Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ;...

ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ25 Jan 2024 8:00 PM IST
share
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಇಂದು ಆದೇಶ ನೀಡಿದೆ.

ಕಾಪು ಮಜೂರು ನಿವಾಸಿ ಶಂಶುದ್ದೀನ್(24) ಶಿಕ್ಷೆಗೆ ಗುರಿಯಾಗಿರುವ ಆರೋಪಿ. ಆರೋಪಿ ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಡುತ್ತಿದ್ದು, ಆತ ತನ್ನ ಮೊಬೈಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಬಾಲಕಿಯ ಫೋಟೋ ತೆಗೆದಿದ್ದನು. ಬಳಿಕ ಈ ಫೋಟೋವನ್ನು ಬೇರೆಯವರಿಗೆ ಕಳುಹಿಸಿ ವೈರಲ್ ಮಾಡುವುದಾಗಿ ಹೆದರಿಸಿದ್ದು, ನನ್ನ ಜೊತೆ ಬಂದಲ್ಲಿ ಫೋಟೋ ಡಿಲೀಟ್ ಮಾಡುವುದಾಗಿ ನಂಬಿಸಿದ್ದನು.

ಅದರಂತೆ ನೊಂದ ಬಾಲಕಿಯನ್ನು ಕಾಪುವಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ತನ್ನ ಹೆಂಡತಿ ಎಂದು ಸುಳ್ಳು ಮಾಹಿತಿ ನೀಡಿ ರೂಮ್ ಪಡೆದು ಅತ್ಯಾಚಾರ ಎಸಗಿದ್ದನು. ಅದೇ ಸಮಯ ಆರೋಪಿ ನೊಂದ ಬಾಲಕಿಯ ಅರೆ ನಗ್ನ ಚಿತ್ರಗಳನ್ನು ತೆಗೆದು ವಿಡಿಯೋ ಮಾಡಿದ್ದನು. ನಂತರ ಡಿಲೀಟ್ ಮಾಡ ಬೇಕಾದರೆ ಹಣ ನೀಡಬೇಕೆಂದು ಬೆದರಿಕೆ ಹಾಕಿ ಆಕೆಯಿಂದ ಹಣ ಪಡೆದುಕೊಂಡಿದ್ದನು. ಅದೇ ರೀತಿ ಬೆದರಿಸಿ ಕಾಪುವಿನ ರೆಸಾರ್ಟ್‌ಗೆ ಕರೆದು ಕೊಂಡು ಹೋಗಿ ಬಾಲಕಿಗೆ ದೌರ್ಜನ್ಯ ಎಸಗಿದ್ದನು ಎಂದು ದೂರಲಾಗಿತ್ತು.

ಆರೋಪಿ ಮತ್ತೆ ಕರೆದಾಗ ಬಾಲಕಿ ಹೋಗಲು ನಿರಾಕರಿಸಿದಕ್ಕೆ ಆಕೆಯ ಅರೆನಗ್ನ ಚಿತ್ರಗಳನ್ನು ಆಕೆಯ ತಾಯಿಯ ಮೊಬೈಲ್‌ಗೆ ಕಳುಹಿಸಿ ತಾನು ಕೇಳಿದಷ್ಟು ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದನು. ಈ ಬಗ್ಗೆ ನೊಂದ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಾಯಿ ನೀಡಿದ ದೂರಿನಂತೆ ಆಗಿನ ಕಾಪು ಪೊಲೀಸ್ ಠಾಣಾ ಎಸ್ಸೈ ರಾಘವೇಂದ್ರ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ ಆಗಿನ ವೃತ್ತ ನಿರೀಕ್ಷಕ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಒಟ್ಟು 13 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಮೊಬೈಲ್‌ಗಳಲ್ಲಿದ್ದ ಭಾವಚಿತ್ರದ ಬಗ್ಗೆ ಅಭಿಯೋಜನೆ ಸಲ್ಲಿಸಿರುವ ತಜ್ಞರ ಅಭಿಪ್ರಾಯಗಳನ್ನು ಪರಿಗಣಿಸಿ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಎಗಿರುವ ಕಾರಣ 10 ವರ್ಷ ಕಠಿಣ ಸಜೆ, 10 ಸಾವಿರ ರೂ. ದಂಡ, ಬಾಲಕಿಯ ಅತ್ಯಾಚಾರಕ್ಕೆ 20ವರ್ಷಗಳ ಕಠಿಣ ಸಜೆ 20ಸಾವಿರ ರೂ. ದಂಡ, ಬೆದರಿಕೆಯೊಡ್ಡಿದಕ್ಕೆ ಒಂದು ವರ್ಷ ಸಜೆ ಒಂದು ಸಾವಿರ ರೂ. ದಂಡ, ಲೈಂಗಿಕ ಹಲ್ಲೆಗಾಗಿ ಒಂದು ವರ್ಷ ಸಜೆ ಮತ್ತು ಒಂದು ಸಾವಿರ ರೂ. ದಂಡ, ಅರೆನಗ್ನ ವಿಡಿಯೋ ಚಿತ್ರೀಕರಣ ಮಾಡಿರುವುದಕ್ಕೆ 5ವರ್ಷ ಸಜೆ, 5000ರೂ. ದಂಡ, ವಿಡಿಯೋವನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿ ಇಟ್ಟಿದ್ದಕ್ಕೆ 5000ರೂ. ದಂಡ, ಐಟಿ ಕಾಯಿದೆಯಡಿ 2ವರ್ಷ ಸಜೆ 2000ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರು.

ಒಟ್ಟು 62 ಸಾವಿರ ರೂ. ದಂಡದಲ್ಲಿ 50ಸಾವಿರ ರೂ. ಬಾಲಕಿಗೆ, ಉಳಿದ 12ಸಾವಿರ ರೂ. ಸರಕಾರಕ್ಕೆ ಪಾವತಿಸುವಂತೆ ಮತ್ತು ನೊಂದ ಬಾಲಕಿಗೆ ಒಂದು ಲಕ್ಷ ರೂ. ಪರಿಹಾರ ಸರಕಾರ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X