Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಜು.16ರಂದು “ರಾಬಿತಾ...

ಭಟ್ಕಳ: ಜು.16ರಂದು “ರಾಬಿತಾ ಎಜ್ಯುಕೇಶನಲ್ ಎಕ್ಸಲೆನ್ಸ್ ಅವಾರ್ಡ” ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 July 2024 6:46 PM IST
share
ಭಟ್ಕಳ: ಜು.16ರಂದು “ರಾಬಿತಾ ಎಜ್ಯುಕೇಶನಲ್ ಎಕ್ಸಲೆನ್ಸ್ ಅವಾರ್ಡ” ಸಮಾರಂಭ

ಭಟ್ಕಳ: ಅನಿವಾಸಿ ಭಾರತೀಯರ “ರಾಬಿತಾ ಸೂಸೈಟಿಯಿಂದ ವರ್ಷಂಪ್ರತಿ ನಡೆಯುವ ರಾಬಿತಾ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.16 ರಂದು ಬೆಳಗ್ಗೆ 10ಗಂಟೆಗೆ ಅಂಜುಮನ್ ಆಬಾದ್ ಮೈದಾನದಲ್ಲಿ ಜರುಗಲಿದೆ ಎಂದು ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ‍್ರಹ್ಮಾನ್ ಮುನಿರಿ ಹೇಳಿದರು.

ಅವರು ಸೋಮವಾರ ಮದ್ಯಾನ್ ರಾಬಿತಾ ಸೂಸೈಟಿಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಮಾಹಿತಿ ನೀಡಿ ಮಾತನಾಡಿದರು.

ರಾಬಿತಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅಖಿಲಾ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಇದರ ಮಾಜಿ ವಕ್ತಾರ ಹಝರತ್ ಮೌಲಾನ ಖಲೀಲುರ‍್ರಹ್ಮಾನ್ ಸಜ್ಜಾದ್ ನೋಮಾನಿ ಹಾಗೂ ಉ.ಕ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕೆ, ಬಂದರು ಸಚಿವ ಮಾಂಕಾಳ್ ವೈದ್ಯ ಭಾಗಹಿಸುತ್ತಿದ್ದಾರೆ. ರಾಬಿತಾ ಸೂಸೈಟಿಯ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಬೆ.10 ರಿಂದ ಮಧ್ಯಾಹ್ನ 1 ಹಾಗೂ ಸಂಜೆ 4.30ರಿಂದ 7 ಗಂಟೆ ವರೆಗೆ ಎರಡು ಹಂತಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಭಟ್ಕಳದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಪ್ರತಿಭೆಗಳನ್ನು ಪೋಷಿಸುವ ಕಾರ್ಯ ರಾಬಿತಾ ಸೂಸೈಟಿ ಯಿಂದ ಕಳೆದ 35 ವರ್ಷಗಳಿಂದ ನಿರಂತರವಾಗಿ ನಡೆಯುತ್ತ ಬಂದಿದೆ. ವರ್ಷ ವರ್ಷವೂ ವಿದ್ಯಾರ್ಥಿಗಳ ಅಂಕಗಳಿಕೆಯಲ್ಲಿ ಏರಿಕೆಯಾಗುತ್ತಿರುವುದು ನಮ್ಮ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಎತ್ತಿತೋರಿಸುತ್ತಿದೆ. ಆರಂಭದಲ್ಲಿ ಕೇವಲ ಶೇ.60, 70 ಅಂಕ ಗಳಿಸಿದ ವಿದ್ಯಾರ್ಥಿಗಳಲ್ಲಿ ಸ್ಪರ್ಧೆ ಏರ್ಪಡುತ್ತಿತ್ತು. ಈಗ ಶೇ.೯೫ಕ್ಕೂ ಮೇಲ್ಪಟ್ಟು ಅಂಕಗಳನ್ನು ಗಳಿಸುತ್ತಿದ್ದಾರೆ. ಅಂಕ ಗಳಿಕೆಯಲ್ಲಿ ಯಾರೂ ಕೂಡ ಹಿಂದೆ ಬಿದ್ದಿಲ್ಲ ಎಂದರು.

ಉತ್ತಮ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯ. ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ಸ್ಥಿತಿಗತಿಯೂ ಸುಧಾರಣೆಯಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಜೊತೆ ಜೊತೆ ಉತ್ತಮ ಶಿಕ್ಷಣ ಸಂಸ್ಥೆಗಳು ಹಾಗೂ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೂ ಕೂಡ ಎಕ್ಸಲೆನ್ಸ್ ಅವಾರ್ಡ್ ನೀಡಲಾಗು ತ್ತಿದೆ. ಈ ವರ್ಷ ಉ.ಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗೌರವಿಸಿ ಪುರಸ್ಕರಿಸಲಾಗುವುದು ಎಂದ ಮುನಿರಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಹಿಸಬೇಕೆಂದು ಮನವಿ ಮಾಡಿಕೊಂಡರು.

ರಬಿತಾ ಸೊಸೈಟಿ ಅಧ್ಯಕ್ಷ ಉಮರ್ ಫಾರೂಕ್ ಮುಸ್ಬಾ, ಕಾರ್ಯದರ್ಶಿ ಜೈಲಾನಿ ಮೊಹ್ತಿಶಮ್, ಖಜಾಂಚಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದ ಸಂಚಾಲಕ ಯಾಸಿರ್ ಕಾಸಿಮ್ಜಿ, ಲೆಕ್ಕಪರಿಶೋಧಕ ತಾಹಾ ಮುಅಲ್ಲಿಮ್ ಮಾತನಾಡಿದರು.

ಪತ್ರಿಕಾ ಗೋಷ್ಟಿಯಲ್ಲಿ ಸೂಸೈಟಿಯ ಸದಸ್ಯರಾದ ಶಹರಿಯಾರ್ ಖತೀಬ್, ಮುಯಿಜ್ ಮುಅಲ್ಲಿಮ್, ಕಮರ್ ಸಾದಾ, ಅಬ್ದುಸ್ಸಲಾಂ ದಾಮುದಿ. ಅಫ್ತಾಬ್ ಎಂ.ಜೆ. ಅಬ್ದುಲ್ ಮಜೀದ್ ಎಸ್ ಎಂ, ಅಫ್ಜಲ್ ಎಸ್ ಎಂ, ಶಮ್ದುದ್ದೀನ್ ಝೀಯಾ ದಾಮದಾ ಕಲ್ಲಾಗರ್, ಉಸ್ಮಾನ್ ಎಸ್.ಜೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X