Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಭರತನಾಟ್ಯದಲ್ಲಿ ವಿದುಷಿ ದೀಕ್ಷಾ...

ಉಡುಪಿ: ಭರತನಾಟ್ಯದಲ್ಲಿ ವಿದುಷಿ ದೀಕ್ಷಾ ವಿಶ್ವದಾಖಲೆ !

ವಾರ್ತಾಭಾರತಿವಾರ್ತಾಭಾರತಿ30 Aug 2025 8:06 PM IST
share
ಉಡುಪಿ: ಭರತನಾಟ್ಯದಲ್ಲಿ ವಿದುಷಿ ದೀಕ್ಷಾ ವಿಶ್ವದಾಖಲೆ !
► 216 ಗಂಟೆಗಳ ಕಾಲ ನಿರಂತರ ನೃತ್ಯ ಪ್ರದರ್ಶನ ► ಪ್ರಮಾಣಪತ್ರ ಪ್ರದಾನ

ಉಡುಪಿ, ಆ.30: ಕಳೆದ 9 ದಿನಗಳಿಂದ ಒಟ್ಟು 216 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿಸುವ ಮೂಲಕ ವಿದುಷಿ ದೀಕ್ಷಾ ವಿ. ವಿಶ್ವ ದಾಖಲೆಯನ್ನು ಬರೆದಿದ್ದಾರೆ.

ಮಣಿಪಾಲ ರತ್ನ ಸಂಜೀವ ಕಲಾ ಮಂಡಲದ ನೇತೃತ್ವದಲ್ಲಿ ಬ್ರಹ್ಮಾವರ ಆರೂರು ಗ್ರಾಮದ ವಿದುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ.21ರಂದು ಮಧ್ಯಾಹ್ನ 3.30ಗಂಟೆಗೆ ಆರಂಭಿಸಿದ ಭರತ ನಾಟ್ಯವನ್ನು ಆ.30ರ ಮಧ್ಯಾಹ್ನ 3.30ಕ್ಕೆ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಅವರು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಈ ಹಿಂದೆ ಮಂಗಳೂರಿನ ರೆಮೋನಾ ಎವೆಟ್ಟೆ ಪೆರೇರಾ 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶಿ ಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ್ದರು. ಇದೀಗ ದೀಕ್ಷಾ ಈ ದಾಖಲೆಯನ್ನು ಮುರಿದು ಸಾಧನೆ ಮಾಡಿದ್ದಾರೆ.

ಪ್ರಮಾಣಪತ್ರ ಪ್ರದಾನ: ಶನಿವಾರ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ವಿಶ್ವದಾಖಲೆ ಬರೆದ ದೀಕ್ಷಾ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಏಷ್ಯಾ ಮುಖ್ಯಸ್ಥ ಮನೀಶ್ ಬಿಷ್ಣೋಯ್ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ದೀಕ್ಷಾ ಅವರನ್ನು ಅಭಿನಂದಿಸಿದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಭಕ್ತಿ ಇದ್ದಲ್ಲಿ ಭಗವಂತ ಇದ್ದರೆ ಶ್ರಮ ಇದ್ದಲ್ಲಿ ಫಲ ಇರುತ್ತದೆ. ಇವರ ಶ್ರಮದಿಂದ ಈ ದೊಡ್ಡ ಸಾಧನೆ ಸಾಧ್ಯವಾಗಿದೆ. ಹುಟ್ಟು ಅಕಸ್ಮಿಕ, ಸಾವು ನಿಶ್ಚಿತ ಇದರ ಮಧ್ಯೆ ನಾವು ಮಾಡಿರುವ ಸಾಧನೆ ಶಾಶ್ವತವಾಗಿರುತ್ತದೆ. ದೀಕ್ಷಾ ಮುಂದೆ ಇನ್ನಷ್ಟು ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ಪ್ರಸಾದ್‌ರಾಜ್ ಕಾಂಚನ್, ಜಯಪ್ರಕಾಶ್ ಹೆಗ್ಡೆ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ರಘುಪತಿ ಭಟ್, ವಿನಯ ಕುಮಾರ್ ಸೊರಕೆ, ಉದ್ಯಮಿ ಜಿ.ಶಂಕರ್, ಶಾಮಿಲಿ ಶಂಕರ್, ಬಿ.ಎನ್.ಶಂಕರ ಪೂಜಾರಿ, ಡಾ.ರೋಶನ್ ಕುಮಾರ್ ಶೆಟ್ಟಿ, ವಿದುಷಿ ಉಷಾ ಹೆಬ್ಬಾರ್, ಪ್ರೊ.ಸೋಜನ್, ಮೊದಲಾದವರು ಉಪಸ್ಥಿತರಿದ್ದರು.

ವಿದುಷಿ ದೀಕ್ಷಾ ಅವರ ತಂದೆ ವಿಠಲ್, ತಾಯಿ ಶುಭಾ, ಪತಿ ರಾಹುಲ್, ಗುರು ಶ್ರೀಧರ ಬನ್ನಂಜೆ ವೇದಿಕೆಯಲ್ಲಿದ್ದರು. ರತ್ನ ಸಂಜೀವ ಕಲಾ ಮಂಡಲದ ಅಧ್ಯಕ್ಷ ಮಹೇಶ್ ಠಾಕೂರು ಸ್ವಾಗತಿಸಿದರು. ಕಲಾವಿದ ಯಶವಂತ್ ಎಂ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X