Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ದೇಶ ಕಟ್ಟಿದವರ ಬಗ್ಗೆ ಅರಿಯುವ...

ಉಡುಪಿ | ದೇಶ ಕಟ್ಟಿದವರ ಬಗ್ಗೆ ಅರಿಯುವ ಅನಿವಾರ್ಯತೆ ಹಿಂದಿಗಿಂತಲೂ ಈಗ ಹೆಚ್ಚಿದೆ: ಸುಧಾಕರ ದೇವಾಡಿಗ

ವಾರ್ತಾಭಾರತಿವಾರ್ತಾಭಾರತಿ24 Nov 2025 4:42 PM IST
share
ಉಡುಪಿ | ದೇಶ ಕಟ್ಟಿದವರ ಬಗ್ಗೆ ಅರಿಯುವ ಅನಿವಾರ್ಯತೆ ಹಿಂದಿಗಿಂತಲೂ ಈಗ ಹೆಚ್ಚಿದೆ: ಸುಧಾಕರ ದೇವಾಡಿಗ

ಉಡುಪಿ, ನ.24: ಈ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ ಮಹನೀಯರ ಬಗ್ಗೆ ನಮಗೆ ಗೊತ್ತಿಲ್ಲದೆ ಅವರ ಬಗ್ಗೆ ತಪ್ಪು ಸಂಗತಿಗಳನ್ನು ಪ್ರಸರಿಸುವ ಮಂದಿಯ ಮೋಡಿಗೆ ನಾವು ಬಲಿಯಾಗಿ ಅವರ ಬಗ್ಗೆ ತಪ್ಪು ಅಭಿಪ್ರಾಯವನ್ನು ಹೊಂದಿರುತ್ತೇವೆ. ಹಾಗಾಗಿ ದೇಶದ ಸ್ವತಂತ್ರ ಚಳವಳಿಗಳಲ್ಲಿ ಭಾಗವಹಿಸಿ ದೇಶ ಕಟ್ಟಿದ ಗಾಂಧಿ, ನೆಹರೂ, ವಲ್ಲಭಬಾಯಿ ಪಟೇಲ್, ಶುಭಾಸ್ ಚಂದ್ರ ಬೋಸ್ ಇವರ ಬಗ್ಗೆ ನಾವು ತಿಳಿದು ಕೊಳ್ಳಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಈಗ ಹೆಚ್ಚಿದೆ ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಧಾರ್ಕ ದೇವಾಡಿಗ ಹೇಳಿದ್ದಾರೆ.

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಸೈಂಟ್ ಪ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಜರಗಿದ ನೆಹರು ಜಯಂತಿ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ದೇಶದ ಪ್ರಥಮ ಪ್ರಧಾನಿಯಾದ ನೆಹರೂರವರು ಪ್ರಧಾನಿಯಾಗಿ ಈ ದೇಶದ ಆಡಳಿತವನ್ನು ಕೈಗೆತ್ತಿಕೊಂಡಾಗ ಈ ದೇಶ ಬಡತನದಿಂದ ಕೂಡಿತ್ತು. ದೇಶದಲ್ಲಿ ನಿರಾಶ್ರಿತರ ಸಮಸ್ಯೆ ನಿರುದ್ಯೋಗದ ಸಮಸ್ಯೆ ತಾಂಡವ ಮಾಡುತ್ತಿತ್ತು. ಪಂಚವಾರ್ಷಿಕ ಯೋಜನೆಯ ಮೂಲಕ ದೇಶದಲ್ಲಿ ಕೈಗಾರಿಕೆ ಮತ್ತು ಕೃಷಿಗೆ ಪ್ರಾಧಾನ್ಯತೆ ಕೊಟ್ಟು ನೆಹರೂರವರು ದೇಶವನ್ನು ಕಟ್ಟಿದರು. ಹುಟ್ಟಿನಿಂದಲೇ ಅಗರ್ಭ ಶ್ರೀಮಂತರಾದ ನೆಹರೂರವರು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೈಗೊಂಡ ಯೋಜನೆಗಳು ಸಮ ಸಮಾಜದ ಕನಸು ಸಾಕಾರಗೊಳಿಸುವಲ್ಲಿ ಮೊದಲ ಹೆಜ್ಜೆ ಇಟ್ಟಿದ್ದವು ಎಂದರು.

ನೆಹರೂರವರನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಮತ್ತು ಇವತ್ತಿನ ಯುವ ತಲೆಮಾರಿಗೆ ಸರಿಯಾಗಿ ಅರ್ಥ ಮಾಡಿಸದೆ ದೇಶ ಕಟ್ಟಿದ ಮಹನೀಯರನ್ನು ಅವಮಾನಿಸಲಾಗುತ್ತಿದೆ. ರಾಜಕೀಯ ಕಾರಣಗಳಿಗಾಗಿ ಮಾಡುತ್ತಿರುವ ಈ ತಪ್ಪನ್ನು ಯುವ ಜನರು ಅರ್ಥ ಮಾಡಿಕೊಂಡು ಅವರ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕೆಲಸವನ್ನು ಬಿಡಬೇಕು ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯನಿ ಸಿಂತಿಯಾ ಪಿರೇರ ಮಾತನಾಡಿದರು. ಕೋಶಾಧಿಕಾರಿ ಸತೀಶ್ ಡಿ.ಸಾಲಿಯಾನ್ ಉಪಸ್ಥಿತರಿದ್ದರು

ಸಂಸ್ಥೆಯ ಅಧ್ಯಕ್ಷ ಗಿರೀಶ್ ಗುಡ್ಡೆಯಂಗಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ವಂದಿಸಿದರು. ಮಾಜಿ ಅಧ್ಯಕ್ಷರಾದ ಅನುಪ್ ಕುಮಾರ್ ಮತ್ತು ತಿಲಕ್‌ರಾಜ್ ಸಾಲಿಯಾನ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X