Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲದ ಮಾಹೆಯಲ್ಲಿ ವಿಶ್ವ ಫಿಸಿಯೋಥೆರಪಿ...

ಮಣಿಪಾಲದ ಮಾಹೆಯಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ: ಡಾ.ಯು.ಟಿ.ಇಫ್ತಿಕರ್ ಫರೀದ್‌ಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ9 Sept 2024 9:27 PM IST
share
ಮಣಿಪಾಲದ ಮಾಹೆಯಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ: ಡಾ.ಯು.ಟಿ.ಇಫ್ತಿಕರ್ ಫರೀದ್‌ಗೆ ಅಭಿನಂದನೆ

ಮಣಿಪಾಲ, ಸೆ.9:ರಾಜ್ಯ ಸರಕಾರದಿಂದ ಇತ್ತೀಚೆಗೆ ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್‌ಕೇರ್ ಮಂಡಳಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ.ಯು.ಟಿ. ಇಫ್ತಿಕರ್ ಫರೀದ್ ಅವರನ್ನು ಫಿಸಿಯೋಥೆರಪಿ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಮತ್ತು ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಅವರ ಸಮರ್ಥ ನಾಯಕತ್ವಕ್ಕಾಗಿ ಮಾಹೆ ವತಿಯಿಂದ ಇಂದು ಸನ್ಮಾನಿಸಲಾಯಿತು.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ ಘಟಕವಾಗಿರುವ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನಲ್ಸ್ (ಎಂಸಿಎಚ್‌ಪಿ)ನ ಫಿಸಿಯೋಥೆರಪಿ ವಿಭಾಗವು ಇಂದು ವಿಶ್ವ ಫಿಸಿಯೋಥೆರಪಿ ದಿನವನ್ನು ಆಚರಿಸಿದ್ದು ಈ ಸಂದರ್ಭದಲ್ಲಿ ಡಾ.ಇಫ್ತಿಕರ್ ಅವರನ್ನು ಅವರ ಸಾಧನೆಗಾಗಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದ ಮಾಹೆಯ ಸಹ ಕುಲಪತಿ (ಆರೋಗ್ಯ ವಿಜ್ಞಾನ) ಡಾ. ಶರತ್ ಕೆ.ರಾವ್, ಡಾ.ಇಫ್ತಿಕರ್ ರನ್ನು ಈ ಸ್ಥಾನಕ್ಕೆ ನೇಮಕ ಮಾಡಿರುವುದಕ್ಕೆ ಅಭಿನಂದಿಸಿದಲ್ಲದೇ, ಈ ವೃತ್ತಿಯನ್ನು ಮುನ್ನಡೆಸುವಲ್ಲಿ ಅವರ ಅವಿರತ ಪ್ರಯತ್ನಗಳನ್ನು ಶ್ಲಾಘಿಸಿದರು.

ಡಾ. ಇಫ್ತಿಕರ್ ಫಿಸಿಯೋಥೆರಪಿ ಮತ್ತು ಅಲೈಡ್ ಹೆಲ್ತೆಕೇರ್ ಕ್ಷೇತ್ರದ ಉನ್ನತಿಗೆ ಕಾರಣರಾಗಿದ್ದಾರೆ. ಅಧ್ಯಕ್ಷರಾಗಿ ಅವರ ನೇಮಕವು ಈ ವೃತ್ತಿಯನ್ನು ಉತ್ತೇಜಿಸುವಲ್ಲಿ ಅವರ ಅವಿರತ ಪ್ರಯತ್ನಗಳ ಪ್ರತಿಬಿಂಬವಾಗಿದೆ. ಅವರ ಹೊಸ ಪಾತ್ರದಲ್ಲಿ ಅವರು ಕರ್ನಾಟಕದಾದ್ಯಂತ ಆರೋಗ್ಯ ರಕ್ಷಣೆಯ ಗುಣಮಟ್ಟವನ್ನು ಹೆಚ್ಚಿಸುವ ಮಹತ್ವದ ಬದಲಾವಣೆಗಳನ್ನು ತರುತ್ತಾರೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ ಎಂದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಾ.ಯು.ಟಿ. ಇಫ್ತಿಕರ್ ಫರೀದ್, ಕರ್ನಾಟಕದಾದ್ಯಂತ ಆರೋಗ್ಯ ಸೇವೆಯನ್ನು ವಿಸ್ತರಿಸುವ ತಮ್ಮ ದೃಷ್ಟಿಕೋನ ವನ್ನು ಹಂಚಿಕೊಂಡರು. ಅಧ್ಯಕ್ಷರಾಗಿ ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದೇ, ರಾಜ್ಯದ ಹೆಲ್ತ್‌ಕೇರ್ ಕ್ಷೇತ್ರದಲ್ಲಿ ಸುಧಾರಣೆ ಗಳನ್ನು ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಅಲೈಡ್ ಹೆಲ್ತ್‌ಕೇರ್ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ರಾಜ್ಯದ ಆರೋಗ್ಯ ರಕ್ಷಣೆಯಲ್ಲಿ ಫಿಸಿಯೋಥೆರಪಿ ವಿಶೇಷ ಪಾತ್ರ ವಹಿಸುವುದನ್ನು ಖಚಿತಪಡಿಸುವ ಭರವಸೆಯನ್ನು ನೀಡಿದರು. ಫಿಸಿಯೋಥೆರಪಿಸ್ಟ್‌ಗಳು ತಮ್ಮ ವೃತ್ತಿಯಲ್ಲಿ ಅಭಿವೃದ್ಧಿ ಸಾಧಿಸಲು ತಾವು ಹಾಕಿಕೊಂಡ ಯೋಜನೆಗಳನ್ನು ಅವರು ವಿವರಿಸಿದರು. ಇದಕ್ಕಾಗಿ ಆಧುನೀಕ ತರಬೇತಿ ಕಾರ್ಯಕ್ರಮ ಗಳನ್ನು ಪರಿಚಯಿಸಲು ಮತ್ತು ಶೈಕ್ಷಣಿಕ ಸಂಸ್ಥೆಗಳು ಮತ್ತು ಆರೋಗ್ಯ ಪೂರೈಕೆದಾರರ ನಡುವೆ ಸಹಯೋಗದ ಯೋಜನೆಗಳನ್ನು ವಿವರಿಸಿದರು.

