Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ...

ಉಡುಪಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಪ್ರಕರಣ | ಬೆಳಗ್ಗಿನವರೆಗೂ ಮುಂದುವರಿದ ಕಾರ್ಯಾಚರಣೆ: 2.5 ಕೋಟಿ ರೂ. ನಷ್ಟ ಅಂದಾಜು

ವಾರ್ತಾಭಾರತಿವಾರ್ತಾಭಾರತಿ27 April 2026 12:33 PM IST
share
ಉಡುಪಿ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ದುರಂತ ಪ್ರಕರಣ | ಬೆಳಗ್ಗಿನವರೆಗೂ ಮುಂದುವರಿದ ಕಾರ್ಯಾಚರಣೆ: 2.5 ಕೋಟಿ ರೂ. ನಷ್ಟ ಅಂದಾಜು
ಅಂಗಡಿಗಳನ್ನು ಕಳೆದುಕೊಂಡ ಆಘಾತದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಮಾಲಕ

ಉಡುಪಿ, ಎ.27: ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ರವಿವಾರ ಸಂಜೆ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಅಗ್ನಿಶಾಮಕದ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಸೋಮವಾರ ಬೆಳಗ್ಗೆ ಏಳು ಗಂಟೆಯವರೆಗೆ ಮುಂದುವರಿಯಿತು. ಇದೀಗ ಬೆಂಕಿಯನ್ನು ಸಂಪೂರ್ಣ ನಂದಿಸಲಾಗಿದೆ.

ರಾಜಸ್ಥಾನ ಮೂಲದ ಉದ್ಯಮಿ ಭೀಮ ಎಂಬವರ ಪ್ಲಾಸ್ಟಿಕ್ ಸಾಮಗ್ರಿಗಳ ದಾಸ್ತಾನು ಗೋದಾಮಿನಲ್ಲಿ ರವಿವಾರ ಸಂಜೆ ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಂಕಿ ಕಾಣಿಸಿಕೊಂಡಿತ್ತು. ಈ ಬೆಂಕಿ ಅವರದ್ದೇ ಮಾಲಕತ್ವದ ಪ್ಲಾಸ್ಟಿಕ್ ಅಂಗಡಿ, ಮೊಬೈಲ್ ಅಂಗಡಿಯನ್ನು ಸಂಪೂರ್ಣ ಸುಟ್ಟು ಭಸ್ಮ ಮಾಡಿದೆ. ಅದೇ ರೀತಿ ಸಮೀಪದ ಎರಡು ಮೂರು ಅಂಗಡಿಗಳಿಗೆ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ ಎನ್ನಲಾಗಿದೆ. ಇದರಿಂದ ಸುಮಾರು 2.5 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ.

ಮರುಕಳಿಸಿದ ಬೆಂಕಿ:

ರವಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆ ಸೋಮವಾರ ಬೆಳಗ್ಗೆ ಏಳು ಗಂಟೆಯವರೆಗೂ ನಡೆದಿತ್ತು.

ತಡರಾತ್ರಿ ಬೆಂಕಿಯನ್ನು ಹತೋಟಿಗೆ ತಂದರೂ ಬೆಳಗ್ಗೆ ವರೆಗೆ ಹಲವು ಬಾರಿ ಗೋಡೌನ್ ಮತ್ತು ಕೆಳಗಿನ ಅಂಗಡಿಗಳಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಸ್ಥಳದಲ್ಲಿದ್ದ ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಸಲಾಯಿತು.

ಮಾಲಕ ಆಸ್ಪತ್ರೆ ದಾಖಲು

ಈ ದುರಂತ ಒಂದೇ ಮಾಲಕರಿಗೆ ಸಂಬಂಧಿಸಿದ ನಾಲ್ಕು ಅಂಗಡಿಗಳನ್ನು ಸುಟ್ಟು ಭಸ್ಮ ಮಾಡಿದ್ದು, ಈ ಆಘಾತದಿಂದ ತೀವ್ರ ಅಸ್ವಸ್ಥಗೊಂಡ ಅಂಗಡಿ ಮಾಲಕ ಭೀಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಸಮೀಪದ ಅಂಗಡಿ ಸಿಬ್ಬಂದಿ, ಸಮಾಜ ಸೇವಕರು, ಸಾರ್ವಜನಿಕರು ಸೇರಿ ಅಂಗಡಿಗಳಲ್ಲಿ ಸುಟ್ಟು ಕರಕಲಾದ ಸೊತ್ತುಗಳನ್ನು ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಈ ದುರಂತದಿಂದ ಸೊತ್ತುಗಳು ಮಾತ್ರ ವಲ್ಲದೆ ಕಟ್ಟಡ ಹಾಗೂ ಅದರಲ್ಲಿನ ಶಟರ್ಗಳಿಗೂ ಭಾರೀ ಹಾನಿ ಉಂಟು ಮಾಡಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪ್ರಮುಖರ ಭೇಟಿ:

ಸ್ಥಳಕ್ಕೆ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್ ಸಹಿತ ಹಲವು ಗಣ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖಾ ಮಟ್ಟದಲ್ಲಿ ಪರಿಹಾರಕ್ಕೆ ನೀಡಲು ಅವಕಾಶ ಇದ್ದರೆ ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇದೇ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

Tags

Udupifire tragedy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X