Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಡಿ.16ರಂದು ಮಹಿಳೆಯರ ಮೌನ...

ಉಡುಪಿ | ಡಿ.16ರಂದು ಮಹಿಳೆಯರ ಮೌನ ಮೆರವಣಿಗೆ, ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ13 Dec 2025 8:37 PM IST
share
ಉಡುಪಿ | ಡಿ.16ರಂದು ಮಹಿಳೆಯರ ಮೌನ ಮೆರವಣಿಗೆ, ಸಮಾವೇಶ
ಕಿಡಿಗೇಡಿಗಳ ಅಪಪ್ರಚಾರ, ಸುಳ್ಳಿಗೆ ಕಿವಿಗೋಡಬೇಡಿ: ಜ್ಯೋತಿ ಎ.

ಉಡುಪಿ, ಡಿ.13: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ದಶಕಗಳಿಂದ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಕೊಲೆ, ದೌರ್ಜನ್ಯ, ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳ ಕುರಿತಂತೆ ಸಮರ್ಪಕ ರೀತಿಯ ತನಿಖೆ ನಡೆಸಿ, ಸತ್ಯವನ್ನು ಹೊರತರಲು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇದೇ ಡಿ.16ರಂದು ಕೊಂದವರು ಯಾರು ಅಭಿಯಾನ ಬೆಳ್ತಂಗಡಿಯಲ್ಲಿ ಮಹಿಳಾ ಮೌನ ಮೆರವಣಿಗೆ ಹಾಗೂ ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಮಹಿಳಾ ನ್ಯಾಯ ಸಮಾವೇಶವನ್ನು ಆಯೋಜಿಸಿದೆ ಎಂದು ಅಭಿಯಾನದ ಪ್ರಮುಖರಾದ ಜ್ಯೋತಿ ಎ. ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 20ಕ್ಕೂ ಅಧಿಕ ಮಹಿಳಾ ಸಂಘಟನೆಗಳು ಸೇರಿ ‘ಕೊಂದವರು ಯಾರು ?’ ಅಭಿಯಾನವನ್ನು ನಡೆಸುತಿದ್ದು, ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಮಹಿಳೆಯರ ಮೇಲೆ ಅಪರಾಧ ಕೃತ್ಯಗಳು ನಡೆದು ಒಂದೇ ಒಂದು ಪ್ರಕರಣ ಪತ್ತೆಯಾಗದಿರುವ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಹೊಸದಿಲ್ಲಿಯಲ್ಲಿ ನಿರ್ಭಯ ಅತ್ಯಾಚಾರ, ಹತ್ಯೆ ನಡೆದ ದಿನ ಹಾಗೂ ಅತ್ಯಾಚಾರ ವಿರೋಧಿ ದಿನದಂದೇ ಮಹಿಳೆಯ ಘನತೆ, ಹಕ್ಕು ಹಾಗೂ ಸಮಾನತೆಗಾಗಿ ಒತ್ತಾಯಿಸಿ ಈ ಸಮಾವೇಶ ನಡೆಯುತ್ತಿದೆ ಎಂದವರು ವಿವರಿಸಿದರು.

