾಧಿಕಾರಿ, ಸಿಇಓ

ಉಡುಪಿ: ಹೆಬ್ರಿ ತಾಲೂಕು ನಾಡ್ಪಾಲು ಗ್ರಾಮ ಪಂಚಾಯಿತ್ ವ್ಯಾಪ್ತಿಯಲ್ಲಿ ಬರುವ ಪಶ್ಚಿಮ ಘಟ್ಟದ ತಪ್ಪಲಿನ ಕಾಡಿನ ಅಂಚಿನಲ್ಲಿ ಬಹುತೇಕ ಸಮಾಜದ ಕಟ್ಟ ಕಡೆಯ, ಜನವಸತಿಯ ಕೊನೆಯ ಪ್ರದೇಶದಲ್ಲಿ ನೆಲೆಸಿರುವ ಮಲೆಕುಡಿಯ ಕುಟುಂಬಗಳನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಖುದ್ದಾಗಿ ಭೇಟಿ ಮಾಡಿ ಮಾತನಾಡಿಸಿದರು.

ನಗರ ಪ್ರದೇಶದಿಂದ ಬಹುದೂರ, ಅರಣ್ಯದ ಅತ್ಯಂತ ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 3ರಿಂದ 4 ಕಿ.ಮೀ ಕಾಡಿನ ಕಚ್ಛಾ ದಾರಿಯಲ್ಲಿ ಗುಡ್ಡಗಳನ್ನ ಹತ್ತಿ ಇಳಿದು ನದಿ, ಕೊಳ್ಳಗಳನ್ನು ದಾಟಿ ನಡೆದು ಕುಗ್ರಾಮಕ್ಕೆ ಡಿಸಿ ಅವರು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಹಾಗೂ ಇತರ ಸರಕಾರಿ ಅಧಿಕಾರಿಗಳ ತಂಡ ದೊಂದಿಗೆ ಭೇಟಿ ನೀಡಿದರು.

ಹಲವು ವರ್ಷಗಳಿಂದ ಆಧುನಿಕ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಮಲೆಕುಡಿಯ ಮೂಲ ಆದಿನಿವಾಸಿ ಗಳೊಂದಿಗೆ ಜಿಲ್ಲಾಧಿಕಾರಿ ಗಳು ಚರ್ಚಿಸಿ, ಅವರ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿ, ಬುಡಕಟ್ಟು ಜನಾಂಗದವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ಭರವಸೆ ನೀಡಿದರು.

ಪಶ್ಚಿಮ ಘಟ್ಟಗಳ ಅಂಚಿನ ಕಾಡಿನ ತೆಂಗಮಾರು ಗ್ರಾಮದಲ್ಲಿ ವಾಸವಾಗಿರುವ ನಾರಾಯಣ ಗೌಡ ಅವರನ್ನು ಸಂಪರ್ಕಿಸಿ, ಅವರ ವಾಸ ಮಾಡುವ ಮನೆಯನ್ನು ವೀಕ್ಷಿಸಿದ ಡಿಸಿ, ಸರಕಾರದ ಸೌಲಭ್ಯಗಳು ಇಲ್ಲಿಗೆ ತಲುಪುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡರು. ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಮನೆಯನ್ನು ನಿರ್ಮಿಸಿ ಕೊಡಲು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ತಿಂಗಳಮಕ್ಕಿ ಗ್ರಾಮದಲ್ಲಿ ವಾಸವಿರುವ ವಿಕಲಚೇತನ ಲಕ್ಷಣಗೌಡ ಅವರನ್ನು ಭೇಟಿ ಮಾಡಿ, ಅಂಗವಿಕಲ ಪಿಂಚಣಿ ಪ್ರತಿ ತಿಂಗಳು ತಲುಪುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ಸರ್ಕಾರದಿಂದ ಬುಡಕಟ್ಟು ಜನರಿಗೆ ವಿಶೇಷವಾಗಿ ನೀಡುತ್ತಿರುವ ಆಹಾರ ಸಾಮಗ್ರಿಗಳ ಪೂರೈಕೆ ಬಗ್ಗೆ ಸಹ ಮಾಹಿತಿ ಪಡೆದು, ಮನೆಯ ದುರಸ್ತಿಗೆ ಅನುದಾನ ಒದಗಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ವಿದ್ಯುತ್ ಟರ್ಬೈನ್‌ಗೆ ಚಾಲನೆ: ದಶಕಗಳಿಂದ ವಿದ್ಯುತ್ ಸಂಪರ್ಕ ಹೊಂದದೇ ಇರುವ ಪೀತಾಬೈಲು ಗ್ರಾಮದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸಮೀಪದಲ್ಲಿ ಹರಿಯುವ ಜಲ ಮೂಲವನ್ನು ಬಳಸಿಕೊಂಡು ಕಿರು ಜಲ ವಿದ್ಯುತ್ ಯೋಜ ನೆಯ ಟರ್ಬೈನಿಗೆ ಚಾಲನೆ ನೀಡಿ, ನೀರಿನ ಮೂಲವನ್ನು ವೀಕ್ಷಿಸಲು ತೆರಳುವಾಗ ಆಯತಪ್ಪಿದರೂ ಎದೆಗುಂದರೆ ಛಲ ದಿಂದ ಗುಡ್ಡವನ್ನು ಹತ್ತಿ, ಕಿರು ಜಲ ವಿದ್ಯುತ್ ಯೋಜನೆಯ ನೀರಿನ ಸೆಲೆಯನ್ನು ವೀಕ್ಷಿಸಿ, ಟರ್ಬೈನ್ ಉನ್ನತೀಕರಣ ಗೊಳಿಸಲು ಸೂಚನೆ ನೀಡಿದರು.

