Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ...

ಉಡುಪಿ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ19 July 2023 7:30 PM IST
share
ಉಡುಪಿ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭ

ಉಡುಪಿ, ಜು.19: ಗೃಹಲಕ್ಷ್ಮೀ ಯೋಜನೆಯು ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ಫಲಾನುಭವಿಯ ನೋಂದಣಿ ಪ್ರಕ್ರಿಯೆಯು ಪ್ರಾರಂಭಗೊಂಡಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಿದ್ದು, ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿಸುತ್ತಿದ್ದಲ್ಲಿ ಅಂತಹವರು ಈ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ.

ಫಲಾನುಭವಿಗಳು ಎರಡು ವಿಧಾನಗಳಲ್ಲಿ ನೋಂದಣಿ ಮಾಡಿಕೊಳ್ಳ ಬಹುದಾಗಿದೆ. ರೇಷನ್ ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಾವಣಿ ಮಾಡಿಸುವ ಸ್ಥಳದ ವಿವರಗಳನ್ನು ಎಸ್‌ಎಂಎಸ್ ಮೂಲಕ ಹಾಗೂ ಪ್ರಜಾಪ್ರತಿನಿಧಿ ಅಥವಾ ಸರಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು ತಮ್ಮ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೂಲಕವೂ ಸಹ ನೋಂದಾಯಿಸಿಕೊಳ್ಳಬಹುದಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಫಲಾನುಭವಿಗಳು ಸಮೀಪದ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹಾಗೂ ನಗರ ಪ್ರದೇಶದಲ್ಲಿರುವವರು ಕರ್ನಾಟಕ ಒನ್, ಬೆಂಗಳೂರು ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬಹುದು.

ಫಲಾನುಭವಿಗಳು ನೋಂದಾವಣಿಗೆ ನಿಗದಿಪಡಿಸಲಾದ ದಿನ, ಸಮಯ ಮತ್ತು ಸ್ಥಳಗಳನ್ನು 1902 ಸಂಖ್ಯೆಗೆ ಕರೆ ಮಾಡಿ ಅಥವಾ ಮೊ.ನಂ: 8147500500 ನಂಬರ್‌ಗೆ ಎಸ್‌ಎಂಎಸ್ ಮೂಲಕ ಸಂದೇಶ ಕಳುಹಿಸಿ ಕೂಡ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಒಂದು ವೇಳೆ ನೋಂದಣಿಗೆ ನಿಗದಿಪಡಿಸಿದ ದಿನದಂದು ಸೇವಾ ಕೇಂದ್ರ ಗಳಿಗೆ ತೆರಳಲು ಸಾಧ್ಯವಾಗದಿದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನದಂದು ಸಂಜೆ 5ರಿಂದ 7ರ ಒಳಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್‌ಬುಕ್ (ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ, ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಪ್ರತಿಯೊಂದಿಗೆ ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ತೆರಳಿ ನೋಂದಾ ಯಿಸಿಕೊಳ್ಳಬಹುದು.

ಸೇವಾ ಕೇಂದ್ರಗಳಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿ ಕೊಂಡವರಿಗೆ ತಮ್ಮ ಮನೆಗಳಿಗೆ ಮಂಜೂರಾತಿ ಪತ್ರವನ್ನು ತಲುಪಿಸ ಲಾಗುವುದು. ಈ ಕುರಿತು ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು.

ಫಲಾನುಭವಿಯು ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಿದ್ದಲ್ಲಿ ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೀಟಿ ನೀಡಿ, ನೋಂದಾಯಿಸಲು ಪ್ರಯತ್ನಿಸಿದರೆ, ಈಗಾಗಲೇ ನೋಂದಾಯಿಸಿರುವ ಮಾಹಿತಿ ಲಭ್ಯವಾಗುತ್ತದೆ.

ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ಫಲಾನುಭವಿಯು ಇಚ್ಛಿಸಿದ್ದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿದ್ದು, ಸದರಿ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುವುದು.

ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಪ್ರಕ್ರಿಯೆಯು ಉಚಿತವಾಗಿದ್ದು, ಯಾವುದೇ ಶುಲ್ಕವನ್ನು ಫಲಾನುಭವಿ ಪಾವತಿಸಬೇಕಾಗಿಲ್ಲ. ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X