Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ನೆರೆಹೊರೆಯವರೊಂದಿಗಿನ ಸಂಬಂಧ...

ಉಡುಪಿ | ನೆರೆಹೊರೆಯವರೊಂದಿಗಿನ ಸಂಬಂಧ ವಿಶ್ವಾಸದ ಭಾಗ : ಮುಹಮ್ಮದ್ ಕುಂಞ

ವಾರ್ತಾಭಾರತಿವಾರ್ತಾಭಾರತಿ30 Nov 2025 8:54 PM IST
share
ಉಡುಪಿ | ನೆರೆಹೊರೆಯವರೊಂದಿಗಿನ ಸಂಬಂಧ ವಿಶ್ವಾಸದ ಭಾಗ : ಮುಹಮ್ಮದ್ ಕುಂಞ

ಉಡುಪಿ, ನ.30: ನೆರೆಹೊರೆಯವರೊಂದಿಗಿನ ಸಂಬಂಧ ಎಂಬುವುದು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. ನೆರಮನೆಯವನು ನಿಮ್ಮಿಂದ ನಿರ್ಭಯದಿಂದ ಬದುಕುತ್ತಿಲ್ಲವೆಂದಾದರೆ ನೀವು ವಿಶ್ವಾಸಿಯಾಗಲು ಸಾಧ್ಯವಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಹೇಳಿದ್ದಾರೆ.

ಜಮಾಅತೆ ಇಸ್ಲಾಮಿ ಉಡುಪಿ ಜಿಲ್ಲೆ ಇದರ ವತಿಯಿಂದ ಉಡುಪಿಯ ಜಾಮೀಯ ಮಸೀದಿಯಲ್ಲಿ ರವಿವಾರ ಆಯೋಜಿಸಲಾದ ನೆರಹೊರೆ ಹಕ್ಕುಗಳು ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮನುಷ್ಯ ಸಮಾಜಿಕ ಜೀವಿಯಾಗಿದ್ದು, ಯಾವಾಗಲೂ ಇತರರ ಮೇಲೆ ಅವಲಂಬಿತನಾಗಿದ್ದಾನೆ. ಮನುಷ್ಯನಷ್ಟು ಇತರರ ಮೇಲೆ ಅವಲಂಬಿತ ಜೀವಿ ಈ ಭೂಮಿಯಲ್ಲಿ ಇಲ್ಲ. ಬೇರೆಲ್ಲಾ ಪ್ರಾಣಿಗಳು ಹುಟ್ಟಿದ ಕೆಲವೇ ನಿಮಿಷ, ಗಂಟೆಯಲ್ಲಿ ನಡೆಯಲು, ಕೆಲಸ ಮಾಡಲು ಆರಂಭಿಸುತ್ತದೆ. ಆದರೆ ಮನುಷ್ಯ ಮಾತ್ರ ದೀರ್ಘಕಾಲದ ಪರಾವಲಂಬಿಯಾಗಿದ್ದಾನೆ. ಮನುಷ್ಯನಿಗೆ ಆ ಕಾರಣಕ್ಕಾಗಿ ಸಂಬಂಧಗಳ ತೀರಾ ಅಗತ್ಯವಿದೆ ಎಂದರು.

ಸಂಬಂಧಗಳು ದುರ್ಬಲವಾಗುತ್ತಿರುವ ಕಾಲ ಇದಾಗಿದೆ. ಈ ಆಧುನಿಕ ಭೌತಿಕ ಕಾಲದಲ್ಲಿ ನಾನು, ನನ್ನದು ಎಂಬುವುದರ ಆಚೆ ಬದುಕಿಗೆ ಯಾವುದೆ ಅಜೆಂಡಾ ಇಲ್ಲದೆ ಬದುಕುತ್ತಿದ್ದೇವೆ. ಆದರೆ ಇಸ್ಲಾಮ್ ಧರ್ಮ ಎಲ್ಲ ಕಾಲದಲ್ಲೂ ನಾವು ಎಂಬುವುದನ್ನು ಕಲಿಸಿಕೊಟ್ಟಿದೆ. ಸಾಮಾಜಿಕ ಜಾಲ ತಾಣದ ಈ ಕಾಲಘಟ್ಟದಲ್ಲಿ ನಮಗೆ ಎಲ್ಲೆಲ್ಲಿ ಜನರ ಸಂಪರ್ಕವಿದೆ. ಆದರೆ ನೆರಹೊರೆಯ ಕುರಿತು ಪರಿಚಯವಿಲ್ಲದ, ಅವರ ನೋವುಗಳನ್ನು ಅರ್ಥೈಸದ ಸಮಾಜದಲ್ಲಿ ನಾವು ಬದುಕುತ್ತಿದ್ದೇವೆ ಎಂದು ಅವರು ತಿಳಿಸಿದರು.

ಈ ಕಾಲಘಟ್ಟದಲ್ಲಿ ಮುಸ್ಲಿಂ ಸಮುದಾಯದ ಕುರಿತು ಅತೀ ಹೆಚ್ಚು ಇಸ್ಲಾಮಫೋಬಿಯಾ ಹರಡಲಾಗುತ್ತದೆ. ಸುಳ್ಳುಸುದ್ದಿಗಳು, ತಪ್ಪು ಮಾಹಿತಿಗಳನ್ನು ಹರಡಲಾಗುತ್ತದೆ. ಮುಸ್ಲಿಂ ಸಮುದಾಯದ ವರ್ಚಸ್ಸಿಗೆ ಧಕ್ಕೆ ತರಲು ಹಲವು ವರ್ಷಗಳಿಂದ ಕೆಲವರು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ. ಅದರ ಹೊರತಾಗಿಯೂ ಇಂದು ಕೂಡ ಈ ದೇಶದ ಬಹುಸಂಖ್ಯಾತ ಜನ ಮುಸ್ಲಿಮರನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ. ಇದಕ್ಕೆ ಮುಖ್ಯ ಕಾರಣ ಮುಸ್ಲಿಮರಲ್ಲಿನ ಸಂಸ್ಕಾರ. ಇಸ್ಲಾಮಿನ ಉದಾತ್ತವಾದ ಮಾನವೀಯ ಮೌಲ್ಯಗಳು ಎಂದರು.

ಎಸ್ಐಓನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಶ್ಫಾಕ್ ಶರೀಫ್ ಮಂಗಳೂರು ಮಾತನಾಡಿದರು. ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ನಿಹಾಲ್ ಕಿದಿಯೂರು ಉಪಸ್ಥಿತರಿದ್ದರು. ನಿಸಾರ್ ಅಹ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆಯಾನ್ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X