Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸೆ.9ರಿಂದ ರಂಜನಿ ಸ್ಮಾರಕ...

ಉಡುಪಿ: ಸೆ.9ರಿಂದ ರಂಜನಿ ಸ್ಮಾರಕ ಸಂಗೀತೋತ್ಸವ

ವಾರ್ತಾಭಾರತಿವಾರ್ತಾಭಾರತಿ7 Sept 2023 9:43 PM IST
share
ಉಡುಪಿ: ಸೆ.9ರಿಂದ ರಂಜನಿ ಸ್ಮಾರಕ ಸಂಗೀತೋತ್ಸವ

ಉಡುಪಿ, ಸೆ.7: ಉದಯೋನ್ಮುಖ ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಾವಿದೆಯಾಗಿದ್ದು, ಸಣ್ಣ ಪ್ರಾಯದಲ್ಲಿ ನಿಧನರಾದ ರಂಜನಿ ಹೆಬ್ಬಾರ್ ನೆನಪಿನಲ್ಲಿ ಉಡುಪಿಯ ರಂಜಿನಿ ಸ್ಮಾರಕ ಟ್ರಸ್ಟ್ ಪ್ರತಿವರ್ಷ ಆಯೋಜಿಸು ತ್ತಿರುವ ರಂಜಿನಿ ಸ್ಮಾರಕ ಸಂಗೀತೋತ್ಸವ ಸೆ.9ರಿಂದ 17ರವರೆಗೆ ನಗರದ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಟ್ರಸ್ಟ್‌ನ ಸ್ಥಾಪಕ ಪ್ರೊ.ವಿ.ಅರವಿಂದ ಹೆಬ್ಬಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.9ರ ಸಂಜೆ ಸಂಗೀತೋತ್ಸವ ಉದ್ಘಾಟನೆ ಗೊಳ್ಳಲಿದ್ದು, ಇದರೊಂದಿಗೆ ಟ್ರಸ್ಟ್‌ನ ವೆಬ್‌ಸೈಟ್ ಹಾಗೂ ತಾನು ಬರೆದ ‘ಸೌತ್ ಕೆನರಾದಲ್ಲಿ ಸಂಈತ ನಡೆದು ಬಂದ ದಾರಿ’ ಕೃತಿ ಅನಾವರಣಗೊಳ್ಳಲಿವೆ ಎಂದರು. ಬಳಿಕ 5:30ರಿಂದ ಅರ್ಚನಾ, ಸಮನ್ವಿ, ಶ್ರೀಮತಿದೇವಿ, ಗಾರ್ಗಿ, ಶುಭಾಂಗಿ ಹಾಗೂ ಶ್ರೀರಾಗ್ ಇವರಿಂದ ಪ್ರದರ್ಶನವಿರುತ್ತದೆ.

ಸೆ.10ರಂದು ಪ್ರಸಿದ್ಧ ಗಾಯಕಿ ರಂಜನಿ ಗಾಯತ್ರಿ ಇವರ ಕರ್ನಾಟಕ ಕಚೇರಿ ಇದ್ದರೆ, 11ರಂದು ನೌಶಾದ್ ಹಾಗೂ ನಿಶಾದ್ ಹರ್ಲಾಪುರ್ ಇವರಿಂದ ಹಿಂದೂಸ್ತಾನಿ ಗಾಯನವಿದೆ. 12ರಂದು ಅಮೃತ ಮುರಳಿ ಇವರಿಂದ ಕರ್ನಾಟಕ ಸಂಗೀತ, 13ರಂದು ಚೆನ್ನೈನ ವಿನಯ್ ವಾರಣಾಸಿ ಇವರು ಸಂಗೀತ ಸಂಕೀರ್ತನೆ ಮೂಲಕ ಕಥೆಗಳನ್ನು ಹೇಳಲಿದ್ದಾರೆ ಎಂದರು.

ಸೆ.14ರಂದು ಜೆಬಿ ಶ್ರುತಿಸಾಗರ್‌ರಿಂದ ಕೊಳಲುವಾದನ, 15ರಂದು ಮೈಸೂರು ನಾಗರಾಜ್ ಹಾಗೂ ಕಾರ್ತಿಕ್‌ರಿಂದ ದ್ವಂದ್ವ ವಯಲಿನ್ ವಾದನ, 16ರಂದು ಆದಿತ್ಯ ಮಾಧವ್‌ರಿಂದ ಕರ್ನಾಟಕ ಸಂಗೀತ ಕಚೇರಿ ನಡೆಯಲಿದೆ. ಕೊನೆಯ ದಿನವಾದ ಸೆ.17ರಂದು ಬೆಳಗ್ಗೆ 10ರಿಂದ ಹಯಗ್ರೀವ ನಗರದ ಲತಾಂಗಿಯಲ್ಲಿ ಬೆಂಗಳೂರಿನ ಸ್ವಾಮಿ ಸೂರ್ಯಪದ ಇವರಿಂದ ಸತ್ಸಂಗ ಭಜನೆ ನಡೆಯಲಿದೆ.

ಸಂಜೆ 5:00ರಿಂದ ನೂತನ ರವೀಂದ್ರ ಮಂಟಪದಲ್ಲಿ ಶ್ರೇಯ ದೇವನಾಥ್ (ವಯೋಲಿನ್), ಎಂ.ಎಸ್.ಕಾರ್ತಿಕೇಯನ್ (ನಾಗಸ್ವರ), ಎಂ.ಎಸ್. ವೆಂಕಟಸುಬ್ರಹ್ಮಣ್ಯ(ಮೃದಂಗ) ಹಾಗೂ ಅಡ್ಯಾರ್ ಜಿ.ಸಿಲಬಂರಸನ್ (ತವಿಲ್) ಇವರಿಂದ ವಿಶಿಷ್ಟ, ಅಪರೂಪದ ವಾದ್ಯವೃಂದ ನಡೆಯಲಿದೆ ಎಂದು ಪ್ರೊ.ಹೆಬ್ಬಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ, ಖ್ಯಾತ ಶಾಸ್ತ್ರೀಯ ಸಂಗೀತ ಕಲಾವಿದೆ ಸಮನ್ವಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X