Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಹೆಜ್ಜೆ-ಗೆಜ್ಜೆಯಿಂದ...

ಉಡುಪಿ | ಹೆಜ್ಜೆ-ಗೆಜ್ಜೆಯಿಂದ ರಾಷ್ಟ್ರಮಟ್ಟದ ನೃತ್ಯ, ಸಂಗೀತ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ25 Nov 2025 7:30 PM IST
share
ಉಡುಪಿ | ಹೆಜ್ಜೆ-ಗೆಜ್ಜೆಯಿಂದ ರಾಷ್ಟ್ರಮಟ್ಟದ ನೃತ್ಯ, ಸಂಗೀತ ಸ್ಪರ್ಧೆ

ಉಡುಪಿ, ನ.25: ಮಣಿಪಾಲ- ಉಡುಪಿಯ ಹೆಜ್ಜೆ ಗೆಜ್ಜೆ ಫೌಂಡೇಶನ್ ಆಶ್ರಯದಲ್ಲಿ ರಾಷ್ಟ್ರಮಟ್ಟದ ಏಕವ್ಯಕ್ತಿ ಭರತನಾಟ್ಯ ಮತ್ತು ಸಂಗೀತ ಸ್ಪರ್ಧೆ ನ.30 ಹಾಗೂ ಡಿಸೆಂಬರ್ 7ರಂದು ನಡೆಯಲಿದೆ.

ದಾಸಪದ ವೈಭವಂ ಹೆಸರಿನಲ್ಲಿ ನಡೆಯುವ ಭಕ್ತಿ ನೃತ್ಯ ಸೌರಭ ಭರತನಾಟ್ಯ ಸ್ಪರ್ಧೆ ನ.30ರ ರವಿವಾರ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಹೆಜ್ಜೆ ಗೆಜ್ಜೆಯ ಸಹ ನಿರ್ದೇಶಕಿ ದೀಕ್ಷಾ ರಾಮಕೃಷ್ಣ ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ವಿಜೇತರಿಗೆ ಫಲಕದೊಂದಿಗೆ 10,000 ರೂ.ನಗದು, ಎರಡನೇ ಬಹುಮಾನ ಪಡೆದವರಿಗೆ 7,000 ರೂ. ಹಾಗೂ ಮೂರನೇ ಬಹುಮಾನ ಪಡೆದವರಿಗೆ 5000 ರೂ. ನೀಡಲಾಗುವುದು. ಅಲ್ಲದೇ ಪ್ರಥಮ ಬಹುಮಾನ ವಿಜೇತರಿಗೆ ನೃತ್ಯದಾಸರತ್ನ ಬಿರುದು ನೀಡಲಾಗುವುದು ಎಂದು ಅವರು ತಿಳಿಸಿದರು.

ಪ್ರತಿಯೊಬ್ಬ ನೃತ್ಯ ಸ್ಪರ್ಧಾರ್ಥಿಗೆ 10 ನಿಮಿಷಗಳ ಕಾಲಾವಕಾಶವಿರುತ್ತದೆ. ನೃತ್ಯಭಾಗ ಅಲರಿಪು, ಜತಿಸ್ವರ ಇತ್ಯಾದಿ ಮತ್ತು ಇನ್ನೊಂದು ದಾಸರ ಅಂಕಿತ ಇರುವ ದೇವರನಾಮ (ಅಭಿನಯ)ಕ್ಕೆ ನರ್ತಿಸಬೇಕಾಗುತ್ತದೆ ಎಂದು ದೀಕ್ಷಾ ರಾಮಕೃಷ್ಣ ತಿಳಿಸಿದರು.

ಡಿ.7ರ ರವಿವಾರ ಭಕ್ತಿ ಗಾನ ಲಹರಿ ರಾಷ್ಟ್ರಮಟ್ಟದ ದಾಸ ಪದ ಸಂಗೀತ ಸ್ಪರ್ಧೆಯನ್ನು ಹೆಜ್ಜೆ ಗೆಜ್ಜೆ ಉಡುಪಿಯಲ್ಲಿ ನಡೆಸಲಾಗುವುದು. ಪ್ರತಿಯೊಬ್ಬರಿಗೆ 10 ನಿಮಿಷಗಳ ಕಾಲಾವಕಾಶ ನೀಡಲಾಗುವುದು. ಈ ಸ್ಪರ್ಧೆಯ ವಿಜೇತರಿಗೆ ಫಲಕದೊಂದಿಗೆ 10,000 ರೂ. ನಗದು ಬಹುಮಾನ, ಎರಡನೇ ಸ್ಥಾನಿಗೆ 7,000 ರೂ. ಹಾಗೂ ಮೂರನೇ ಸ್ಥಾನಿಗೆ 5000 ರೂ. ನಗದು ನೀಡಲಾಗುವುದು. ಅಗ್ರಸ್ಥಾನಿಗೆ ದಾಸಗಾನರತ್ನ ಪ್ರಶಸ್ತಿ ನೀಡಲಾಗುವುದು.

ಈ ಎರಡು ಸ್ಪರ್ಧೆಗಳಲ್ಲಿ 13ರಿಂದ 25 ವರ್ಷ ವಯೋಮಿತಿಯವರು ಮಾತ್ರ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹೆಜ್ಜೆ ಗೆಜ್ಜೆ ಉಡುಪಿ ದೂರವಾಣಿ ಸಂಖ್ಯೆ:9110814436ನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೆಜ್ಜೆಗೆಜ್ಜೆಯ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ ಹಾಗೂ ರಂಜನಿ ಸಾಮಗ ಉಪಸ್ಥಿತರಿದ್ದರು.

Tags

Udupimusic competition
share
ವಾರ್ತಾಭಾರತಿ
ವಾರ್ತಾಭಾರತಿ
Next Story
X