Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 33 ಲಕ್ಷ ರೂ. ವೆಚ್ಚದಲ್ಲಿ ಎರಡು...

33 ಲಕ್ಷ ರೂ. ವೆಚ್ಚದಲ್ಲಿ ಎರಡು ಜಂಕ್ಷನ್‌ಗಲ್ಲಿ ಸಿಗ್ನಲ್ ಅಳವಡಿಕೆ: ಉಡುಪಿ ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ3 Dec 2025 12:01 AM IST
share
33 ಲಕ್ಷ ರೂ. ವೆಚ್ಚದಲ್ಲಿ ಎರಡು ಜಂಕ್ಷನ್‌ಗಲ್ಲಿ ಸಿಗ್ನಲ್ ಅಳವಡಿಕೆ: ಉಡುಪಿ ಎಸ್ಪಿ
ಮಣಿಪಾಲ ಸಿಂಡಿಕೇಟ್ ಸರ್ಕಲ್ ಟ್ರಾಫಿಕ್ ಸಿಗ್ನಲ್ ಸಿಸ್ಟಮ್ ಪರಿಶೀಲನೆ

ಮಣಿಪಾಲ: ಉಡುಪಿ ನಗರದ ಕಲ್ಸಂಕ ಜಂಕ್ಷನ್ ಹಾಗೂ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ನಗರಸಭೆಯ 33 ಲಕ್ಷ ರೂ. ಅನುದಾನದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದ್ದು, ಜಂಕ್ಷನ್‌ಗಳ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚುವರಿಯಾಗಿ 12 ಲಕ್ಷ ರೂ. ಒದಗಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಲ್ಲಿ ಅಳವಡಿಸಲಾದ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವ ರೊಂದಿಗೆ ಮಾತನಾಡುತ್ತಿದ್ದರು.

ಒಂಭತ್ತು ತಿಂಗಳ ಹಿಂದೆ ಈ ಹಿಂದಿನ ಎಸ್ಪಿ ಡಾ.ಅರುಣ್ ಕುಮಾರ್ ನಗರದ ಕೆಲವು ಕಡೆ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಬಗ್ಗೆ ನಗರಸಭೆಗೆ ಪ್ರಸ್ತಾವ ಸಲ್ಲಿಸಿದ್ದರು. ಅದರಂತೆ ಇದೀಗ ನಗರಸಭೆಯವರು ಸದ್ಯಕ್ಕೆ ಎರಡು ಕಡೆ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಹಣ ಮಂಜೂರು ಮಾಡಿದ್ದಾರೆ. ಅದರಂತೆ ನಗರದ ಕಲ್ಸಂಕ ಜಂಕ್ಷನ್ ಹಾಗೂ ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದರು.

ಸಿಂಡಿಕೇಟ್ ಸರ್ಕಲ್‌ನಲ್ಲಿ ಬೆಳಗ್ಗೆ ಮತ್ತು ಸಂಜೆಯ ಪ್ರಮುಖ ಸಮಯ ಹಾಗೂ ವಾರಾಂತ್ಯದಲ್ಲಿ ತುಂಬಾ ವಾಹನ ಸಂಚಾರ ದಟ್ಟಣೆ ಇರುವುದ ರಿಂದ ಸಾಕಷ್ಟು ಗೊಂದಲಗಳು ಉಂಟಾಗುತ್ತಿವೆ. ಅಲ್ಲದೆ ಇದರಿಂದ ಮಣಿಪಾಲ ಆಸ್ಪತ್ರೆಗೆ ಹೋಗುವ ಅಂಬ್ಯುಲೆನ್ಸ್‌ಗಳಿಗೆ ಸಮಸ್ಯೆ ಆಗುತ್ತಿದೆ. ಇದನ್ನೆಲ್ಲ ಮನಗಂಡು ಸಿಂಡಿಕೇಟ್ ಸರ್ಕಲ್‌ಗೂ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಅವರು ಹೇಳಿದರು.

ಸಾಮಾನ್ಯವಾಗಿ ಸಿಗಲ್ ಲೈಟ್‌ಗಳನ್ನು 50-40 ಸೆಕೆಂಡ್‌ಗಳಿಗೆ ಸೆಟ್ ಮಾಡಿಕೊಳ್ಳಲಾಗಿದೆ. ಪ್ರಮುಖ ಸಮಯದಲ್ಲಿ 10 ಸೆಕೆಂಡ್ ಹೆಚ್ಚು ಮಾಡಬೇಕಾಗುತ್ತದೆ. ಅದಕ್ಕೆ ತಕ್ಕಂತೆ ನಾವು ಸಿಗ್ನಲ್ ಸಮಯವನ್ನು ಬದಲಾವಣೆ ಮಾಡುತ್ತೇವೆ. ಅದೇ ರೀತಿ ಸಿಂಡಿಕೇಟ್ ಸರ್ಕಲ್‌ನಲ್ಲಿ ಫ್ರೀ ಲೆಫ್ಟ್‌ಗೆ ಅಡ್ಡಿ ಪಡಿಸುತ್ತಿರುವ ಜಾಹೀರಾತು ಹೋಲ್ಡಿಂಗ್‌ನ್ನು ಬೇರೆ ಕಡೆ ಸ್ಥಳಾಂತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಒಟ್ಟಾರೆ ಇನ್ನು ಮುಂದೆ ನಗರದಲ್ಲಿನ ವಾಹನ ಸಂಚಾರ ವ್ಯವಸ್ಥಿತವಾಗಿ ನಡೆಯಲಿದೆ. ಕಡಿಮೆ ಸಂಖ್ಯೆಯ ಸಿಬ್ಬಂದಿಗಳಿಂದಲೇ ವಾಹನ ಸಂಚಾರವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ನಿಲುಗಡೆ ಮತ್ತು ಝಿಬ್ರಾ ಕ್ರಾಸಿಂಗ್ ಲೈನ್ ಇನ್ನು ಹಾಕಬೇಕಾಗಿದೆ. ಈ ಕಾರ್ಯವನ್ನು ನಗರಸಭೆ ಕೂಡಲೇ ಮಾಡಲಿದೆ ಎಂದು ಅವರು ಹೇಳಿದರು.