ನಾವು ನಡೆಸುತ್ತಿರುವ ಈ ಹೋರಾಟ ಯಾವುದೇ ವ್ಯಕ್ತಿ, ಸಂಸ್ಥೆ, ಧರ್ಮದ ವಿರುದ್ಧವಲ್ಲ. ನಾವು ಯಾರನ್ನೂ ಅಪರಾಧಿಗಳೆಂದು ಗುರುತಿಸಿಲ್ಲ, ಹೆಸರಿಸಿಲ್ಲ. ಕಳೆದ ನಾಲ್ಕು ದಶಕಗಳಿಂದ ಧರ್ಮಸ್ಥಳ ಹಾಗೂ ಆಸುಪಾಸಿನಲ್ಲಿ ನಡೆದಿರುವ ಅಸಂಖ್ಯಾತ ಮಹಿಳೆಯರ ಅಸಹಜ ಸಾವು, ಅತ್ಯಾಚಾರ, ದೌರ್ಜನ್ಯ ಹಾಗೂ ನಾಪತ್ತೆ ಪ್ರಕರಣಗಳಿಗೆ ಕಾರಣ ಯಾರು ಎಂಬುದನ್ನು ತನಿಖೆ ನಡೆಸಿ ತಪ್ಪಿತಸ್ಥರನ್ನು ಗುರುತಿಸಿ ಅವರಿಗೆ ಶಿಕ್ಷೆ ಕೊಡಿ. ಈ ಮೂಲಕ ಅಸಂಖ್ಯಾತ ಹೆಣ್ಣು ಮಕ್ಕಳಿಗೆ ಹಾಗೂ ಅವರ ಕುಟುಂಬಿಕರಿಗೆ ನ್ಯಾಯ ಒದಗಿಸಿಕೊಡಿ ಎಂಬುದೇ ಸರಕಾರ ಹಾಗೂ ಇದಕ್ಕಾಗಿಯೇ ನೇಮಕಗೊಂಡ ಎಸ್ಐಟಿಗೆ ನಮ್ಮ ಒತ್ತಾಯಪೂರ್ವಕ ಆಗ್ರಹವಾಗಿದೆ. ಇದಕ್ಕಾಗಿಯೇ ವಿವಿಧೆಡೆ ನಡೆದ ಹೋರಾಟವನ್ನು ನಾವೀಗ ಬೆಳ್ತಂಗಡಿಯಲ್ಲಿ ಆಯೋಜಿಸುತಿದ್ದೇವೆ ಎಂದವರು ಹೇಳಿದರು.

ಧರ್ಮಸ್ಥಳದ ಆಸುಪಾಸಿನಲ್ಲಿ ನಡೆದ ಅಸಹಜ ಸಾವಿನ ಕುರಿತಂತೆ ತನಿಖೆ ನಡೆಸಲೆಂದೇ ರಾಜ್ಯ ಸರಕಾರದಿಂದ ನೇಮಕಗೊಂಡ ಎಸ್ಐಟಿ, ಸರಕಾರ ಹೊರಡಿಸಿದ ಆದೇಶದಲ್ಲಿ ತಿಳಿಸಿರುವಂತೆ ಇಲ್ಲಿ ದಾಖಲಾಗಿರುವ, ದಾಖಲಾಗುವ ಎಲ್ಲಾ ಅಪರಾಧ ಪ್ರಕರಣಗಳ ತನಿಖೆ ನಡೆಸಬೇಕು. ಇದರಲ್ಲಿ ನೊಂದ ಮಹಿಳೆಯರಿಗೆ ನ್ಯಾಯದೊರಕಿಸುವುದಕ್ಕೆ ಅವರು ಆದ್ಯತೆ ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕರಣಗಳ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಯಾರ ವಿರುದ್ಧವೆಲ್ಲಾ ಆರೋಪ ಮಾಡಲಾಗಿದೆಯೋ ಅಂಥ ಶಂಕಿತ ಆರೋಪಿಗಳೆಲ್ಲರ ವಿಚಾರಣೆಯನ್ನೂ ಮಾಡಬೇಕೆಂಬುದು ಎಸ್ಐಟಿಗೆ ನಮ್ಮ ಒತ್ತಾಯವಾಗಿದೆ. ಕೊಂದವರು ಯಾರು, ಅತ್ಯಾಚಾರಿಗಳು ಯಾರು ಎಂಬುದನ್ನು ನಾವು ಬೊಟ್ಟು ಮಾಡುವುದಿಲ್ಲ. ಅದನ್ನು ಸರಕಾರ ಹಾಗೂ ಎಸ್ಐಟಿ ಕಂಡುಕೊಳ್ಳಬೇಕು ಎಂದು ಜ್ಯೋತಿ ಎಸ್. ಹೇಳಿದರು.