ಮಾಹೆ ಕುಲಪತಿ ಲೆ.ಜ. ಡಾ. ಎಂ. ಡಿ. ವೆಂಕಟೇಶ್ ಮಾತನಾಡಿ, ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್‌ಕೇರ್ ಕೌನ್ಸಿಲ್‌ಗೆ ಡಾ.ಇಫ್ತಿಕರ್ ಅವರ ನೇಮಕ ಪ್ರತಿಷ್ಠಿತ ಸಾಧನೆಯಾಗಿದೆ. ಇದನ್ನು ಮುನ್ನಡೆಸುವ ಮತ್ತು ಸಕಾರಾತ್ಮಕ ಬದಲಾವಣೆಯನ್ನು ತರುವ ಅವರ ಸಾಮರ್ಥ್ಯವು ಕರ್ನಾಟಕದಲ್ಲಿ ಅಲೈಡ್‌ಕೇರ್ ಸೇವೆಗಳ ಗುಣಮಟ್ಟ ಮತ್ತು ಪ್ರವೇಶ ವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಡಾ. ಯು. ಟಿ. ಇಫ್ತಿಕರ್ ಫರೀದ್, ಫಿಸಿಯೋಥೆರಪಿ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶೇಷ ಕೊಡುಗೆಗಳಿಂದಾಗಿ ಸರಕಾರ ಅವರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿದೆ. ಅಧ್ಯಕ್ಷರಾಗಿ ಅವರ ನೇಮಕ, ಫಿಸಿಯೋಥೆರಪಿ ಕ್ಷೇತ್ರಕ್ಕೆ ಮಹತ್ವದ ಸಾಧನೆಯಾಗಿದೆ. ಅವರ ಅಧಿಕಾರಾವಧಿಯಲ್ಲಿ ಮಾಹೆ ಅವರಿಗೆ ನಿರಂತರ ಬೆಂಬಲ ನೀಡಲಿದೆ ಎಂದರು.

ವಿಶ್ವ ಫಿಸಿಯೋಥೆರಪಿ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಮಾಹೆ-ಮಂಗಳೂರು ಕ್ಯಾಂಪಸ್‌ನ ಪ್ರೊ ವೈಸ್ ಚಾನ್ಸಲರ್ ಡಾ. ದಿಲೀಪ್ ನಾಯಕ್, ಮಾಹೆಯ ಬೋಧಕ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅಲ್ಲದೇ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್‌ನ ಪ್ರಮುಖರು ಉಪಸ್ಥಿತರಿದ್ದರು.

ಎಂಸಿಎಚ್‌ಪಿಯ ಡೀನ್ ಡಾ. ಜಿ.ಅರುಣ್ ಮಯ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ಜಾನ್ ಸೋಲೋಮನ್ ವಂದಿಸಿ, ಡಾ.ಅಬ್ರಹಾಂ ಸಾಮ್ಯುವೆಲ್ ಬಾಬು ಕಾರ್ಯಕ್ರಮ ನಿರೂಪಿಸಿದರು.




Tags

Celebration
share
ವಾರ್ತಾಭಾರತಿ
ವಾರ್ತಾಭಾರತಿ
Next Story
X