ಫ್ರಿ ಲೆಫ್ಟ್ ಎಲ್ಲ ಕಡೆ ಕೊಡಲು ನಾವು ಪ್ರಯತ್ನ ಮಾಡುತ್ತೇವೆ. ಸಿಂಡಿಕೇಟ್ ಸರ್ಕಲ್‌ನಲ್ಲಿ ಬೃಹತ್ ವಾಹನಗಳಿಗೆ ಫ್ರಿ ಲೆಫ್ಟ್ ಆಗಲು ತುಂಬಾ ಕಷ್ಟ ಇದೆ. ಈ ಬಗ್ಗೆ ಪರಿಶೀಲಿಸಿ, ಇಲ್ಲಿರುವ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸ ಲಾಗುವುದು. ಕೆಲವು ಕಡೆ ಫ್ರಿ ಲೆಫ್ಟ್ ಇದ್ದರೂ ವಾಹನಗಳನ್ನು ಚಲಾಯಿಸದೆ ಟ್ರಾಫಿಕ್‌ನಲ್ಲಿಯೇ ನಿಲ್ಲಿಸುತ್ತಾರೆ. ಅವರಿಗೆ ಆ ಕುರಿತು ಜಾಗೃತಿ ಮೂಡಿಸ ಬೇಕಾಗಿದೆ. ಆರಂಭದಲ್ಲಿ ಜಾಗೃತಿ ಮೂಡಿಸಿ, ಬಳಿಕ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸುವ ಕಾರ್ಯ ಮಾಡಲಾಗುವುದು ಎಂದು ಎಸ್ಪಿ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಮಣಿಪಾಲ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಉಪಸ್ಥಿತರಿದ್ದರು.

‘ಸಾಧಕ ಬಾಧಕಗಳ ಬಗ್ಗೆ ಅಧ್ಯಯನ’

ಕಲ್ಸಂಕ ಜಂಕ್ಷನ್‌ನಂತೆ ಸಿಂಡಿಕೇಟ್ ಸರ್ಕಲ್‌ನಲ್ಲಿನ ಟ್ರಾಫಿಕ್ ಸಿಗ್ನಲ್‌ನ ಸಾಧಕ ಬಾಧಕಗಳ ಬಗ್ಗೆಯೂ ಅಧ್ಯಯನ ಮಾಡಲಾಗುತ್ತಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಸಿಂಡಿಕೇಟ್ ಸರ್ಕಲ್‌ನಲ್ಲಿ ಉಡುಪಿಯಿಂದ ಜಿಲ್ಲಾಧಿಕಾರಿ ಕಚೇರಿ ಹೋಗುವ ವಾಹನಗಳು ಎಡಕ್ಕೆ ತಿರುಗಿಸಲು ಅನುಕೂಲವಾಗುವಂತೆ ಫ್ರೀ ಲೆಫ್ಟ್ ಮಾಡಲು ರಸ್ತೆಯನ್ನು ಇನ್ನಷ್ಟು ಅಗಲ ಮಾಡಬೇಕಾಗಿದೆ. ಅದೇ ರೀತಿ ಈ ಸರ್ಕಲ್ ಎತ್ತರದಲ್ಲಿ ಇರುವುದರಿಂದ ಉಡುಪಿಯಿಂದ ಮಣಿಪಾಲಕ್ಕೆ ಬರುವ ಬೃಹತ್ ಗಾತ್ರ ವಾಹನಗಳು ಏರಿಯಲ್ಲಿ ನಿಂತರೆ ಉರುಳು ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾಗಿ ಅದಕ್ಕೆ ಸರಿಯಾಗಿ ಸಿಗ್ನಲ್ ಸಮಯವನ್ನು ಹೋಂದಾಣಿಕೆ ಮಾಡಲಾಗುವುದು ಎಂದರು.

‘ಪೊಲೀಸ್ ಇಲಾಖೆಯ ಪ್ರಸ್ತಾಪದಂತೆ ಟ್ರಾಫಿಕ್ ಸಿಗ್ನಲ್‌ಗೆ ಅನುದಾನ ಒದಗಿಸಿ ಅಳವಡಿಸಲಾಗಿದೆ. ಇದಕ್ಕೆ ಇಲ್ಲಿಯ ಜನರು ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾಗತ್ತದೆ. ಆದುದರಿಂದ ಆರಂಭದಲ್ಲಿ ಸವಾರರು ಹಾಗೂ ಚಾಲಕರಿಗೆ ಜಾಗೃತಿ ಮೂಡಿಸಬೇಕಾಹಿದೆ. ಈ ಕಾರ್ಯವನ್ನು ನಾವು ಪೊಲೀಸ್ ಇಲಾಖೆ ಜೊತೆ ಸೇರಿಕೊಂಡು ಮಾಡುತ್ತೇವೆ’

-ಮಹಾಂತೇಶ್ ಹಂಗರಗಿ, ಪೌರಾಯುಕ್ತರು, ನಗರಸಭೆ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X