Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ:...

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಸಿಐಡಿ ಎಡಿಜಿಪಿ ಮನೀಶ್ ಭೇಟಿ; ತನಿಖೆ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ10 Aug 2023 7:15 PM IST
share
ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಸಿಐಡಿ ಎಡಿಜಿಪಿ ಮನೀಶ್ ಭೇಟಿ; ತನಿಖೆ ಪ್ರಗತಿ ಪರಿಶೀಲನೆ

ಉಡುಪಿ, ಆ.10: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಆಗಮಿಸಿದ ಸಿಐಡಿ ತಂಡದ ತನಿಖೆ ಮುಂದುವರಿದಿದ್ದು, ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಿ ಈವರೆಗಿನ ತನಿಖೆಯ ಪ್ರಗತಿಯನ್ನು ಪರಿಶೀಲಿಸಿದರು.

ಪ್ರಕರಣದ ಕುರಿತಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ಉಡುಪಿಯ ಎಸ್ಪಿ ಅಕ್ಷಯ್ ಎಂ.ಹಾಕೆ ಸಹಿತ ಹಿರಿಯ ಅಧಿಕಾರಿಗಳಿಂದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡ ಮನೀಶ್, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಉಡುಪಿ ಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದರು.

ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸರು ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಎಂದು ಈ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಪ್ರಕರಣದ ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ತನಿಖೆಯ ಮೇಲ್ವಿಚಾರಣೆ ಪ್ರಯನ್ನು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಶೀಘ್ರ ತನಿಖಾಧಿಕಾರಿ ಕೈ ಸೇರಲಿದೆ ಎಂದರು.

ಪ್ರಕರಣದ ತನಿಖೆ ಮುಗಿದ ಬಳಿಕ ಕೋರ್ಟಿಗೆ ವರದಿ ಸಲ್ಲಿಸುತ್ತೇವೆ ಎಂದ ಅವರು ತನಿಖೆಯ ದೃಷ್ಟಿಯಿಂದ ಮೂರು ಮೊಬೈಲ್‌ನ ಎಫ್‌ಎಸ್‌ಎಲ್ ವರದಿಗೆ ಎಷ್ಟು ಮಹತ್ವವಿದೆ ಎಂದು ಪ್ರಶ್ನಿಸಿದಾಗ, ಅವು ತನಿಖೆಯ ಒಂದು ಭಾಗವಾಗಿರುತ್ತದೆ ಎಂದರು.

ಪ್ಲಾಸ್ಟಿಕ್ ಗೊಂಬೆ ಬಳಕೆ: ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಎಡಿಜಿಪಿ ಅವರು ಬಳಿಕ ಘಟನೆ ನಡೆದ ಅಂಬಲಪಾಡಿಯ ಪ್ಯಾರಾ ಮೆಡಿಕಲ್ ಕಾಲೇಜಿಗೆ ತೆರಳಿ ಪರಿಶೀಲನೆ ನಡೆಸಿದರು.

ಘಟನೆಯನ್ನು ಮರು ಸೃಷ್ಟಿಸಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಸಿಐಡಿ ಅಧಿಕಾರಿಗಳು ಪ್ಲಾಸ್ಟಿಕ್ ಗೊಂಬೆಯೊಂದನ್ನು ತಮ್ಮೊಂದಿಗೆ ತಂದಿದ್ದು, ಅದನ್ನು ಘಟನಾ ಸ್ಥಳದಲ್ಲಿರಿಸಿ ವಿಡಿಯೋ ಚಿತ್ರೀಕರಣದ ಘಟನೆಯನ್ನು ಮರು ಸೃಷ್ಟಿಸುವ ಪ್ರಯತ್ನ ನಡೆಸಿದ್ದಾರೆ.

ಸಿಐಡಿ ತಂಡ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ಈಗಾಗಲೇ ಆಡಳಿತ ಮಂಡಳಿ ನಿರ್ದೇಶಕಿ ರಶ್ಮಿ ಹಾಗೂ ಇತರರನ್ನು ವಿಚಾರಣೆಗೆ ಒಳಪಡಿಸಿದೆ. ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X