ಉಡುಪಿ | ಪ್ರಧಾನಿ ಭೇಟಿಯ ಹಿನ್ನೆಲೆ : ವಾಹನಗಳ ಪಾರ್ಕಿಂಗ್ಗೆ ಸ್ಥಳಗಳ ನಿಗದಿ

ಸಾಂದರ್ಭಿಕ ಚಿತ್ರ PC | GROK
ಉಡುಪಿ, ನ.26: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳ ಅಡಿಯಲ್ಲಿ ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಅಪರಾಹ್ನ 3 ಗಂಟೆಯ ವರೆಗೆ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧಿಸಿ ಮತ್ತು ಬದಲಿ ಮಾರ್ಗದಲ್ಲಿ ಸಂಚರಿಸುವ ಕುರಿತು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಕಾರ್ಯಕ್ರಮಕ್ಕೆ ಬರುವ ವಾಹನಗಳು:
► ಕುಂದಾಪುರದಿಂದ ಬರುವ ವಾಹನಗಳು ಸಿಲಾಸ್ ಶಾಲೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಬೇಕು. ಕುಂದಾಪುರದಿಂದ ಬರುವ ವಾಹನಗಳು ಗುಂಡಿಬೈಲು ಹತ್ತಿರ ಜನರನ್ನು ಇಳಿಸಿ ಯು ಟರ್ನ್ ಆಗಿ ಎಂಜಿಎಂ ಮೈದಾನಕ್ಕೆ ಹೋಗಬೇಕು.
► ಕಾರ್ಕಳ ಬೆಳ್ವೆ ಮಾರ್ಗವಾಗಿ ಉಡುಪಿಗೆ ಬರುವ ವಾಹನಗಳು ಕ್ರಿಶ್ಚಿಯನ್ ಹೈಸ್ಕೂಲ್, ಪಿಯು ಕಾಲೇಜ್ ಮತ್ತು ಬೈಲೂರು ಮುದ್ದಣ ಎಸ್ಟೇಟ್ನಲ್ಲಿ ಪಾರ್ಕ್ ಮಾಡಿ ರೋಡ್ ಶೋಗೆ ತೆರಳಬೇಕು.
► ಮಂಗಳೂರು ಕಡೆಯಿಂದ ರೋಡ್ ಶೋಗೆ ಬರುವ ವಾಹನಗಳು ಬೈಲೂರು ಮುದ್ದಣ್ಣ ಎಸ್ಟೇಟ್ನಲ್ಲಿ ಪಾರ್ಕ್ ಮಾಡಬೇಕು.
► ಮಲ್ಪೆ ಕಡೆಯಿಂದ ರೋಡ್ ಶೋ ಗೆ ಬರುವ ವಾಹನಗಳು ಶಾಮಿಲಿ ಎದುರು ಗ್ರೌಂಡ್ನಲ್ಲಿ ಪಾರ್ಕ್ ಮಾಡಬೇಕು.
► ಕಾರ್ಕಳ ಹೆಬ್ರಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ಶಾರದಾ ಕಲ್ಯಾಣ ಮಂಟಪ ಮಾರ್ಗವಾಗಿ ಬೀಡಿನಗುಡ್ಡೆಯಲ್ಲಿ ಪಾರ್ಕ್ ಮಾಡಬೇಕು.
► ಮಲ್ಪೆ ಕಡೆಯಿಂದ ರೋಡ್ ಶೋಗೆ ಬರುವ ಜನರು ವಾಹನಗಳನ್ನು ವಿವೇಕಾನಂದ ಸ್ಕೂಲ್ ಪಾರ್ಕಿಂಗ್ನಲ್ಲಿ ಪಾರ್ಕ್ ಮಾಡಬೇಕು.
ಬಸ್ಸುಗಳು ಮತ್ತು ಕಾರುಗಳು :
► ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳು ಉಡುಪಿ ಬಸ್ನಿಲ್ದಾಣಕ್ಕೆ ಬರುವಂತಿಲ್ಲ. ಅವುಗಳು ನೇರವಾಗಿ ಅಂಬಾಗಿಲು ಮಾರ್ಗವಾಗಿ ಮಣಿಪಾಲ ಅಲೆವೂರು ಮಾರ್ಗವಾಗಿ ಕೊರಂಗ್ರಪಾಡಿ ಮಾರ್ಗವಾಗಿ ಬಲೈಪಾದೆಯಾಗಿ ಚಲಿಸಬೇಕು.
