Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ| ನಿಧಾನಗತಿಯಲ್ಲಿ ಸಾಗಿದ ಚತುಷ್ಪಥ...

ಭಟ್ಕಳ| ನಿಧಾನಗತಿಯಲ್ಲಿ ಸಾಗಿದ ಚತುಷ್ಪಥ ಹೆದ್ದಾರಿ ಕಾಮಗಾರಿ; ಸಂಚಾರ, ನೀರು ನಿಲ್ಲುವ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ19 Aug 2026 6:26 PM IST
share
ಭಟ್ಕಳ| ನಿಧಾನಗತಿಯಲ್ಲಿ ಸಾಗಿದ ಚತುಷ್ಪಥ ಹೆದ್ದಾರಿ ಕಾಮಗಾರಿ; ಸಂಚಾರ, ನೀರು ನಿಲ್ಲುವ ಸಮಸ್ಯೆ
ಸರ್ವಿಸ್ ರಸ್ತೆ–ಚರಂಡಿ ಕಾಮಗಾರಿ ವೇಗಕ್ಕೆ ಸಾರ್ವಜನಿಕರ ‌ಆಗ್ರಹ

ಭಟ್ಕಳ: ನಗರದ ಪ್ರಮುಖ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ–66ರ ಚತುಷ್ಪಥ ಕಾಮಗಾರಿ ಮತ್ತೆ ಆರಂಭಗೊಂಡು ತಿಂಗಳುಗಳು ಕಳೆದರೂ, ಕಾಮಗಾರಿ ಪೂರ್ಣಗೊಳ್ಳುವ ಲಕ್ಷಣ ಕಾಣಿಸುತ್ತಿಲ್ಲ. ಶಂಶುದ್ದೀನ್ ವೃತ್ತ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿಯ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದು, ಮಳೆನೀರು ಸರಾಗವಾಗಿ ಹರಿದುಹೋಗದೆ ರಸ್ತೆ ಬದಿಯಲ್ಲಿ ನೀರು ನಿಲ್ಲುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಭಟ್ಕಳ ಪಟ್ಟಣದ ವ್ಯಾಪಾರ ಮತ್ತು ಜನದಟ್ಟಣೆಯ ಪ್ರಮುಖ ಪ್ರದೇಶವಾಗಿರುವ ಶಂಶುದ್ದೀನ್ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಪದೇಪದೇ ಅಡಚಣೆ ಉಂಟಾಗುತ್ತಿದೆ. ಪಾದಚಾರಿಗಳಿಗೂ ರಸ್ತೆ ದಾಟುವುದು ಹಾಗೂ ಅಂಗಡಿಗಳಿಗೆ ತೆರಳುವುದು ಕಷ್ಟವಾಗಿದೆ.

ಈ ಕುರಿತು ಮಾಹಿತಿ ನೀಡಿದ ಭಟ್ಕಳ ತಾಲ್ಲೂಕು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್, ರಾ.ಹೆ. ಕಾಮಗಾರಿಯ ಜತೆಗೆ ಸೇವಾ ರಸ್ತೆ ಮತ್ತು ಮಳೆನೀರು ಚರಂಡಿ ಕಾಮಗಾರಿಯನ್ನೂ ಏಕಕಾಲದಲ್ಲಿ ಕೈಗೊಳ್ಳುವಂತೆ ಕಾಮಗಾರಿ ಆರಂಭಕ್ಕೂ ಮುನ್ನವೇ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು, ಮುಖ್ಯ ರಸ್ತೆಯ ಕಾಮಗಾರಿ ಮೊದಲು ಪೂರ್ಣಗೊಳಿಸಿ ಬಳಿಕ ಸೇವಾ ರಸ್ತೆ ಹಾಗೂ ಚರಂಡಿ ನಿರ್ಮಿಸುವ ಅಧಿಕಾರಿಗಳ ಪ್ರಸ್ತಾವಕ್ಕೆ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮುಖ್ಯ ರಸ್ತೆ ಪೂರ್ಣಗೊಂಡ ನಂತರ ಪೂರಕ ಕಾಮಗಾರಿಗಳು ವಿಳಂಬವಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತಪಡಿಸಲಾಗಿತ್ತು. ಬಳಿಕ ಸೇವಾ ರಸ್ತೆ ಹಾಗೂ ಚರಂಡಿ ಕಾಮಗಾರಿ ಆರಂಭ ವಾದರೂ, ಅದರ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಅವರು ಹೇಳಿದರು.

