Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಅಂಜುಮನ್ ಕಾಲೇಜಿನಲ್ಲಿ ಸೈಬರ್...

ಭಟ್ಕಳ: ಅಂಜುಮನ್ ಕಾಲೇಜಿನಲ್ಲಿ ಸೈಬರ್ ಕ್ರೈಂ ಹಾಗೂ ಮಾದಕದ್ರವ್ಯ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Oct 2025 8:13 PM IST
share
ಭಟ್ಕಳ: ಅಂಜುಮನ್ ಕಾಲೇಜಿನಲ್ಲಿ ಸೈಬರ್ ಕ್ರೈಂ ಹಾಗೂ ಮಾದಕದ್ರವ್ಯ ಜಾಗೃತಿ ಕಾರ್ಯಕ್ರಮ

ಭಟ್ಕಳ: ಅಂಜುಮನ್ ಡಿಗ್ರಿ ಕಾಲೇಜು ಮತ್ತು ಪಿಜಿ ಸೆಂಟರ್ ನಲ್ಲಿ ಬುಧವಾರ ಸೈಬರ್ ಕ್ರೈಂ ಹಾಗೂ ಮಾದಕದ್ರವ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.

ಯುವಕರು ಮತ್ತು ವಿದ್ಯಾರ್ಥಿಗಳಲ್ಲಿ “Stay Smart, Stay Safe Online” ಹಾಗೂ “Say No to Drugs, Say Yes to Life” ಎಂಬ ವಿಷಯಗಳಡಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮವನ್ನು ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್, ಅಂಜುಮನ್ ಹಾಮಿ-ಎ-ಮುಸ್ಲಿಮೀನ್, ಇಸ್ಲಾಹಿ ಮುಅಶ್ರಾ ಸಮಿತಿ, ಭಟ್ಕಳ ಮುಸ್ಲಿಂ ಯುತ್ ಫೆಡರೇಶನ್, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಭಟ್ಕಳ ನಗರ ಠಾಣೆ ಪೊಲೀಸ್ ಹಾಗೂ ಅಂಜುಮನ್ ಎನ್‌ಎಸ್‌ಎಸ್ ಘಟಕ ಸಂಯುಕ್ತವಾಗಿ ಆಯೋಜಿಸಿತ್ತು.

ಮುಖ್ಯ ಅತಿಥಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಅವರು ಸೈಬರ್ ಅಪರಾಧ, ಮಾದಕದ್ರವ್ಯ ದುರೋಪಯೋಗ ಹಾಗೂ ಜವಾಬ್ದಾರಿಯುತ ನಾಗರಿಕತೆಯ ಕುರಿತು, ಇತ್ತೀಚೆಗೆ ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳ ಬಗ್ಗೆ ಎಚ್ಚರಿಕೆ ಇಂದ ಇರುವಂತೆ ಕರೆ ನೀಡಿದರು. ನಾಗರಿಕರು ಇಂತಹ ಘಟನೆಗಳು ಸಂಭವಿಸಿದಾಗ ತಕ್ಷಣವೇ ಟೋಲ್ ಫ್ರೀ ಸಂಖ್ಯೆ 1930 ಗೆ ಕರೆ ಮಾಡಿ ದೂರು ನೀಡಬೇಕೆಂದು ಮನವಿ ಮಾಡಿದರು.

“ಮಾದಕದ್ರವ್ಯಗಳಿಂದ ದೂರವಿದ್ದು, ಕನಸುಗಳು ಮತ್ತು ಗುರಿಗಳನ್ನು ರೂಪಿಸಿಕೊಳ್ಳಿ ಎಂದು ಅವರು ವಿದ್ಯಾರ್ಥಿ ಗಳಿಗೆ ಸಂದೇಶ ನೀಡಿದರು. ಯುವಕರಲ್ಲಿ ಅರಿವು ಮೂಡಿಸಲು ಇಂತಹ ಜಾಗೃತಿ ಕಾರ್ಯಕ್ರಮಗಳು ಅತ್ಯಂತ ಅಗತ್ಯವೆಂದು ಅವರು ಶ್ಲಾಘಿಸಿದರು.

ಕಾರ್ಯಕ್ರಮವು ಮಾಸ್ಟರ್ ಅಬ್ದುರ್ ರಹ್ಮಾನ್ ಅವರ ಕುರಾನ್ ಪಠಣದಿಂದ ಪ್ರಾರಂಭವಾಯಿತು. ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹಲ್ಲಾರೆ ಸ್ವಾಗತ ಭಾಷಣ ಮಾಡಿದರು. ಅಡ್ವೊಕೇಟ್ ಸಯ್ಯದ ಇಮ್ರಾನ್ ಲಂಕಾ, ಉಪಾಧ್ಯಕ್ಷರು, ಜಾಲಿ ಟೌನ್ ಪಂಚಾಯತ್, ಅತಿಥಿಗಳನ್ನು ಪರಿಚಯಿಸಿರು.

ಉಪ ಕಾಜಿ ಮೌಲಾನಾ ಮುಹಮ್ಮದ್ ಅನ್ಸಾರ್ ಮದನಿ ಅವರು, ಯುವಕರು ಧಾರ್ಮಿಕ ಮತ್ತು ನೈತಿಕ ಮೌಲ್ಯಗಳನ್ನು ಕಾಪಾಡಿ, ಮಾದಕದ್ರವ್ಯಗಳಿಂದ ದೂರವಿರಬೇಕೆಂದು ಸಲಹೆ ನೀಡಿದರು.

ಅಂಜುಮನ್ ಹಾಮಿ-ಎ-ಮುಸ್ಲಿಮೀನ್‌ನ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಪಿಲ್ಲೂರು ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಯೂಸುಫ್ ಕೋಲಾ ಧನ್ಯವಾದ ಅರ್ಪಿಸಿದರು.

ಈ ಸಂದರ್ಭ ಡಾ. ಮುಹಮ್ಮದ್ ಜುಬೈರ್ ಕೋಲಾ, ಜುಕಾಕು ಇಸ್ಮಾಯಿಲ್, ಸಿ. ಪಿ. ಐ.ದಿವಾಕರ್, ಪಿಎಸ್‌ಐ ನವೀನ್, ಪಿಎಸ್‌ಐ ಮಂಜುನಾಥ್, ಅಜೀಜುರ್ ರಹ್ಮಾನ್, ಫಯ್ಯಾಝ್ ಕೋಲಾ ಮತ್ತು ದಾಮೋದರ್ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರೊ. ಗಾನಿಮ್ ಮೊಹ್ತಶಮ್ ನಿರ್ವಹಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X