Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮಂಕಾಳ ವೈದ್ಯರಿಗೆ ಸೂಕ್ತ ಸ್ಥಾನ...

ಮಂಕಾಳ ವೈದ್ಯರಿಗೆ ಸೂಕ್ತ ಸ್ಥಾನ ನೀಡದಿದ್ದರೆ ‘ತಕ್ಕ ಉತ್ತರ’: ಮೀನುಗಾರರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 Aug 2026 9:02 PM IST
share
ಮಂಕಾಳ ವೈದ್ಯರಿಗೆ ಸೂಕ್ತ ಸ್ಥಾನ ನೀಡದಿದ್ದರೆ ‘ತಕ್ಕ ಉತ್ತರ’: ಮೀನುಗಾರರ ಎಚ್ಚರಿಕೆ

ಭಟ್ಕಳ: ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ಎಸ್. ವೈದ್ಯ ಅವರಿಗೆ ರಾಜ್ಯ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡದಿದ್ದರೆ ಮೀನುಗಾರ ಸಮುದಾಯದಿಂದ ‘ತಕ್ಕ ಉತ್ತರ’ ನೀಡಬೇಕಾಗುತ್ತದೆ ಎಂದು ವಿವಿಧ ಮೀನುಗಾರರ ಸಂಘಟನೆಗಳ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಭಟ್ಕಳದಲ್ಲಿ ಪರ್ಸ್‌ಸೀನ್ ದೋಣಿ ಮಾಲೀಕರ ಸಂಘ, ನಾಡದೋಣಿ ಮೀನುಗಾರರ ಸಂಘ, ಭಟ್ಕಳ ತಾಲ್ಲೂಕು ಮೊಗೇರ ಸಮಾಜ ಸೇರಿದಂತೆ ವಿವಿಧ ಮೀನುಗಾರರ ಸಂಘಟನೆಗಳ ವತಿಯಿಂದ ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರು ಈ ಎಚ್ಚರಿಕೆ ನೀಡಿದರು.

ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ಮಾತನಾಡಿ, ‘ಮಂಕಾಳ ವೈದ್ಯರು ಸಚಿವರಾಗಿದ್ದ ಅವಧಿಯಲ್ಲಿ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಹಲವು ಕ್ರಮಗಳನ್ನು ಕೈಗೊಂಡಿದ್ದರು. ಸಾಂಪ್ರದಾಯಿಕ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ದೊರೆಯುವಂತೆ ಮಾಡಿದ್ದರು’ ಎಂದು ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಗಳಿಗೆ ಬಾಕಿ ಉಳಿದಿದ್ದ ಪರಿಹಾರ ವನ್ನು ಬಿಡುಗಡೆ ಮಾಡಿಸುವಲ್ಲಿ ವೈದ್ಯರು ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ ಪರಿಹಾರದ ಮೊತ್ತವನ್ನು 10 ಲಕ್ಷಕ್ಕೆ ಹೆಚ್ಚಿಸುವ ಕ್ರಮವೂ ಅವರ ಅವಧಿಯಲ್ಲಿ ನಡೆದಿತ್ತು ಎಂದು ಅವರು ತಿಳಿಸಿದರು.

ಹಲವು ಮೀನುಗಾರಿಕಾ ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಲು ವೈದ್ಯರು ಕ್ರಮ ಕೈಗೊಂಡಿದ್ದು, ಇದ ರಿಂದ ಮೀನುಗಾರರಿಗೆ ಅನುಕೂಲವಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಶ್ರಮಿಸಿದ ಶಾಸಕರಿಗೆ ಸಚಿವ ಸ್ಥಾನ ನೀಡದಿ ರುವುದು ಸರಿಯಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾಗುತ್ತದೆ ಎಂದು ಅಣ್ಣಪ್ಪ ಮೊಗೇರ ಹೇಳಿದರು.

ಮೀನುಗಾರರ ಮುಖಂಡ ವಿಠ್ಠಲ ದೈಮನೆ ಮಾತನಾಡಿ, ‘ಮಂಕಾಳ ವೈದ್ಯರು ಮೀನುಗಾರಿಕೆ ಇಲಾಖೆಯಲ್ಲಿ ಹಲವು ಬದಲಾವಣೆಗಳನ್ನು ತಂದು, ಮೀನುಗಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ’ ಎಂದರು.

‘ಹಿಂದುಳಿದ ವರ್ಗದವರನ್ನು ಕಡೆಗಣಿಸಿ ಮೇಲ್ವರ್ಗದ ಕುಟುಂಬಕ್ಕೆ ಸೇರಿದ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವ ಮೂಲಕ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ ಅವಮಾನ ಮಾಡಿದೆ’ ಎಂದು ಅವರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾಕರ ಖಾರ್ವಿ, ವೆಂಕಟರಮಣ ಸನ್ನಿಮನೆ, ಭಾಸ್ಕರ ಮೊಗೇರ, ಶಂಕರ ಹೆಬ್ಬಾರ್, ರಾಜೇಂದ್ರ ಖಾರ್ವಿ, ಗೋಪಾಲ ಮೊಗೇರ, ಪರಮೇಶ್ವರ ಮೊಗೇರ ಸೇರಿದಂತೆ ಹಲವು ಮೀನುಗಾರರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X