ಉಡುಪಿ | ಭಾರತೀಯ ಸೈನಿಕರಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

ಉಡುಪಿ : ಕಾಶ್ಮೀರದಲ್ಲಿನ ಘಟನೆಗೆ ಪ್ರತಿಕಾರವಾಗಿ ಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೈರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರ ಸೂಚನೆಯಂತೆ ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜುಮ್ಮಾ ನಮಾಝಿನ ಬಳಿಕ ಉಡುಪಿ ಜಾಮೀಯ ಮಸೀದಿಯ ಇಮಾಮ್ ಮೌಲಾನ ಅಬ್ದುರ್ರಶೀದ್ ನದ್ವಿ, ಬ್ರಹ್ಮಗಿರಿ ನಾಯರ್ ಕೆರೆ ಹಾಶ್ಮಿ ಮಸೀದಿಯ ಇಮಾಮ್ ಉಬೇದ್ರುಹಮಾನ್ ನದ್ವಿ ಸೇರಿದಂತೆ ವಿವಿಧ ಮಸೀದಿಗಳ ಖತೀಬ್, ಇಮಾಮ್ಗಳು ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅದೇ ರೀತಿ ಕಾಪು, ಪಡುಬಿದ್ರೆ, ಕಾರ್ಕಳ, ಗಂಗೊಳ್ಳಿ, ಕೋಟ, ಕುಂದಾಪುರ ಮಸೀದಿಗಳಲ್ಲಿ ಇಂದು ಜುಮಾ ನಮಾಝ್ ಬಳಿಕ ಸೈನಿಕರಿಗಾಗಿ ವಿಶೇಷ ದುವಾ ಮಾಡಲಾಯಿತು.
Next Story