ಇದು ನೊಂದ ಮಹಿಳೆಯರಿಗೆ ನ್ಯಾಯ ನೀಡುವಂತೆ ಆಗ್ರಹಿಸಿ ಮಹಿಳೆಯರೇ, ಮಹಿಳೆಯರಿಗಾಗಿ ಆಯೋಜಿಸುತ್ತಿರುವ ಹೋರಾಟವಾಗಿದೆ. ಇದರಲ್ಲಿ ಡಿ.16ರಂದು ಬೆಳಗ್ಗೆ 10ಗಂಟೆಗೆ ಮಹಿಳೆಯರು ಮಾರಿಗುಡಿಯಿಂದ ಬೆಳ್ತಂಗಡಿ ತಾಲೂಕು ಕಚೇರಿಯವರೆಗೆ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಮೌನ ಮೆರವಣಿಗೆ ನಡೆಸಲಿದ್ದಾರೆ. ಬಹಿರಂಗ ಸಭಾ ಕಾರ್ಯಕ್ರಮದಲ್ಲಿ ಮಾತ್ರ ಪ್ರಮುಖರ ಭಾಷಣಗಳಿರುತ್ತವೆ ಎಂದೂ ಜ್ಯೋತಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಪ್ರಮುಖರಾದ, ಸೌಜನ್ಯ ಪರ ಹೋರಾಟಗಾರ್ತಿ ಶಶಿಕಲಾ ಶೆಟ್ಟಿ, ಗೀತಾ ಸುರತ್ಕಲ್, ವಸಂತಿ ಶಿವಾನಂದ ಹಾಗೂ ಕುಸುಮ ಕಟ್ಕೆರೆ ಉಪಸ್ಥಿತರಿದ್ದರು.

ಸಮಾವೇಶ ರದ್ದಾಗಿಲ್ಲ.... :

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಇತರ ಮಾಧ್ಯಮಗಳ ಮೂಲಕ ಡಿ.16ರ ಮಹಿಳಾ ನ್ಯಾಯ ಸಮಾವೇಶದ ಕುರಿತಂತೆ ಕಿಡಿಗೇಡಿಗಳು ಅಪಪ್ರಚಾರ ನಡೆಸುತ್ತಿದ್ದಾರೆ. ಸಮಾವೇಶ ರದ್ದಾಗಿದೆ ಎಂದು ಸುಳ್ಳು ಮಾಹಿತಿಯನ್ನು ಹರಿಯಬಿಟ್ಟಿದ್ದಾರೆ.

ಇಂಥ ಮಾಹಿತಿಗಳನ್ನು ಯಾರೂ ನಂಬಬಾರದೆಂದು ವಿನಂತಿಸಿದ ಜ್ಯೋತಿ ಅವರು, ಡಿ.16ರಂದು ಖಂಡಿತ ಸಮಾವೇಶ ನಡೆದೇ ನಡೆಯುತ್ತದೆ. ಸಮಾವೇಶಕ್ಕಾಗಿ ಬೇಕಾದ ಎಲ್ಲಾ ಪರವಾನಿಗೆಯನ್ನು ವಿವಿಧ ಇಲಾಖೆಗಳಿಂದ ಈಗಾಗಲೇ ಪಡೆದುಕೊಂಡಿದ್ದೇವೆ. ಆದ್ದರಿಂದ ಯಾವುದೇ ಮೂಲದಿಂದ ಇಂಥ ಸುದ್ದಿ ಬಂದರೆ ನಂಬಬೇಡಿ. ಏನಾದರೂ ಬದಲಾವಣೆ ಇದ್ದರೆ, ನಾವೇ ಅಧಿಕೃತವಾಗಿ ನಿಮಗೆ ತಿಳಿಸುತ್ತೇವೆ. ಅಂಥ ಸಾಧ್ಯತೆ ಇಲ್ಲ. ಹೀಗಾಗಿ ಡಿ.16ರ ಸಮಾವೇಶ ನಡೆದೇ ನಡೆಯುತ್ತದೆ ಎಂದವರು ಹೇಳಿದರು.

ಅತ್ಯಾಚಾರ, ಅಸಹಜ ಸಾವಿನ ಕುರಿತಂತೆ ತನಿಖೆಗಾಗಿ ನೇಮಕಗೊಂಡ ಎಸ್ಐಟಿ ತನಿಖೆ, ಇದೀಗ ಬುರುಡೆ ಪ್ರಕರಣದ ಬಗ್ಗೆ ಮಾತ್ರ ತನಿಖೆ ನಡೆಸುವ ಗುಮಾನಿ ನಮಗೂ ಇದೆ. ದೂರು ಕೊಟ್ಟವರ ವಿರುದ್ಧವೇ ತನಿಖೆ ನಡೆಯುತ್ತಿರುವ ಸುದ್ದಿ ಕೇಳಿಬರುತಿದ್ದು, ಇದರ ಕುರಿತೂ ನಾವು ಸ್ಪಷ್ಟನೆ ಬಯಸುತ್ತೇವೆ ಎಂದರು.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X