Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ...

ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ22 Nov 2025 9:51 PM IST
share
ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ

ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನ.23ರಂದು ಸಂಜೆ 5 ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಈ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಡಾ.ಕೆ. ವಿ.ನಾಗರಾಜ ಮೂರ್ತಿ, ಉದ್ಯಮಿಗಳಾದ ರಂಜನ್, ಸತ್ಯಾನಂದ ನಾಯಕ್ ಹಾಗೂ ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ವನಿತಾ ಮಯ್ಯ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಾಡಿನ ಸಾಂಸ್ಕೃತಿಕ ರಂಗಕ್ಕೆ ಅಭೂತಪೂರ್ವ ಕೊಡುಗೆ ನೀಡಿರುವ ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಡಾ.ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಗುವುದು. ರಂಗಭೂಮಿಯ ಕಲಾವಿದರಿಂದ ಗೀತಂ ಗಿರೀಶ್ ನೇತೃತ್ವದಲ್ಲಿ ’ಸಂಗೀತ ಸೌರಭ’ ಕಾಠ್ಯಕ್ರಮ ಸಭಾ ಕಾರ್ಯಕ್ರಮದ ಮೊದಲು ಸಂಜೆ 4 ಗಂಟೆಗೆ ನಡೆಯಲಿದೆ ಎಂದರು.

ಡಾ.ಟಿಎಂಎ ಪೈ, ಎಸ್.ಎಲ್. ನಾರಾಯಣ ಭಟ್ ಮತ್ತು ಮಲ್ಪೆ ಮಧ್ವರಾಜ ಸ್ಮಾರಕ ನಡೆಯುವ ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿದೆಡೆಗಳಿಂದ ಅತ್ಯುತ್ತಮ 12 ತಂಡಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಬೆಂಗಳೂರಿನ 6, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ತಲಾ 2 ಮತ್ತು ತುಮಕೂರು ಹಾಗೂ ಮೈಸೂರು ಜಿಲ್ಲೆಯ ತಲಾ 1 ತಂಡ ಭಾಗವಹಿಸಲಿವೆ.

ಒಟ್ಟು 12 ದಿನಗಳಲ್ಲಿ 12 ನಾಟಕಗಳು ಪ್ರತಿದಿನ ಸಂಜೆ 6:30ಕ್ಕೆ ಪ್ರದರ್ಶನಗೊಳ್ಳಲಿವೆ. ಈ ಬಾರಿ ಪ್ರಥಮ ಬಹುಮಾನ ಪಡೆದ ತಂಡಕ್ಕೆ 35,000 ರೂ., ದ್ವಿತೀಯ ಸ್ಥಾನಿಗೆ 25,000 ರೂ. ಹಾಗೂ ತೃತೀಯ ಸ್ಥಾನಿಗೆ 15,000 ರೂ. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಪ್ರಸಾಧನ, ರಂಗಪರಿಕರ, ಸಂಗೀತ, ಬೆಳಕು, ಹಾಸ್ಯನಟ, ಬಾಲನಟ, ಶಿಸ್ತಿನ ತಂಡಗಳಿಗೆ ನಗದು ಸಹಿತ ಪುರಸ್ಕಾರ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯ ಉಪಾಧ್ಯಕ್ಷ ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ಚಂದ್ರ ಕುತ್ಪಾಡಿ, ವಿವೇಕಾನಂದ ಎನ್., ಯು. ಭೋಜ ಉಪಸ್ಥಿತರಿದ್ದರು.

ಪ್ರದರ್ಶನಗೊಳ್ಳುವ ನಾಟಕಗಳು

ನ.23ರಂದು ಗುಬ್ಬಿವೀರಣ್ಣ ಶಿಕ್ಷಣ ಕಲಾತಂಡ ತುಮಕೂರು ಇವರಿಂದ ಗೌತಮ ಬುದ್ಧ (ನಿರ್ದೇಶನ: ಭಾನುಪ್ರಕಾಶ್ ಎಸ್.ವಿ.), ನ.24ರಂದು ಅಂತರಂಗ - ಬಹಿರಂಗ ಬೆಂಗಳೂರು ತಂಡದಿಂದ ‘ಅನುಗ್ರಹ’ (ಭಾಷ್ ರಾಘವೇಂದ್ರ), ನ.25ರಂದು ಪುನಃ ಥಿಯೇಟರ್ ಉಡುಪಿಯಿಂದ ‘ಯೋಗಿ ಮತ್ತು ಭೋಗಿ’ (ಮಹೇಶ್ ದತ್ತಾನಿ), ನ.26ರಂದು ಮೈಸೂರಿನ ನೇಪಥ್ಯ ರಂಗತಂಡದಿಂದ ‘ಒಡಲಾಳ’ (ಸಾಗರ್ ಗುಂಬಳ್ಳಿ),ನ.27ರಂದು ಸುಮನಸಾ ಕೊಡವೂರು ಉಡುಪಿ ತಂಡದಿಂದ ‘ಈದಿ’(ವಿದ್ದು ಉಚ್ಚಿಲ), ನ.28ರಂದು ಬೆಂಗಳೂರಿನ ಸಂಚಯ ತಂಡದಿಂದ ‘ವಿಶ್ವಾಮಿತ್ರ ಮೇನಕೆ ಡ್ಯಾನ್ಸ್ ಮಾಡೋದು ಏನಕೆ? (ಚಿತ್ರಶೇಖರ್ ಎನ್.ಎಸ್.).

ನ.29ರಂದು ಬೆಂಗಳೂರಿನ ಕ್ರಾನಿಕಲ್ಸ್ ಆಫ್ ಇಂಡಿಯಾ ತಂಡದಿಂದ ‘ಶಿವೋಹಂ’ (ಗಣೇಶ್ ಮಂದಾರ್ತಿ), ನ.30ರಂದು ಬೆಂಗಳೂರಿನ ನಮ್ದೆ ನಟನೆ ತಂಡದಿಂದ ‘ಮಗಳೆಂಬ ಮಲ್ಲಿಗೆ’ (ರಾಜೇಂದ್ರ ಕಾರಂತ), ಡಿ.1ರಂದು ನೆನಪು ಕಲ್ಬರಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ‘ಮಾಯಾ ದ್ವೀಪ’ (ಪುನೀತ್ ಎ.ಎಸ್.), ಡಿ.2ರಂದು ತೀರ್ಥಹಳ್ಳಿ ನಟಮಿತ್ರರು ಹವ್ಯಾಸಿ ಕಲಾತಂಡದಿಂದ ‘ಆ ಊರು ಈ ಊರು’ (ಹುಲುಗಪ್ಪ ಕಟ್ಟೀಮನಿ), ಡಿ.3ರಂದು ಸಾಗರದ ಸ್ಪಂದನ ತಂಡ ದಿಂದ ‘ಪ್ರಾಣಪದ್ಮಿನಿ’ (ಮಂಜುನಾಥ ಎಲ್.ಬಡಿಗೇರ), ಡಿ.4ರಂದು ಬೆಂಗಳೂರು ರೇವಾ ರಂಗ ಅಧ್ಯಯನ ತಂಡದಿಂದ ‘ದರ್ಶನಂ’ (ನಂದಕುಮಾರ್ ಅನ್ನಕ್ಕನವರ್) ನಾಟಕ ಪ್ರದರ್ಶನಗೊಳ್ಳಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X