Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂಸದ ಕೋಟ ಪತ್ರಕ್ಕೆ ಕೇಂದ್ರ ಸಚಿವರ...

ಸಂಸದ ಕೋಟ ಪತ್ರಕ್ಕೆ ಕೇಂದ್ರ ಸಚಿವರ ಸ್ಪಂದನೆ : ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರರಾಗಿ ನೇಮಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 Nov 2025 3:20 PM IST
share
ಸಂಸದ ಕೋಟ ಪತ್ರಕ್ಕೆ ಕೇಂದ್ರ ಸಚಿವರ ಸ್ಪಂದನೆ : ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರರಾಗಿ ನೇಮಿಸಲು ಸೂಚನೆ

ಉಡುಪಿ, ನ.8: ಗ್ರಾಮೀಣ ಪ್ರದೇಶ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಳೀಯ ಭಾಷಿಕರನ್ನೇ ಬ್ಯಾಂಕು ಉದ್ಯೋಗಕ್ಕೆ ನೇಮಿಸಬೇಕೆಂಬ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಸ್ಥಳೀಯ ಭಾಷಿಗರನ್ನು ಬ್ಯಾಂಕ್ ನೌಕರಿಗೆ ನೇಮಿಸಲು ಆದೇಶಿಸಿದ್ದಾರೆ.

ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸಹಿತ ಹಲವು ರಾಜ್ಯಗಳಲ್ಲಿ ಹಿಂದಿ ಅಥವಾ ಅನ್ಯ ಭಾಷಿಕರನ್ನು ಸ್ಥಳೀಯ ಬ್ಯಾಂಕುಗಳಿಗೆ ನೌಕರಿಗೆ ನೇಮಿಸುವ ವಿರುದ್ಧ ಅನೇಕ ವರ್ಷಗಳಿಂದ ಕೂಗುಗಳು ಕೇಳಿ ಬರುತ್ತಿದ್ದವು. ಕರ್ನಾಟಕದಲ್ಲಿ ಹಿಂದಿ, ತಮಿಳು, ತೆಲುಗು, ಮಲಯಾಳಿ ಮಾತನಾಡುವ ಭಾಷಿಕರನ್ನು ಸ್ಥಳೀಯ ರಾಷ್ಟ್ರೀಕೃತ ಬ್ಯಾಂಕುಗಳಿಗೆ ನೌಕರಿಗೆ ನೇಮಿಸುವುದು ಸಾರ್ವಜನಿಕರ ಸರಳ ವ್ಯವಹಾರಕ್ಕೆ ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಆರ್ಬಿಐ ಗವರ್ನರ್ ಅವರಿಗೆ ಪತ್ರದ ಮೂಲಕ ಸ್ಥಳೀಯ ಭಾಷಿಕರನ್ನು ನೌಕರಿಗೆ ನಿಯೋಜನೆ ಮಾಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ಸುದೀರ್ಘವಾಗಿ ಪತ್ರ ಬರೆದಿದ್ದ ಸಂಸದ ಕೋಟ ಸ್ಥಳೀಯ ಭಾಷಿಕರು ಬ್ಯಾಂಕ್ ನೌಕರರಾದರೆ ಗ್ರಾಹಕರಿಗೆ ವ್ಯವಹರಿಸಲು ಸುಲಭವಾಗುತ್ತದೆ. ಅನ್ಯ ಭಾಷಿಕರ ನೌಕರಿಯಿಂದ ಗ್ರಾಮಾಂತರ ಜನರಿಗೆ ಮತ್ತು ಹಳ್ಳಿಯವರಿಗೆ ಬ್ಯಾಂಕ್ ವ್ಯವಹಾರ ಕಷ್ಟವಾಗುತ್ತಿದೆ. ಹೀಗಾಗಿ ಸ್ಥಳೀಯ ಭಾಷಿಕರನ್ನೇ ಬ್ಯಾಂಕುಗಳಿಗೆ ಉದ್ಯೋಗಕ್ಕೆ ನೇಮಿಸಬೇಕೆಂದು ಸಂಸದ ಕೋಟ ಮನವಿ ಮಾಡಿದ್ದರು.

ಈ ಬಗ್ಗೆ ಸ್ಪಂದಿಸಿದ ಸಚಿವೆ ನಿರ್ಮಲ ಸೀತಾರಾಮನ್ ರವರು ಸ್ಥಳೀಯ ಭಾಷಿಗರನ್ನು ಬ್ಯಾಂಕ್ ನೌಕರಿಗೆ ನೇಮಿಸಲು ಆದೇಶಿಸಿದ್ದಾರೆ. ಈ ಮೂಲಕ ಸಂಸದ ಕೋಟ ಪತ್ರಕ್ಕೆ ಸಚಿವರು ಸ್ಪಂದಿಸಿದ್ದು ಸಂಸದ ಕೋಟ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X