ಶಿಕ್ಷಣಕ್ಕೆ ವ್ಯವಸ್ಥೆ: ಕಾಡಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಅವರಿಗೆ ಸೂಕ್ತ ಶಿಕ್ಷಣ ಸಿಗಬೇಕು, ಕಾಡಿನಲ್ಲಿಯೇ ಬೆಳೆದ ಅವರು ಅರಣ್ಯ ಇಲಾಖೆಯ ನೌಕರರಾದರೆ ಅರಣ್ಯ ರಕ್ಷಣೆಗೆ ಮುಂದಾಗುತ್ತಾರೆ ಅಥವಾ ಇತರೆ ಕ್ಷೇತ್ರದಲ್ಲಿ ಅವರು ಕಾರ್ಯನಿರ್ವಹಿಸಿಲು ಇಚ್ಛೆ ಇದ್ದರೆ ಅದಕ್ಕನುಗುಣವಾಗಿ ಶಿಕ್ಷಣ ನೀಡಲಾಗುವುದು ಎಂದು ಡಾ.ವಿದ್ಯಾಕುಮಾರಿ, ಪೀತಬೈ ಲಿನ ನಾರಾಯಣ ಗೌಡರ ಮಗಳು ಪ್ರಮೀಳಾ ಪಿಯುಸಿ ವ್ಯಾಸಂಗ ಮುಗಿಸಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ ವಿಷಯ ತಿಳಿದು, ವಿದ್ಯಾಭ್ಯಾಸವನ್ನು ಮುಂದುವರಿಸಲು ಮನವೊಲಿಸಿದರು. ಆಕೆಗೆ ಬನ್ನಂಜೆಯ ವಿದ್ಯಾರ್ಥಿ ನಿಲಯದಲ್ಲಿ ತಂಗಲು ಹಾಗೂ ನರ್ಸಿಂಗ್ ವಿದ್ಯಾಭ್ಯಾಸ ಮಾಡಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಕುಡಿಯುವ ನೀರಿಗೆ ವ್ಯವಸ್ಥೆ: ತಿಂಗಳಮಕ್ಕಿ ಗ್ರಾಮ ವ್ಯಾಪ್ತಿಯ ಪೀತಬೈಲು ಗ್ರಾಮ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗಾಗಿ ಸ್ಥಳೀಯವಾಗಿ ಎತ್ತರ, ಗುಡ್ಡ ಪ್ರದೇಶದಿಂದ ಹರಿಯುವ ನೀರಿನ ತೊರೆಯಿಂದ 1.50 ಲಕ್ಷ ರೂ. ವೆಚ್ಚದಲ್ಲಿ ನೀರಿನ ಪೈಪ್ ಲೈನ್ ಅಳವಡಿಸಿ, ದಿನದ 24 ಗಂಟೆ ನಳ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಇದಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ನಳವನ್ನು ತಿರುಗಿಸುವ ಮೂಲಕ ಚಾಲನೆ ನೀಡಿದರು. ಇದರಿಂದ ಸ್ಥಳೀಯ ನಿವಾಸಿಗಳಿಗೆ ತಮ್ಮ ಮನೆಯ ಅಂಗಳದಲ್ಲಿಯೇ ನೀರಿನ ವ್ಯವಸ್ಥೆ ಕಲ್ಪಿಸಿದಂತಾಗಿದೆ.