► ಮಲ್ಪೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪಡುಕೆರೆ ಪಿತ್ರೋಡಿ, ಉದ್ಯಾವರ ಮಾರ್ಗವಾಗಿ ಚಲಿಸಬೇಕು. ಮಲ್ಪೆಯಿಂದ ಕುಂದಾಪುರಕ್ಕೆ ಹೋಗುವ ವಾಹನಗಳು ಸಂತೆಕಟ್ಟೆ ಮತ್ತು ನೇಜಾರು ಮುಖೇನ ಚಲಿಸಬೇಕು.
ಮಂಗಳೂರಿನಿಂದ ಕುಂದಾಪುರ ಕಡೆಗೆ :
► ಕಟಪಾಡಿಯಿಂದ-ಮಣಿಪುರ-ದೆಂದೂರಕಟ್ಟೆ-ರಾಂಪುರ-ಅಲೆವೂರು, ಗುಡ್ಡೆ ಅಂಗಡಿ-ಮಣಿಪಾಲ-ಆರ್ಎಸ್ಬಿ ಸಭಾಭವನ-ಸಿಂಡಿಕೇಟ್ ಸರ್ಕಲ್, ಕಾಯಿನ್ ಸರ್ಕಲ್- ಪೆರಂಪಳ್ಳಿ- ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಅಂಬಾಗಿಲು ರಾ.ಹೆ.66ರ ಮೂಲಕ ಚಲಿಸಬೇಕು.
► ಕಟಪಾಡಿ ಉದ್ಯಾವರ ಕಡೆಯಿಂದ ಬಂದ ವಾಹನಗಳು-ಬಲೈಪಾದೆ -ಗುಡ್ಡೆಅಂಗಡಿ ಕೊರಂಗ್ರಪಾಡಿ ಕ್ರಾಸ್- ಕೊರಂಗ್ರಪಾಡಿ- ಕುಕ್ಕಿಕಟ್ಟೆ- ಜೋಡುರಸ್ತೆ- ಅಲೆವೂರು ಗುಡ್ಡೆಅಂಗಡಿ-ಮಣಿಪಾಲ-್ಕ ಆರ್ಎಸ್ಬಿ ಸಭಾ ಭವನ- ಸಿಂಡಿಕೇಟ್ ಸರ್ಕಲ್- ಕಾಯಿನ್ ಸರ್ಕಲ್- ಪೆರಂಪಳ್ಳಿ- ಅಂಬಾಗಿಲು ಪೆರಂಪಳ್ಳಿ ಕ್ರಾಸ್-ಅಂಬಾಗಿಲು ರಾ.ಹೆ.66ರ ಮೂಲಕ ಚಲಿಸಬೇಕು.
ಕುಂದಾಪುರದಿಂದ-ಮಂಗಳೂರು ಕಡೆಗೆ :
► ಅಂಬಾಗಿಲು ಎನ್ ಹೆಚ್ 66- ಅಂಬಾಗಿಲು ಪೆರಂಪಳ್ಳಿ ಕ್ರಾಸ್- ಪೆರಂಪಳ್ಳಿ- ಕಾಯಿನ್ಸರ್ಕಲ್- ಸಿಂಡಿಕೇಟ್ ಸರ್ಕಲ್- ಮಣಿಪಾಲ ಆರ್ಎಸ್ಬಿ ಸಭಾ ಭವನ- ಅಲೆವೂರು ಗುಡ್ಡೆ ಅಂಗಡಿ- ರಾಂಪುರ- ದೆಂದೂರ್ಕಟ್ಟೆ- ಮಣಿಪುರ-ಕಟಪಾಡಿ ಮುಖಾಂತರ ಚಲಿಸಬೇಕು.
ಮಂಗಳೂರಿನಿಂದ ಮಲ್ಪೆ ಕಡೆಗೆ :
► ರಾ.ಹೆದ್ದಾರಿ 66 ಕಿಯಾ ಶೋ ರೂಂ ಉದ್ಯಾವರ ಜಂಕ್ಷನ್-ಉದ್ಯಾವರ ಪೇಟೆ-ಪಿತ್ರೋಡಿ-ಸಂಪಿಗೆ ನಗರ ಕುತ್ಪಾಡಿ-ಕಡೆಕಾರು-ಕಿದಿಯೂರು-ಮಲ್ಪೆ ಮುಖಾಂತರ ಚಲಿಸಬೇಕು.
ನ.28ರಂದು ಬೆಳಗ್ಗೆ 7:00ಗಂಟೆಯಿಂದ ಅಪರಾಹ್ನ 3:00 ಗಂಟೆಯ ವರೆಗೆ ಯಾವುದೇ ವಾಹನಗಳು ಕರಾವಳಿ ಕಡೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ ಮತ್ತು ಉಡುಪಿ ಸಿಟಿ ಕಡೆಗೆ ಬರುವಂತಿಲ್ಲ. ಈ ನಿಷೇಧ ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತುಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







