Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಪೋಕ್ಸೋ ಪ್ರಕರಣ; ಆರೋಪಿ ಗ್ರಾಮ...

ಉಡುಪಿ: ಪೋಕ್ಸೋ ಪ್ರಕರಣ; ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ12 Oct 2023 8:53 PM IST
share
ಉಡುಪಿ: ಪೋಕ್ಸೋ ಪ್ರಕರಣ; ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ

ಉಡುಪಿ, ಅ.12: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

2018ರಲ್ಲಿ ಹೆಜಮಾಡಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿ (46) ಶಿಕ್ಷೆಗೆ ಗುರಿಯಾದ ಆರೋಪಿ.

17 ವರ್ಷದ ಪ್ರಾಯದ ನೊಂದ ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ತನ್ನ ಅಕ್ಕನ ಜಾಗದ ತಕರಾರಿಗೆ ಸಂಬಂಧಿಸಿದಂತೆ ದಾಖಲೆಗಳ ಬಗ್ಗೆ ವಿಚಾರಿಸಲು ಹೆಜಮಾಡಿ ಗ್ರಾ.ಪಂ.ಕಚೇರಿಗೆ ಹೋಗಿದ್ದು, ಈ ವೇಳೆ ಆರೋಪಿಯು ನೊಂದ ಬಾಲಕಿ ಮತ್ತು ಆಕೆಯ ಚಿಕ್ಕಮ್ಮನನ್ನು ವಾಪಾಸು ಕಳುಹಿಸಿ ಅವರನ್ನು ಹಿಂಬಾಲಿಸಿಕೊಂಡು ಬಂದು ಬಸ್‌ ನಿಲ್ದಾಣದ ಬಳಿ ನಿಮ್ಮ ಕೆಲಸ ಆಗಿದೆ ಎಂದು ಹೇಳಿ 5 ಸಾವಿರ ರೂ.ಪಡೆದನು. ಅನಂತರ ನೊಂದ ಬಾಲಕಿಯೊಂದಿಗೆ ಸಲುಗೆಯಿಂದ ಮಾತನಾಡಿ ಆಕೆಯ ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದನು ಎಂದು ದೂರಲಾಗಿದೆ.

ಬಳಿಕ ಆಕೆಗೆ ನಿರಂತರವಾಗಿ ಕರೆಮಾಡಿ ಕಿರುಕುಳ ನೀಡುತ್ತಿದ್ದ‌ ಆರೋಪಿ, ನೊಂದ ಬಾಲಕಿ ತಾನು ಅಪ್ರಾಪ್ತೆ ಎಂದು ಹೇಳಿಕೊಂಡರೂ ಆತ ಆಕೆಯನ್ನು ಮದುವೆಯಾಗುವುದಾಗಿ ತಿಳಿಸಿ ಆಕೆಯ ಅಶ್ಲೀಲ ಚಿತ್ರಗಳನ್ನು ಕಳುಹಿಸುವಂತೆ ಹೇಳುತ್ತಿದ್ದನು. ಬಳಿಕ ಹೆಜಮಾಡಿಯ ಹೊಟೇಲ್‌ವೊಂದಕ್ಕೆ ಆಕೆಯನ್ನು ಬರಲು ಹೇಳಿದ್ದು, ಆಕೆ ನಿರಾಕರಿಸಿದಕ್ಕೆ ನೊಂದ ಬಾಲಕಿಯ ತಾಯಿಯ ವಿಧವಾ ವೇತನವನ್ನು ಬ್ಲಾಕ್ ಮಾಡುವುದಾಗಿ ಹೆದರಿಸಿದ್ದನು. ಅದರಂತೆ ಸಂತ್ರಸ್ತೆ ತನ್ನ ತಮ್ಮನೊಂದಿಗೆ ಹೊಟೇಲ್‌ಗೆ ಹೋದಾಗ ಆಕೆಯ ಅಶ್ಲೀಲ ಭಾವಚಿತ್ರ ನೀಡುವಂತೆ ತಿಳಿಸಿದನು. ಇದಕ್ಕೆ ಒಪ್ಪದಿದ್ದಾಗ ಆಕೆಯ ತಲೆಗೆ ಕೈಯಿಂದ ಹೊಡೆದಿದ್ದನು. ಈ ವಿಚಾರವನ್ನು ನೊಂದ ಬಾಲಕಿ ಹಾಗೂ ಆಕೆಯ ತಮ್ಮ ಮನೆಯವರಿಗೆ ತಿಳಿಸಿದ್ದು, ಅದರಂತೆ ಮನೆಯವರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆಗಿನ ಪೊಲೀಸ್ ಉಪನಿರೀಕ್ಷಕರಾಗಿದ್ದ ಸತೀಶ್ ಎಂ.ಪಿ. ಪ್ರಕರಣ ದಾಖಲಿಸಿಕೊಂಡು ಆಗಿನ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್, ಆಗಿನ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್‌ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ದೋಷಾ ರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದಲ್ಲಿ ಒಟ್ಟು 46 ಸಾಕ್ಷಿಗಳನ್ನು ನಮೂದಿಸಲಾಗಿದ್ದು, ಈ ಪೈಕಿ 26 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿ ಲೈಂಗಿಕ ಹಲ್ಲೆ ನಡೆಸಿರುವುದು ಸಾಬೀತಾಗಿರುವು ದಾಗಿ ದೃಢಪಡಿಸಿ ಆರೋಪಿಗೆ 3 ವರ್ಷಗಳ ಜೈಲುnಶಿಕ್ಷೆ, ಪೋಕ್ಸೋ ಕಾಯ್ದೆಯಡಿ 1 ವರ್ಷ ಜೈಲು ಶಿಕ್ಷೆ ಮತ್ತು 4 ಸಾವಿರ ರೂ.ದಂಡ ಪಾವತಿಸಲು ಆದೇಶ ನೀಡಿದರು. ಸರಕಾರದಿಂದ ನೊಂದ ಬಾಲಕಿಗೆ 50 ಸಾವಿರ ರೂ.ಪರಿಹಾರ ನೀಡುವಂತೆ ನಿರ್ದೇಶಿಸಿ ಆದೇಶಿಸಿದರು.

ಆರೋಪಿಗೆ ಸಹಕರಿಸಿದ್ದಾರೆ ಎನ್ನಲಾದ 2ನೇ ಆರೋಪಿ ಪಂಚಾಯತ್ ಗ್ರಂಥಪಾಲಕಿಯ ವಿರುದ್ಧ ಮಾಡಲಾದ ದೋಷಾರೋಪಣೆ ಸಾಬೀತಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X