Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭೂಗತ ಪಾತಕಿ ಬನ್ನಂಜೆ ರಾಜ ತಂದೆಯ...

ಭೂಗತ ಪಾತಕಿ ಬನ್ನಂಜೆ ರಾಜ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿ

ಮೇ 14ರವರೆಗೆ ಷರತ್ತುಬದ್ಧ ಪೆರೋಲ್ ರಜೆ: ಬಿಗಿ ಪೊಲೀಸ್ ಭದ್ರತೆ

ವಾರ್ತಾಭಾರತಿವಾರ್ತಾಭಾರತಿ4 May 2025 3:01 PM IST
share
ಭೂಗತ ಪಾತಕಿ ಬನ್ನಂಜೆ ರಾಜ ತಂದೆಯ ಅಂತ್ಯಸಂಸ್ಕಾರದಲ್ಲಿ ಭಾಗಿ

ಉಡುಪಿ, ಮೇ 4: ತಂದೆಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೈಕೋರ್ಟ್ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್‌ನಲ್ಲಿ ಉಡುಪಿಗೆ ಕರೆತಂದಿದ್ದಾರೆ.

ಎ.27ರಂದು ನಿಧನರಾದ ತಂದೆ ಎಂ.ಸುಂದರ್(88) ಅವರ ಅಂತಿಮ ಸಂಸ್ಕಾರ ಹಾಗೂ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಪೆರೋಲ್ ನೀಡುವಂತೆ ಬನ್ನಂಜೆ ರಾಜ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಯನ್ನು ಮಾನ್ಯ ಮಾಡಿದ ಹೈಕೋರ್ಟ್, ಆತನಿಗೆ ಕೆಲವೊಂದು ಶರ್ತಗಳನ್ನು ವಿಧಿಸಿ ಮೇ 3ರಿಂದ ಮೇ 14ರವರೆಗೆ ಪೆರೋಲ್ ನೀಡಿದೆ.

ಅದರಂತೆ ಪೊಲೀಸರು ಆತನನ್ನು ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಮಲ್ಪೆ ಕಲ್ಮಾಡಿಯ ಸಸಿತೋಟ ಎಂಬಲ್ಲಿರುವ ಆತನ ಮನೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಆತ ತಂದೆಯ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ದನು. ಬಳಿಕ ಮಲ್ಪೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು.

ಭೂಗತನಾಗಿದ್ದ ಬನ್ನಂಜೆ ರಾಜನನ್ನು 2015ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಮೊರಕ್ಕೊದಲ್ಲಿ ಪೊಲೀಸರು ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದರು. ಕಾರವಾರ ಕೊಲೆ ಪ್ರಕರಣ, ಉಡುಪಿ ಐರೋಡಿ ಜ್ಯುವೆಲ್ಲರ್ಸ್‌ ಶೂಟೌಟ್ ಸೇರಿ ದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬನ್ನಂಜೆ ರಾಜ, ಒಟ್ಟು 23 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕಳೆದ 10 ವರ್ಷಗಳಿಂದ ಬೆಳಗಾವಿಯ ಜೈಲಿನಲ್ಲಿದ್ದಾನೆ.

‘ಪೆರೋಲ್‌ನಲ್ಲಿ ಬಿಡುಗಡೆಯಾಗಿರುವ ಬನ್ನಂಜೆ ರಾಜಾ, ಈ ಅವಧಿಯಲ್ಲಿ ಸಹಚರರರೊಂದಿಗೆ ಸೇರಿ ಯಾವುದೇ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಮೊಬೈಲ್, ಇಂಟರ್‌ನೆಟ್ ಬಳಸುವಂತಿಲ್ಲ. ಮನೆ ಬಿಟ್ಟು ಹೊರಗೆ ಹೋಗು ವಂತಿಲ್ಲ. ತಂದೆಯ ಅಂತ್ಯಸಂಸ್ಕಾರದಲ್ಲಿ ಮಾತ್ರ ಭಾಗಿಯಾಗಬೇಕು ಸೇರಿದಂತೆ ಹಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ. ಮೇ 14ರಂದು ಆತನನ್ನು ಮತ್ತೆ ಬೆಳಗಾವಿ ಜೈಲಿಗೆ ಕರೆದೊಯ್ಯಲಾಗುವುದು’

-ಡಾ.ಕೆ.ಅರುಣ್, ಉಡುಪಿ ಎಸ್ಪಿ

Tags

UnderworldgangsterBannanje Raja
share
ವಾರ್ತಾಭಾರತಿ
ವಾರ್ತಾಭಾರತಿ
Next Story
X