Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ನವಾಝ್ ಶರೀಫ್ ಮೊಮ್ಮಗಳ ಮದುವೆಯಲ್ಲಿ...

ನವಾಝ್ ಶರೀಫ್ ಮೊಮ್ಮಗಳ ಮದುವೆಯಲ್ಲಿ ಉಂಡವನೇ ಜಾಣ.

ವಾರ್ತಾಭಾರತಿವಾರ್ತಾಭಾರತಿ28 Dec 2015 6:39 PM IST
share

* ಜನತಾ ಪರಿವಾರ ಒಂದಾಗೋದು ಸುಲಭವಲ್ಲ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

-ಸಂಘಪರಿವಾರದ ಸಹಕಾರ ಸಿಕ್ಕಿದರೆ ಕಷ್ಟವಿಲ್ಲ.

..................................................

* ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ನೋಡಿದರೆ ತನಗೂ ಸಾಯಬೇಕೆನಿಸುತ್ತದೆ.

- ದೇವೇಗೌಡ, ಮಾಜಿ ಪ್ರಧಾನಿ

-ಜೆಡಿಎಸ್ ಪಕ್ಷದ ಆತ್ಮಹತ್ಯೆಗಿಂತ ವಾಸಿ.

..................................................

* ಕಾಂಗ್ರೆಸ್ ಆಡಳಿತಕ್ಕೆ ಬಂದ ಅನಂತರ ಏಳು ತಿಂಗಳು ತನಗೆ ಮಂತ್ರಿ ಸ್ಥಾನ ಸಿಗದಿರುವುದಕ್ಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಕುತಂತ್ರವೇ ಕಾರಣ.

- ಡಿ.ಕೆ.ಶಿವಕುಮಾರ್, ಇಂಧನ ಸಚಿವ

-ಕಾಂಗ್ರೆಸ್ ಹೈಕಮಾಂಡ್ ಬದಲಾಗಿದ್ದಾರೆಯೇ?

..................................................

* ರಾಜ್ಯದಲ್ಲಿ ಆನ್‌ಲೈನ್ ಔಷಧ ಮಾರಾಟಕ್ಕೆ ಅವಕಾಶವಿಲ್ಲ. - ಯು.ಟಿ. ಖಾದರ್, ಆರೋಗ್ಯ ಸಚಿವ

-ಆನ್‌ಲೈನ್‌ನಲ್ಲಿ ರೋಗಗಳನ್ನು ಹಂಚುವುದಕ್ಕೆ ಅವಕಾಶವಿದೆಯಂತೆ.

..................................................

* ಅರುಣ್‌ಜೇಟ್ಲಿ ರಾಜಕಾರಣಿಗಳಿಗೆ ಮಾದರಿಯಾಗಿರುವವರು.

- ಅಮಿತ್ ಶಾ, ಬಿಜೆಪಿ ಅಧ್ಯಕ್ಷ

-ಉಳಿದವರ ಹಗರಣಗಳಿಗೆ ಜೇಟ್ಲಿಯೇ ಮಾದರಿ ಅಂತೀರಾ?

..................................................

* ಬಿಜೆಪಿ ಮತ್ತು ಜೆಡಿಎಸ್‌ಗಳಿಗೆ ಸಿದ್ಧಾಂತಗಳೇ ಇಲ್ಲ.

- ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ

-ಸದ್ಯಕ್ಕೆ ಸಿದ್ಧಾಂತಗಳಿರದೇ ಇರುವುದೂ ಪಕ್ಷಗಳ ಪಾಲಿಗೆ ಸಿದ್ಧಾಂತವೇ ಆಗಿದೆ.

..................................................

* ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ.

- ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

-ಯಾವ ಪಕ್ಷದಿಂದ ಎನ್ನುವುದು ಪ್ರಶ್ನೆ.

..................................................

* ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಸರಕಾರವನ್ನು ಮೆಚ್ಚಿದೆ.

- ನಳಿನ್ ಕುಮಾರ್ ಕಟೀಲ್, ಸಂಸದ

--ಭಾರತದ ಜನರನ್ನು ಹೊರತು ಪಡಿಸಿ.

..................................................

* ಹವಾಲಾ ಕೇಸ್‌ನಿಂದ ಎಲ್.ಕೆ. ಅಡ್ವಾಣಿಯವರನ್ನು ನಾನೇ ಪಾರು ಮಾಡಿದ್ದು. - ರಾಮ್‌ಜೇಠ್ಮಲಾನಿ, ಹಿರಿಯ ನ್ಯಾಯವಾದಿ

-ಇದನ್ನು ಹೆಮ್ಮೆಯಿಂದ ಹೇಳುತ್ತಿದ್ದೀರಾ, ಬೇಸರದಿಂದ ಹೇಳುತ್ತಿದ್ದೀರಾ?

..................................................

* ಅಡ್ವಾಣಿ ಅವರಂತೆ ಜೇಟ್ಲಿಯೂ ನಿಷ್ಕಳಂಕರಾಗಿ ಹೊರಹೊಮ್ಮಲಿದ್ದಾರೆ..

- ನರೇಂದ್ರ ಮೋದಿ, ಪ್ರಧಾನಿ

-ಸದ್ಯಕ್ಕೆ ಅವರು ಕಳಂಕಿತರು ಎನ್ನುವುದನ್ನು ನೀವು ಒಪ್ಪಿಕೊಂಡಂತೆ ಆಯಿತು.

..................................................

