Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಮರಳು ಸಮಸ್ಯೆ ಪರಿಹಾರಕ್ಕಾಗಿ...

ಭಟ್ಕಳ: ಮರಳು ಸಮಸ್ಯೆ ಪರಿಹಾರಕ್ಕಾಗಿ ನ.13ರಂದು ಬೃಹತ್ ಪ್ರತಿಭಟನಾ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ12 Nov 2024 5:22 PM IST
share
ಭಟ್ಕಳ: ಮರಳು ಸಮಸ್ಯೆ ಪರಿಹಾರಕ್ಕಾಗಿ ನ.13ರಂದು ಬೃಹತ್ ಪ್ರತಿಭಟನಾ ಮೆರವಣಿಗೆ

ಭಟ್ಕಳ: ಮರಳು ಲಭ್ಯತೆಗಾಗಿ ಶಾಶ್ವತ ಪರಿಹಾರ ಒದಗಿಸಬೇಕೆಂಬ ಆಗ್ರಹದೊಂದಿಗೆ ತಾಲೂಕು ಎಲ್ಲಾ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಬುಧವಾರ ಬೆಳಿಗ್ಗೆ 9 ಗಂಟೆಗೆ ಭಟ್ಕಳ ಹಳೆ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದ್ದು, ಈ ಮೆರವಣಿಗೆಯು ಸಂಶುದ್ದೀನ್ ಸರ್ಕಲ್ ಮೂಲಕ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ಭಟ್ಕಳ ಇಂಜಿನಿಯರ್ ಹಾಗೂ ಆರ್ಕಿಟೆಕ್ಚರ್ ಅಸೋಸಿಯೇಷನ್ ಕಾರ್ಯದರ್ಶಿ ಸುರೇಶ ಪೂಜಾರಿ ತಿಳಿಸಿದ್ದಾರೆ.

ಅಮೀನಾ ಪ್ಯಾಲೇಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಾ, "ಕಳೆದ ಆರು ತಿಂಗಳಿನಿಂದ ಮರಳು ಕೊರತೆಯಿಂದ 30 ಸಾವಿರಕ್ಕೂ ಹೆಚ್ಚು ಕುಟುಂಬಗಳು, 80 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿಗಳು ನಿಂತಿದ್ದು, ಎಲ್ಲಾ ವಲಯದ ಕಾರ್ಮಿಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇದನ್ನು ಸರಕಾರ ತಕ್ಷಣ ಪರಿಹರಿಸಬೇಕಿದೆ," ಎಂದು ಪುನರ್ರದಿಸಿದರು.

ಇನ್ನು, ಭಟ್ಕಳ ಸೆಂಟ್ರಿಂಗ್ ಸಂಘದ ಸಹ ಕಾರ್ಯದರ್ಶಿ ರಾಮ ಹೆಬಳೆ, "ಮರಳಿನ ಕೊರತೆಯಿಂದ ದೀಪಾವಳಿ ಹಬ್ಬದ ವೇಳೆ ಕಾರ್ಮಿಕರಿಗೆ ಸಂಕಟವಾಗಿದೆ. ಕಾರ್ಮಿಕರ ಆರ್ಥಿಕ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು," ಎಂದು ಮನವಿ ಮಾಡಿದರು.

ಭಟ್ಕಳ ಇಂಜಿನಿಯರ್ ಹಾಗೂ ಆರ್ಕಿಟೆಕ್ಚರ್ ಅಸೋಸಿಯೇಷನ್ ಸದಸ್ಯ ಮಿಸ್ಬ್ ಉಲ್ ಹಕ್ ಮಾತನಾಡಿ 'ಮರಳುಗಾರಿಕೆಯಿಂದ ಕೇವಲ ಕಾರ್ಮಿಕರ ಅಥವಾ ದೋಣಿ ಮಾಲಕರ ಬದುಕು ಮಾತ್ರ ಸಾಗುವುದಿಲ್ಲ. ಕಟ್ಟಡ ನಿರ್ಮಾಣದಲ್ಲಿ ಮರಳು ಒಂದು ಮೂಲ ವಸ್ತು. ವಾಸ್ತವ ಹೀಗಿರುವಾಗ ದಿಢೀರ್ ಎಂದು ಮರಳುಗಾರಿಕೆಯನ್ನೇ ನಿಲ್ಲಿಸಿದರೆ ತೀರಾ ಬಡ ವರ್ಗದ ಕಾರ್ಮಿಕರ ಪಾಡೇನು? ಇದರ ಬಗ್ಗೆ ಜನಪ್ರತಿನಿಧಿಗಳು, ಆಡಳಿತದ ಆಯಾಕಟ್ಟಿನ ಸ್ಥಳದಲ್ಲಿ ಕೂತವರು ಯೋಚನೆ ಮಾಡಬೇಕಲ್ಲವೇ?

ಈ ಸಂದರ್ಭದಲ್ಲಿ ಭಟ್ಕಳ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಅಶೋಸಿಯೇಶನ್ ಸಂಘದ ಅಧ್ಯಕ್ಷ ನಾಗೇಂದ್ರ ನಾಯ್ಕ, ಭಟ್ಕಳ ಸೆಂಟ್ರಿಂಗ್ ಸಂಘದ ಅಧ್ಯಕ್ಷ ಲೋಕೇಶ ನಾಯ್ಕ, ಕಾರ್ಯದರ್ಶಿ ಶಿವರಾಮ ನಾಯ್ಕ, ಭಟ್ಕಳ ಕಟ್ಟಡ ಕೂಲಿ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಶ್ರೀಧರ ನಾಯ್ಕ ಚೌಥನಿ, ಭಟ್ಕಳ ಕಟ್ಟಡ ಕೂಲಿ ಪೇಂಟಿಂಗ್ ಸಂಘದ ರಾಮ ನಾಯ್ಕ, ಮಂಜುನಾಥ ಗೊಂಡ ಭಟ್ಕಳ ಟಿಪ್ಪರ್ ಮಾಲಕರ ಸಂಘದ ಅಜೀಜ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X