Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ತಾಯಿ ಮಕ್ಕಳ ಕಗ್ಗೊಲೆ...

ಉಡುಪಿಯಲ್ಲಿ ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಅಸೂಯೆ, ದ್ವೇಷ ಕಾರಣವೇ?

ವಾರ್ತಾಭಾರತಿವಾರ್ತಾಭಾರತಿ15 Nov 2023 6:53 PM IST
share
ಉಡುಪಿಯಲ್ಲಿ ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಅಸೂಯೆ, ದ್ವೇಷ ಕಾರಣವೇ?

ಉಡುಪಿ : ಉಡುಪಿಯ ನೇಜಾರಿನಲ್ಲಿ ರವಿವಾರ ಬೆಳಗ್ಗೆ 23 ವರ್ಷದ ಮಹಿಳೆ ಮತ್ತು ಆಕೆಯ ಕುಟುಂಬದ ಮೂವರು ಸದಸ್ಯರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪ್ರವೀಣ್‌ ಚೌಗಲೆ, "ಅಸೂಯೆ ಮತ್ತು ದ್ವೇಷದಿಂದ" ಅಪರಾಧ ಎಸಗಿದ್ದಾನೆ ಎಂದು ಪ್ರಕರಣದ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದು indianexpress.com ವರದಿ ಮಾಡಿದೆ.

ಅಯ್ನಾಝ್, ಅವರ ತಾಯಿ ಹಸೀನಾ ಎಂ, ಸಹೋದರಿ ಅಫ್ನಾನ್ ಮತ್ತು ಸಹೋದರ ಅಸೀಮ್ ಅವರನ್ನು ಇರಿದು ಕೊಂದ ಎರಡು ದಿನಗಳ ಬಳಿಕ ಕೊಲೆ ಆರೋಪಿ, ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ ಪ್ರವೀಣ್ ಅರುಣ್ ಚೌಗುಲೆ (39)ಯನ್ನು ಉಡುಪಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ರವಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ವರದಿಯಾಗಿತ್ತು.

ಪೊಲೀಸ್ ತನಿಖೆಯ ಪ್ರಕಾರ, ಚೌಗುಲೆ ಮಹಾರಾಷ್ಟ್ರದ ಮಾಜಿ ಪೊಲೀಸ್ ಸಿಬ್ಬಂದಿ ಆಗಿದ್ದು, ಈಗ ಏರ್ ಇಂಡಿಯಾದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ.

ಆರೋಪಿ ಪ್ರವೀಣ್ ವಿವಾಹಿತನಾಗಿದ್ದು, ಕರ್ತವ್ಯದ ಮೇಲೆ ವಿಮಾನಯಾನದ ಸಮಯದಲ್ಲಿ ತನ್ನ ಯುವ ಸಹೋದ್ಯೋಗಿ ಅಯ್ನಾಝ್ ಜೊತೆ ಆತ್ಮೀಯತೆ ಬೆಳೆಸಿಕೊಂಡಿದ್ದ, ಆದರೆ ಅಯ್ನಾಝ್ ಆತನ ಪ್ರೀತಿಗೆ ಒಪ್ಪಿಗೆ ಸೂಚಿಸಿರಲಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಹೇಳಿದೆ.

"ಪೊಲೀಸ್ ಪ್ರಾಥಮಿಕ ತನಿಖೆಗಳು ಆರೋಪಿಯು ಯಾರನ್ನಾದರೂ ಅತಿಯಾಗಿ ಹಚ್ಚಿಕೊಳ್ಳುವ ವ್ಯಕ್ತಿ ಎಂದು ಗುರುತಿಸಿದೆ. ಅಸೂಯೆ ಮತ್ತು ದ್ವೇಷವೇ ಕೊಲೆಗೆ ಪ್ರಚೋದನೆ" ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಚೌಗುಲೆ ಮುಸ್ಲಿಂ ಮಹಿಳೆಯನ್ನು ಮದುವೆಯಾಗಿದ್ದು, ಆಕೆಗೆ ಹಿಂದೂ ಹೆಸರಿಡಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಮಂಗಳೂರಿನಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಉಡುಪಿ ಪೊಲೀಸರು ಅಯ್ನಾಝ್ ಅವರ ಚಾಟ್‌ಗಳು ಮತ್ತು ಫೋನ್ ದಾಖಲೆಗಳನ್ನು ವಿಶ್ಲೇಷಿಸಿದ ಬಳಿಕ ಸಾಂಗ್ಲಿ ನಿವಾಸಿ ಪ್ರವೀಣ್ ಚೌಗುಲೆಯನ್ನು ಮೊಬೈಲ್ ಫೋನ್ ಲೋಕೇಶನ್, ಡೇಟಾ ದಾಖಲೆ ಸೇರಿದಂತೆ ತಾಂತ್ರಿಕ ದತ್ತಾಂಶಗಳ ಆಧಾರದ ಮೇಲೆ ಪತ್ತೆಹಚ್ಚಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೊಲೆಯ ಸಮಯದಲ್ಲಿ ಚೌಗುಲೆ ಫೋನ್ ಸ್ವಿಚ್ ಆಫ್ ಆಗಿದ್ದಿದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು.

ಮಂಗಳೂರಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಅಯ್ನಾಝ್ ಸಹೋದರಿ ಅಫ್ನಾನ್ ದೀಪಾವಳಿ ರಜೆಗೆ ಉಡುಪಿಯ ತಮ್ಮ ಮನೆಗೆ ಮರಳಿದ್ದರು. ಅಯ್ನಾಝ್ ಅವರೇ ತಮ್ಮ ಮನೆಯ ವಿಳಾಸವನ್ನು ಆರೋಪಿಯ ಜೊತೆಗೆ ಹಂಚಿಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಾಲ್ವರನ್ನು ಕೊಂದ ನಂತರ, ಪ್ರವೀಣ್ ಚೌಗುಲೆ ನೀರಾವರಿ ಇಲಾಖೆ ಇಂಜಿನಿಯರ್ ಆಗಿರುವ ತನ್ನ ಚಿಕ್ಕಪ್ಪನ ಜೊತೆ ದೀಪಾವಳಿಯನ್ನು ಆಚರಿಸಲು ಬೆಳಗಾವಿಯ ಕುಡಚಿಗೆ ಪ್ರಯಾಣ ಬೆಳೆಸಿದ್ದ ಎನ್ನಲಾಗಿದೆ.

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೃಪ್ತಿ ಲೇಔಟ್‌ನಲ್ಲಿರುವ ಅಫ್ನಾನ್ ಮನೆಯಲ್ಲಿ ಚೀರಾಟದ ಶಬ್ದ ಕೇಳಿಸಿದ ಬಳಿಕ ನೆರೆಮನೆಯ ಐಫಾ ಅಯೂಬ್ ಅವರಿಗೆ ಕೊಲೆಯಾಗಿರುವ ವಿಚಾರ ತಿಳಿಯಿತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆಗೊಳಗಾದ ಹಸೀನಾಳ ಅತ್ತೆ ಹಾಜಿರಾ ಕೂಡ ಬಾತ್ ರೂಂಗೆ ಬೀಗ ಹಾಕಿಕೊಂಡು ಕೊಲೆಗಾರ ಪರಾರಿಯಾದ ನಂತರ ಸಹಾಯಕ್ಕಾಗಿ ಕೂಗು ಹಾಕಿದ್ದರು.

ಸಂತೆಕಟ್ಟೆ ಸ್ಟ್ಯಾಂಡ್‌ನಿಂದ 8.30 ರಿಂದ 9 ಗಂಟೆ ಸುಮಾರಿಗೆ ತೃಪ್ತಿ ಲೇಔಟ್‌ನಲ್ಲಿರುವ ಸಂತ್ರಸ್ತರ ಮನೆಗೆ, ಆಟೊ ರಿಕ್ಷಾದವನು ಆರೋಪಿಯನ್ನು ಕರೆದೊಯ್ದಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಪ್ರವೀಣ್ ಸುಮಾರು 15 ನಿಮಿಷಗಳ ನಂತರ ಮತ್ತೊಂದು ಆಟೋ ರಿಕ್ಷಾ ಬಾಡಿಗೆಗೆ ಕರೆದೊಯ್ಯಲು ಅದೇ ಆಟೋ ನಿಲ್ದಾಣಕ್ಕೆ ಮರಳಿದ್ದ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X