ದುಡಿಯುವ ಕೈಗಳಿಗೆ ಕೆಲಸ ಖಾತ್ರಿಪಡಿಸುವ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಕಾರ್ಡ್‌ನ್ನು ಸ್ಥಳಿಯರಿಗೆ ವಿತರಿಸಿ, ಉದ್ಯೋಗ ಖಾತ್ರಿ ಯೋಜನೆಯಡಿ ತಮ್ಮ ಗ್ರಾಮಗಳಿಗೆ ಕೈಗೊಳ್ಳಬಹುದಾದ ಸಮುದಾಯ ಕಾಮಗಾರಿಗಳ ಬಗ್ಗೆ ಹಾಗೂ ವೈಯಕ್ತಿಕ ಕಾಮಗಾರಿಗಳಾದ ರಸ್ತೆ ನಿರ್ಮಾಣ, ದನದ ಕೊಟ್ಟಿಗೆ, ಬಚ್ಚಲ ಗುಂಡಿ, ಅಡಿಕೆ ತೆಂಗು ತೋಟಗಳ ರಚನೆ, ಹಣ್ಣು ತೋಟಗಳ ರಚನೆ, ಕಾಲು ಸಂಕಗಳ ನಿರ್ಮಾಣ, ಜಮೀನುಗಳ ಬದು ನಿರ್ಮಾಣ, ಸೇರಿದಂತೆ ವಿವಿಧ ಶಾಶ್ವತ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಶೌಚಾಲಯ ನಿರ್ಮಿಸಿಕೊಳ್ಳಿ: ಇಲ್ಲಿನ ಜನರು ವೈಯಕ್ತಿಕ ಶೌಚಾಲಯವನ್ನು ನಿರ್ಮಿಸಿಕೊಳ್ಳದೆ ಇರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸಿಇಓ ಪ್ರಸನ್ನ ಹೆಚ್, ಶೌಚಾಲಯ ನಿರ್ಮಾಣಕ್ಕೆ ಪಂಚಾಯಿತಿಯ ಮೂಲಕ ಅರ್ಜಿ ಸಲ್ಲಿಸಿ, ಅನುದಾನ ಪಡೆದು ಶೌಚಾಲಯ ನಿರ್ಮಾಣ ಮಾಡಿಸಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಾಲ್ಪಾಡು ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ದೂದ್‌ಪೀರ್, ಹೆಬ್ರಿ ತಾಲೂಕು ತಹಶೀಲ್ದಾರ್ ಪುರಂದರ, ಪಿಡಿಓ ಶೀತಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸದಾನಂದ, ಇಂಜಿನಿಯರ್ ಮಧುಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸುರಿಯುವ ಮಳೆ ಯಲ್ಲಿಯೇ 3 ಕಿ.ಮೀ ನಡೆದು ಪಶ್ಚಿಮ ಘಟ್ಟಗಳ ಕಾಡಿನ ಅಂಚಿನಲ್ಲಿ ವಾಸಿಸುವ ಮಲೆಕುಡಿಯ ಜನಾಂಗದವರ ಸಮಸ್ಯೆ ಗಳನ್ನು ತಾಳ್ಮೆಯಿಂದ ಆಲಿಸಿ, ಅವರುಗಳಿಗೆ ಏನೆಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಪರಿಶೀಲಿ ಸಿದ್ದು, ಅಧಿಕಾರಿಗಳ ಈ ನಡೆ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಮಾರ್ಗಸೂಚಕ ಕೆಳಗೆ ಬಿದ್ದರೂ......

ಪೀತಬೈಲು ಗ್ರಾಮಕ್ಕೆ ಭೇಟಿ ನೀಡಲು ಕಾಡಿನ ಕಚ್ಛಾ ರಸ್ತೆಯಲ್ಲಿ ನಡೆದು ಕಾಲು ಸಂಕದ ಮೂಲಕ ದಾಟಲು ಮುಂದಾ ದಾಗ, ಕೆಲವೇ ಕ್ಷಣದ ಮುಂದೆ ಜಿಲ್ಲಾಧಿಕಾರಿಗಳಿಗೆ ಮಾರ್ಗಸೂಚಕರಾಗಿ ನಡೆಯುತ್ತಿದ್ದ ಎಎನ್‌ಎಫ್‌ನ ಸಿಬ್ಬಂದಿ ಆಯತಪ್ಪಿ, ಕಾಲುಸಂಕದ ಮೇಲಿಂದ ಕೆಳಗೆ ಬೀಳುವುದನ್ನು ಕಣ್ಣಾರೆ ಕಂಡರೂ, ಅದೇ ಕಾಲುಸಂಕದ ಮೇಲೆ ನಡೆದು ಮುಂದೆ ಸಾಗಿದ್ದು ವಿಶೇಷವಾಗಿತ್ತು.

ಇದೇ ಸಂದರ್ಭದಲ್ಲಿ ನಿರ್ಮಾಣದ ಹಂತದಲ್ಲಿದ್ದ ಕಿಂಡಿ ಅಣೆಕಟ್ಟು ಒಳಗೊಂಡ ಸೇತುವೆಯ ಕಾಮಗಾರಿಯನ್ನು ವೀಕ್ಷಿಸಿ, ಸ್ಥಳೀಯ ವಾಸಿಗಳಿಗೆ ಈ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ನೀಡಿದರು.

















share
ವಾರ್ತಾಭಾರತಿ
ವಾರ್ತಾಭಾರತಿ
Next Story
X