* ಕಾಂಗ್ರೆಸ್‌ನಲ್ಲಿ ನೆಹರೂ, ಇಂದಿರಾ ಗಾಂಧಿ ತತ್ವ ಸಿದ್ಧಾಂತಗಳು ಸತ್ತು ಹೋಗುತ್ತಿವೆ.

- ರಮೇಶ್‌ಕುಮಾರ್, ಶಾಸಕ

-ಪಕ್ಷವೇ ಸತ್ತು ಹೋಗುತ್ತಿರುವಾಗ, ಅವರ ತತ್ವ ಉಳಿಯುವುದು ಹೇಗೆ?

..................................................

* ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿಮಾರ್ಣವಾಗಬೇಕು ಎಂಬುದು ದೇಶದ ಪ್ರತಿಯೊಬ್ಬ ಪ್ರಜೆಯ ಬಯಕೆಯಾಗಿದೆ.

- ವೆಂಕಯ್ಯನಾಯ್ಡು, ಕೇಂದ್ರ ಸಚಿವ

-ರಸ್ತೆ, ಸೇತುವೆ, ಮನೆಗಳ ನಿರ್ಮಾಣ ಯಾವಾಗ?

..................................................

* ಶೋಷಿತರಿಗೆ ಪ್ರವೇಶವಿಲ್ಲದ ದೇವಸ್ಥಾನಗಳನ್ನು ಬಹಿಷ್ಕರಿಸಿ.

- ಎಲ್. ಹನುಮಂತಯ್ಯ, ಕ.ಪು.ಪ್ರಾ. ಅಧ್ಯಕ್ಷ

-ಬಹಿಷ್ಕಾರ ಮಾಡಿದವರಿಗೆ ಕಾನೂನಿನಲ್ಲಿ ಶಿಕ್ಷೆ ಇದೆಯಂತಲ್ಲ?

..................................................

* ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಲು ಎಲ್ಲ ರೀತಿಯಲ್ಲೂ ಅರ್ಹರು.

- ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ

- ಮುಖ್ಯಮಂತ್ರಿಯಾಗುವುದಕ್ಕೆ ಮಾತ್ರ ಸಲ್ಲರು. ಅಲ್ಲವೇ?

..................................................

* ನಿಜವಾದ ಮುತ್ಸದ್ಧಿತನವೆಂದರೆ ಇದು (ಪ್ರಧಾನಿ ಪಾಕ್ ಭೇಟಿ).

- ಸುಷ್ಮಾ ಸ್ವರಾಜ್, ವಿದೇಶಾಂಗ ಸಚಿವೆ

-ನವಾಝ್ ಶರೀಫ್ ಮೊಮ್ಮಗಳ ಮದುವೆಯಲ್ಲಿ ಉಂಡವನೇ ಜಾಣ.

..................................................

* ಮಾಜಿ ಪ್ರಧಾನಿ ವಾಜಪೇಯಿ ಇಡೀ ದೇಶಕ್ಕೆ ಪ್ರೇರಣೆ.

- ಅನಂತಕುಮಾರ್, ಕೇಂದ್ರ ಸಚಿವ

-ಅದಕ್ಕೆ ಅವರನ್ನು ಕೋಮಾದಲ್ಲಿಡಲಾಗಿದೆ.

..................................................

* ಪ್ರಧಾನಿ ನರೇಂದ್ರ ಮೋದಿಗೆ ಕಂಡವರ ಮಕ್ಕಳ ಬಗ್ಗೆ ಚಿಂತೆ ಇದ್ದರೆ, ಮಲ್ಲಿಕಾರ್ಜುನ ಖರ್ಗೆಗೆ ತನ್ನ ಮಗನ ಬಗ್ಗೆ ಮಾತ್ರ ಚಿಂತೆ.

- ಪ್ರತಾಪ್ ಸಿಂಹ, ಸಂಸದ

- ಮದುವೆಯಾಗಿ ಮೂರೇ ತಿಂಗಳಲ್ಲಿ ಪತ್ನಿಯನ್ನು ದೂರ ಇಟ್ಟ ಮೇಲೆ ಕಂಡವರ ಮಕ್ಕಳೇ ಗತಿ.

..................................................

*ಬಿಜೆಪಿಯಲ್ಲಿ ಮೆದುಳಿಲ್ಲದ ನಾಯಕರೇ ಹೆಚ್ಚು.

- ಸಿದ್ದರಾಮಯ್ಯ, ಮುಖ್ಯಮಂತ್ರಿ

-ಅವರ ಮೆದುಳುಗಳೆಲ್ಲ ಆರೆಸ್ಸೆಸ್ ಕಚೇರಿಯಲ್ಲಿರುವ ಪ್ರಿಡ್ಜ್ ನೊಳಗಿದೆಯಂತೆ.

..................................................

* ಕಾನೂನು ಉಲ್ಲಂಘಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಇಲ್ಲ.

- ಜೆ.ನಂದಕುಮಾರ್, ಆರೆಸ್ಸೆಸ್ ಪ್ರಚಾರ ಪ್ರಮುಖ್

-ಬಹುಶಃ ಕಾನೂನನ್ನು ಧ್ವಂಸಗೊಳಿಸಿ ನಿರ್ಮಾಣ ಮಾಡುವ ಉದ್ದೇಶ ಇರಬಹುದು.

..................................................

share
ವಾರ್ತಾಭಾರತಿ
ವಾರ್ತಾಭಾರತಿ
Next Story
X