Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ...

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೀವ್ರ ಆಕ್ರೋಶ

ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ‍್ಯಾಲಿ

ವಾರ್ತಾಭಾರತಿವಾರ್ತಾಭಾರತಿ2 March 2024 8:45 PM IST
share
ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ತೀವ್ರ ಆಕ್ರೋಶ

ಉಡುಪಿ: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಶನಿವಾರ ಮಲ್ಪೆಯಿಂದ ಉಡುಪಿ ಬಿಜೆಪಿ ಕಚೇರಿಯವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಮಲ್ಪೆ ಏಳೂರು ಮೊಗವೀರ ಭವನದ ಬಳಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು. ಮೀನುಗಾರ ಮುಖಂಡ ಕಿಶೋರ್ ಡಿ.ಸುವರ್ಣ ನೇತೃತ್ವದಲ್ಲಿ ಅಲ್ಲಿಂದ ಹೊರಟ ರ‍್ಯಾಲಿಯು ಆದಿಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಮಾಪ್ತಿಗೊಂಡಿತು.

ಬಳಿಕ ಕಾರ್ಯಕರ್ತರು, ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯನ್ನು ಬದಲಾಯಿಸಿ, ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಲಾಯಿತು.

ಉಡುಪಿ ಬಿಜೆಪಿ ನಗರಸಭೆ ಸದಸ್ಯ ಯೋಗೀಶ್ ಸಾಲ್ಯಾನ್ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಈ ಕ್ಷೇತ್ರದ ಅಭ್ಯರ್ಥಿಯ ಬದಲಾವಣೆಯನ್ನು ಕೇಳುತ್ತಿದ್ದಾರೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಬಳಿ ಪಕ್ಷದ ಹಿರಿಯ ಕಾರ್ಯಕರ್ತರು ಕ್ಷೇತ್ರದ ಸಮಸ್ಯೆ ತೆಗೆದುಕೊಂಡು ಹೋದಾಗ ದರ್ಪದಿಂದ ಮಾತನಾಡು ತ್ತಾರೆ. ನಾವು ಆರಿಸಿ ಕಳುಹಿಸಿದ ಜನಪ್ರತಿನಿಧಿ ಕಾರ್ಯಕರ್ತರ ಜೊತೆ ಈ ರೀತಿ ವರ್ತನೆ ಸರಿಯಲ್ಲ. ಅಲ್ಲದೆ ನಮ್ಮನ್ನೇ ಬಾಡಿಗೆ ಕಾರ್ಯಕರ್ತರು ಎಂಬುದಾಗಿ ಸಂಸದರು ಹೇಳಿಕೆ ನೀಡುತ್ತಾರೆ ಎಂದು ದೂರಿದರು.

ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಬೇಕೆಂಬ ಎಚ್ಚರಿಕೆಯ ಕರೆಗಂಟೆಯನ್ನು ಕಾರ್ಯಕರ್ತರು ನೀಡುತ್ತಿದ್ದಾರೆ. ಸುಶಿಕ್ಷಿತ ಹಾಗೂ ಭ್ರಷ್ಟಾಚಾರ ರಹಿತರಾಗಿರುವ ಮತ್ತು ಸ್ಥಳೀಯ ಹಾಗೂ ಮೀನುಗಾರರ ಸಮಸ್ಯೆ ಗಳಿಗೆ ಸ್ಪಂದಿಸುವ ಪ್ರಮೋದ್ ಮಧ್ವರಾಜ್ ಅವರಿಗೆ ಈ ಕ್ಷೇತ್ರದಲ್ಲಿ ಟಿಕೆಟ್ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಹೇಳಿದರು.

‘ನಮಗೆ ಉಡುಪಿಯಲ್ಲಿ ಬದಲಾವಣೆ ಬೇಕು. ಕಳೆದ 10ವರ್ಷಗಳಿಂದ ಒಬ್ಬರನ್ನೇ ಆಯ್ಕೆ ಮಾಡಿದ್ದೇವೆ. ಅವರು ಕೇವಲ ಮೋದಿ ಹೆಸರಿನಲ್ಲಿ ಚುನಾಯಿತರಾಗಿ ಬರುತ್ತಿದ್ದಾರೆಯೇ ಹೊರತು ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಇವರಿಗೆ ಚುನಾವಣೆ ಬಂದಾಗ ಮಾತ್ರ ಕ್ಷೇತ್ರದ ನೆನಪು ಆಗುತ್ತದೆ. ಈಗ ಮತ್ತೆ ಬಂದು ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಈ ಕ್ಷೇತ್ರದ ಅಭ್ಯರ್ಥಿ ಯಾರು ಎಂದು ಕಾರ್ಯಕರ್ತರು ಹೇಳಬೇಕೆ ಹೊರತು ಇವರೇ ಹೇಳುವುದಲ್ಲ. ಐದು ವರ್ಷಗಳಿಗೆ ಒಮ್ಮೆ ಕ್ಷೇತ್ರಕ್ಕೆ ಬಂದರೆ ಅಭಿವೃದ್ಧಿ ಹೇಗೆ ಆಗಲು ಸಾಧ್ಯ. ಸಂಸದರಿಗೆ ಮಲ್ಪೆ ಬಂದರಿಗೆ ಕೇವಲ 3ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸಲು ಇನ್ನೂ ಸಾಧ್ಯವಾಗಿಲ್ಲ’ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

‘ಕ್ಷೇತ್ರದ ಅಭ್ಯರ್ಥಿಗೆ ಸಂಬಂಧಿಸಿದಂತೆ ಕಾರ್ಯಕರ್ತರು ಭಿನ್ನ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದನ್ನು ಯಾವ ರೀತಿಯಲ್ಲಿ ಸ್ವೀಕರಿಸಬೇಕು ಮತ್ತು ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಪಕ್ಷದಲ್ಲಿ ವ್ಯವಸ್ಥೆ ಇದೆ ಮತ್ತು ಮಾನದಂಡಗಳಿವೆ. ಆ ತಂಡ ಸೂಕ್ತವಾದ ನಿರ್ದೇಶನವನ್ನು ನೀಡುತ್ತದೆ. ಅದನ್ನು ನಾವು ಪಾಲಿಸುತ್ತೇವೆ’

-ಕಿಶೋರ್ ಕುಮಾರ್ ಕುಂದಾಪುರ, ಅಧ್ಯಕ್ಷರು, ಬಿಜೆಪಿ, ಉಡುಪಿ




share
ವಾರ್ತಾಭಾರತಿ
ವಾರ್ತಾಭಾರತಿ
Next Story
X