Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರತಿ ಮನೆಮನಕ್ಕೆ ಯಕ್ಷಗಾನ ತಲುಪಿಸಲು...

ಪ್ರತಿ ಮನೆಮನಕ್ಕೆ ಯಕ್ಷಗಾನ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು ಶಿವರಾಮ ಶೆಟ್ಟಿ

ಯಕ್ಷಗಾನ ಅಕಾಡೆಮಿಯಿಂದ ಕವಲಕ್ಕಿಯಲ್ಲಿ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ27 May 2025 10:13 PM IST
share
ಪ್ರತಿ ಮನೆಮನಕ್ಕೆ ಯಕ್ಷಗಾನ ತಲುಪಿಸಲು ಅಕಾಡೆಮಿ ಪ್ರಯತ್ನ: ಡಾ.ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ಒಂದು ಕಾಲದಲ್ಲಿ ರಾಜಾಶ್ರಯ ಪಡೆದು ಮೆರೆದಿದ್ದ ಕನ್ನಡ ಕರಾವಳಿಯ ಶ್ರೀಮಂತ ಯಕ್ಷಗಾನ ಕಲೆಯನ್ನು ಪ್ರತೀ ಮನೆಮನಕ್ಕೆ ತಲುಪಿಸಿ ಗತಿಸಿದ ವೈಭವವನ್ನು ಮತ್ತೆ ಪಡೆಯಲು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಯತ್ನಿಸಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕವಲಕ್ಕಿ ಶ್ರೀಮಹಾಸತಿ ದೇವಳದ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಯಕ್ಷಗಾನ ವಿಚಾರ ಸಂಕಿರಣ, ಗೋಷ್ಠಿ, ತಾಳಮದ್ದಲೆ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಕ್ಷಗಾನ ಇಂದು ಸಮಷ್ಠಿಯನ್ನು ಒಳಗೊಂಡ ಪರಿಪೂರ್ಣ ಕಲೆಯಾಗಿ ಬೆಳೆದಿದೆ. ಇಲ್ಲಿ ವೃತ್ತಪರ ಕಲಾವಿದರಲ್ಲದೆ, ಹವ್ಯಾಸಿಗಳಾಗಿ ವೈದ್ಯರು, ಇಂಜಿನಿಯರ್‌ಗಳು, ಸಾಹಿತಿಗಳು, ಅಧ್ಯಾಪಕರು ಹೀಗೆ ಎಲ್ಲಾ ಕ್ಷೇತ್ರದ ವ್ಯಕ್ತಿ ಗಳು ತಮ್ಮನ್ನು ಕಲೆಗೆ ಮುಡಿಪಾಗಿಟ್ಟಿದ್ದಾರೆ. ಇದು ಯಕ್ಷಗಾನ ಕಲೆಯ ವೈಶಿಷ್ಟ್ಯ. ಇದನ್ನು ಅನ್ಯ ಕಲೆಗಳಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ. ತೆಂಕುತಿಟ್ಟು, ಬಡಗುತಿಟ್ಟು, ಉತ್ತರಕನ್ನಡ ಕಡೆಯ ಬಡಾಬಡಗುತಿಟ್ಟು ಹೀಗೆ ವಿವಿಧ ಪ್ರಕಾರಗಳ ಮೂಲಕ ಯಕ್ಷಗಾನ ಜನಮಾನಸದಲ್ಲಿ ನೆಲೆಸಿದೆ. ಉತ್ತರ ಕನ್ನಡ ಜಿಲ್ಲೆಯಂತೂ ಅಗಣಿತ ಮೇರು ಯಕ್ಷಗಾನ ಕಲಾವಿದರನ್ನು ನಾಡಿಗೆ ನೀಡಿದೆ. ಚಿಟ್ಟಾಣಿಯಂತಹ ದಿಗ್ಗಜರಿಗೆ ಪದ್ಮಶ್ರೀ ಗೌರವ ಸಂದಿರುವುದನ್ನು ಕೂಡಾ ಮರೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಯಕ್ಷಗಾನ ಕಲೆ ಪ್ರತಿ ಮನೆ, ಮನವನ್ನು ಮುಟ್ಟಲು ಮಕ್ಕಳಿಗೆ ಯಕ್ಷಗಾನ ಕಲಿಸಬೇಕು. ಉಡುಪಿ ಜಿಲ್ಲೆಯಲ್ಲಿ ೯೦ಕ್ಕೂ ಅಧಿಕ ಶಾಲೆಗಳಲ್ಲಿ ೩,೦೦೦ಕ್ಕೂ ಅಧಿಕ ಮಕ್ಕಳು ಯಕ್ಷ ಶಿಕ್ಷಣ ಪಡೆಯುತ್ತಿದ್ದಾರೆ. ಇದು ರಾಜ್ಯದ ಅನ್ಯ ಜಿಲ್ಲೆಗಳಿಗೂ ಮುಟ್ಟಬೇಕು ಎಂಬುದೇ ಅಕಾಡೆಮಿಯ ಬಯಕೆ. ಯಕ್ಷಗಾನ ಕಲಿತ ಮಕ್ಕಳು ಸಂಸ್ಕಾರ ಹೀನರಾಗಲಾರರು. ವೃದ್ಧಾಪ್ಯದಲ್ಲಿ ತಂದೆತಾಯಿ ಯನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪ್ರಮೇಯ ತರಲಾರರು. ಯಾಕೆಂದರೆ ಯಕ್ಷಗಾನದಲ್ಲಿ ಗುರುಹಿರಿಯರನ್ನು ತಂದೆತಾಯಿಯನ್ನು ಗೌರವಿಸುವ ನೈತಿಕ ಶಿಕ್ಷಣದ ಪಾಠ ಲಭಿಸುತ್ತದೆ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವ ವಿಕಸನದ ಜೊತೆಗೆ ಅವರ ಶೈಕ್ಷಣಿಕ ಪ್ರಗತಿಗೂ ಕಾರಣವಾಗಿರುವುದನ್ನು ನಾವು ಗಮನಿಸಿದ್ದೇವೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಬಳ್ಕೂರು ಕೃಷ್ಣ ಯಾಜಿ, ಯಕ್ಷಗಾನ ಒಂದು ಆರಾಧನಾ ಕಲೆ. ಜನರಿಗೆ ಸಂತೋಷ ಕೊಡುವುದು ಎಂದರೆ ಈಶ್ವರನಿಗೆ ಆರಾಧನೆ ಮಾಡಿದ ಹಾಗೆ. ಯಕ್ಷಗಾನ ಹಾದಿ ತಪ್ಪುತ್ತಿದೆ ಎಂಬ ಅಪವಾದ ಕೇಳಿ ಬರುತ್ತಿದೆ. ಆರಂಭದಿಂದ ಇಂದಿನವರೆಗೆ ಯಕ್ಷಗಾನ ಕಲೆ ಅನೇಕ ಸುಧಾರಣೆಗಳನ್ನು ಕಂಡಿದೆ. ಹಾಗಾಗಿ ಇದು ಅಳಿಯುವ ಕಲೆ ಅಲ್ಲ ಎಂದರು.

ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಮಾತನಾಡಿ, ಉತ್ತರ ಕನ್ನಡದ ಯಕ್ಷಗಾನ ಕಲಾವಿದರನ್ನು ಗುರುತಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತರಿಗೆ ರಾಜ್ಯೋತ್ಸವ ಪ್ರಶಸ್ತಿ ಇನ್ನೂ ಲಭಿಸದಿರುವುದು ಬೇಸರದ ಸಂಗತಿ ಎಂದರು.

ಅಕಾಡೆಮಿ ರಿಜಿಸ್ಟ್ರಾರ್ ನಮೃತಾ ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಭಾಗವತ ಕಪ್ಪೆಕೆರೆ ಸುಬ್ರಾಯ ಭಾಗವತ, ಕಡತೋಕ ಗೋಪಾಲಕೃಷ್ಣ ಭಾಗವತ, ಯಕ್ಷಗಾನ ವಿಮರ್ಶಕ ನಾರಾಯಣ ಯಾಜಿ ಸಂದರ್ಭೋಚಿತ ಮಾತುಗಳನ್ನಾಡಿದರು.

ಉದ್ಯಮಿ ವೆಂಕಟರಮಣ ಹೆಗ್ಡೆ, ಸಂಗೀತ ವಿದ್ವಾನ್ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯಾಯ ಉಪಸ್ಥಿತರಿದ್ದರು. ಉಪನ್ಯಾಸಕ ಪ್ರಶಾಂತ್ ಹೆಗ್ಡೆ ನಿರೂಪಿಸಿ, ವಂದಿಸಿದರು. ಮಕ್ಕಳ ಯಕ್ಷಗಾನ ಪ್ರದರ್ಶನ, ತಾಳ ಮದ್ದಲೆ, ಯಕ್ಷಗಾನ ವಿಚಾರಗೋಷ್ಠಿಗಳು ನಡೆದವು.

Tags

Yakshagana Academy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X