ಹೆದ್ದಾರಿ ಕಾಮಗಾರಿಯಿಂದ ರಸ್ತೆ ಬದಿಯ ವ್ಯಾಪಾರಸ್ಥರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂಗಡಿಗಳಿಗೆ ಗ್ರಾಹಕರು ಸುಲಭವಾಗಿ ತಲುಪಲು ಸಾಧ್ಯವಾಗದಿರುವುದು, ವಾಹನಗಳ ಸಂಚಾರದಲ್ಲಿನ ಗೊಂದಲ ಹಾಗೂ ಧೂಳು–ಕೆಸರು ಸೇರಿದಂತೆ ಹಲವು ಸಮಸ್ಯೆಗಳಿಂದ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ ಎಂದು ಸ್ಥಳೀಯ ವ್ಯಾಪಾರಸ್ಥರು ಅಳಲು ತೋಡಿಕೊಂಡಿದ್ದಾರೆ.

ಶಂಶುದ್ದೀನ್ ವೃತ್ತದ ಬಳಿ ಸಂಚಾರ ದಟ್ಟಣೆ ಹೆಚ್ಚುತ್ತಿರುವುದಕ್ಕೆ ಸಮೀಪದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವೂ ಪ್ರಮುಖ ಕಾರಣವಾಗಿದೆ. ಪಟ್ಟಣದೊಳಗೆ ಬರುವ ಮತ್ತು ಹೊರಗೆ ತೆರಳುವ ಬಸ್‌ಗಳು ಹಾಗೂ ಇತರ ವಾಹನಗಳು ಒಂದೇ ಪ್ರದೇಶದಲ್ಲಿ ಸಂಚರಿಸುವುದರಿಂದ ಜಂಕ್ಷನ್‌ನಲ್ಲಿ ಗೊಂದಲ ಉಂಟಾಗುತ್ತಿದೆ.

ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಹೊಸ ರಸ್ತೆ ಈಗಿರುವ ಎರಡು ಪಥದ ರಸ್ತೆಗೆ ಸೇರುವ ಸ್ಥಳದಲ್ಲಿಯೂ ವಾಹನಗಳ ಸಂಚಾರದಲ್ಲಿ ಅಸ್ತವ್ಯಸ್ತತೆ ಕಂಡುಬರುತ್ತಿದ್ದು, ಅಪಘಾತದ ಆತಂಕ ವ್ಯಕ್ತವಾಗಿದೆ.

ಹೊಸ ಹೆದ್ದಾರಿ ರಸ್ತೆಯನ್ನು ಹಿಂದಿನ ನೆಲಮಟ್ಟಕ್ಕಿಂತ ಎತ್ತರಿಸಲಾಗಿದ್ದರೂ ಮಳೆ ಬಂದಾಗ ಶಂಶುದ್ದೀನ್ ವೃತ್ತ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನೀರು ನಿಲ್ಲುತ್ತಿರುವುದು ಚರಂಡಿ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಈ ಭಾಗದಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುವುದು ಹೊಸ ಸಮಸ್ಯೆಯಲ್ಲ. ಶಂಶುದ್ದೀನ್ ವೃತ್ತ, ರಂಗಿನಕಟ್ಟೆ ಹಾಗೂ ಎನ್‌ಎಚ್‌–66ರ ಇತರ ಭಾಗಗಳಲ್ಲೂ ಈ ಹಿಂದೆ ನೀರು ನಿಂತಿರುವ ಘಟನೆಗಳು ವರದಿಯಾಗಿವೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ನೂರ್ ಮಸೀದಿ ಸಮೀಪದ ಚರಂಡಿ ಹಾಗೂ ಕಲ್ವರ್ಟ್‌ಗಳ ಸಮಸ್ಯೆಯನ್ನೂ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಈ ಬಾರಿ ಮಳೆಗಾಲದಲ್ಲಿ ಸಮಸ್ಯೆ ಉಲ್ಬಣಗೊಳ್ಳದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

