ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಜ.13: ಬಡಗಬೆಟ್ಟು ಗ್ರಾಮದ ನಿವಾಸಿ ನಿರ್ವಾಣ ಸ್ವಾಮಿ ಹೆಚ್.ಎಸ್ (53) ಎಂಬವರು ಕೆ.ಎಂ.ಸಿ ಮಣಿಪಾಲದ ಸೆಕ್ಯೂರಿಟಿ ಸಂಸ್ಥೆ ಯಲ್ಲಿ ಕೆಲಸ ಮಾಡಿಕೊಂಡಿದ್ದು, ಜನವರಿ 2ರಂದು ಬಾಸೆಲ್ ಮಿಷನ್ ಹಾಲ್ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ರಾತ್ರಿ 8:30ರ ಬಳಿಕ ನಾಪತ್ತೆಯಾಗಿದ್ದಾರೆ.
5ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ, ಧೃಡ ಶರೀರ ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