13 ವರ್ಷವಾದರೂ ಪೂರ್ಣವಾಗದ ಕಾಮಗಾರಿ: ಭಟ್ಕಳದ ಎನ್‌ಎಚ್‌–66 ನಾಲ್ಕು ಪಥದ ಕಾಮಗಾರಿ ಹಲವು ವರ್ಷಗಳಿಂದ ವಿಳಂಬವಾಗುತ್ತಿದೆ. ಯೋಜನೆ 2013ರಲ್ಲಿ ಆರಂಭಗೊಂಡು 2017ರ ವೇಳೆಗೆ ಪೂರ್ಣಗೊಳ್ಳ ಬೇಕಾಗಿತ್ತು ಎಂಬುದು ಹಿಂದಿನ ವರದಿಗಳಲ್ಲಿದೆ.

ಈ ವರ್ಷದ ಆರಂಭದಲ್ಲೂ ಶಂಶುದ್ದೀನ್ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಭಾಗಗಳಲ್ಲಿ ಕಾಮಗಾರಿ ಚುರುಕು ಗೊಂಡಿತ್ತು. ಆದರೆ ಸೇವಾ ರಸ್ತೆ ಹಾಗೂ ಇತರ ಪೂರಕ ಕಾಮಗಾರಿಗಳ ಬಗ್ಗೆ ಆಗಲೇ ಸಾರ್ವಜನಿಕರಲ್ಲಿ ಪ್ರಶ್ನೆಗಳು ಎದ್ದಿದ್ದವು.

ಈಗ ಮಳೆಗಾಲವೂ ಆರಂಭವಾಗಿರುವುದರಿಂದ ಕಾಮಗಾರಿಯ ವೇಗ ಕುಂಠಿತವಾಗುವ ಸಾಧ್ಯತೆ ಮತ್ತಷ್ಟು ಹೆಚ್ಚಿದೆ. ಹೀಗಾಗಿ ಮುಖ್ಯ ಹೆದ್ದಾರಿ ಕಾಮಗಾರಿಯ ಜತೆಗೆ ಸೇವಾ ರಸ್ತೆ, ಚರಂಡಿ ಹಾಗೂ ಜಂಕ್ಷನ್‌ಗಳ ಸಂಚಾರ ವ್ಯವಸ್ಥೆಯನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣವಾದರೂ ಪಟ್ಟಣದೊಳಗಿನ ಸಂಚಾರ ಸಮಸ್ಯೆ ಮತ್ತು ಮಳೆನೀರು ನಿಲ್ಲುವ ಸಮಸ್ಯೆ ಮುಂದುವರಿಯುವ ಆತಂಕ ಸಾರ್ವಜನಿಕರಲ್ಲಿದೆ.

ಕಾಮಗಾರಿ ಯಾವಾಗ ಪೂರ್ಣಗೊಳ್ಳಲಿದೆ ಎಂಬುದಕ್ಕಿಂತ, ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರಕ್ಕೆ ಅಗತ್ಯವಾದ ಪೂರಕ ವ್ಯವಸ್ಥೆಗಳು ಯಾವಾಗ ಸಿದ್ಧವಾಗಲಿವೆ ಎಂಬುದೇ ಇದೀಗ ಭಟ್ಕಳಿಗರ ಪ್ರಮುಖ ಪ್ರಶ್ನೆಯಾಗಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X