Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. 1993ರ ಗಲಭೆ ಉಲ್ಲೇಖಿಸುವುದು...

1993ರ ಗಲಭೆ ಉಲ್ಲೇಖಿಸುವುದು ಜವಾಬ್ದಾರಿಯುತ ರಾಜಕಾರಣವಲ್ಲ: ವೆಂಕಟೇಶ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ26 May 2026 10:52 PM IST
share
1993ರ ಗಲಭೆ ಉಲ್ಲೇಖಿಸುವುದು ಜವಾಬ್ದಾರಿಯುತ ರಾಜಕಾರಣವಲ್ಲ: ವೆಂಕಟೇಶ್ ನಾಯ್ಕ
ನಾಗಬನ, ಮುರಿನಕಟ್ಟೆ ವಿಚಾರದಲ್ಲಿ ಬಿಜೆಪಿ ರಾಜಕೀಯ: ಕಾಂಗ್ರೆಸ್ ಆರೋಪ

ಭಟ್ಕಳ: ಶ್ರದ್ಧಾ ಕೇಂದ್ರವಾದ ಗುರುವಿನಕಟ್ಟೆ (ನಾಗಬನ) ಹಾಗೂ ಮುರಿನಕಟ್ಟೆ ವಿಚಾರದಲ್ಲಿ ಬಿಜೆಪಿ ನಾಯಕರು ಜನರ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಆರೋಪಿಸಿದರು.

ಮಂಗಳವಾರ ಕಾಂಗ್ರೇಸ್ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುರಿನಕಟ್ಟೆ ಹಿಂದೂಗಳ ಶ್ರದ್ಧಾ ಕೇಂದ್ರವಾಗಿದೆ. ಅದರ ಮರುನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ಅಥವಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ವಿರೋಧಿಯಾಗಿದ್ದರೆ, ತಹಶೀಲ್ದಾರರ ಸಮ್ಮುಖದಲ್ಲೇ ಕಾಮಗಾರಿ ನಡೆಯುತ್ತಿರಲಿಲ್ಲ” ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಮುರಿನಕಟ್ಟೆ ತೆರವುಗೊಳಿಸಲಾದಾಗ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿಯದ್ದೇ ’ಡಬಲ್ ಇಂಜಿನ್’ ಸರ್ಕಾರವಿತ್ತು. ಆಗ ಶಾಸಕರಾಗಿದ್ದ ಸುನೀಲ್ ನಾಯ್ಕ ಯಾವುದೇ ವಿರೋಧ ವ್ಯಕ್ತಪಡಿಸಿರಲಿಲ್ಲ. ಈಗ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಹಾಗೂ ಸಚಿವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಟೀಕಿಸಿದರು. “ಸರ್ಕಾರ ನಿರ್ಮಿಸಿದ್ದ ಪರ್ಯಾಯ ಕಟ್ಟೆಯನ್ನು ಕಿಡಿಗೇಡಿಗಳು ಧ್ವಂಸಗೊಳಿ ಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವರು ಈಗಾಗಲೇ ಸೂಚಿಸಿದ್ದಾರೆ” ಎಂದರು.

ನಾಗಬನ ವಿಚಾರದಲ್ಲಿಯೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ಕಾಂಗ್ರೆಸ್ ಸರ್ಕಾರವೇ ನಾಗಬನ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿತ್ತು. ನಾಲ್ಕು ಗುಂಟೆ ಜಾಗ ಬೇಕು ಎಂದು ಹೇಳಿದ್ದವರು ತಮ್ಮ ಆಡಳಿತಾವಧಿಯಲ್ಲಿ ಅರ್ಧ ಗುಂಟೆಯಲ್ಲಿ ಕಾಮಗಾರಿ ನಡೆಸಿದ್ದು ಏಕೆ?” ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕ ಗೋವಿಂದ ನಾಯ್ಕ ಅವರು ‘1993ರ ಪರಿಸ್ಥಿತಿ ಮರುಕಳಿಸಬಹುದು’ ಎಂಬ ಅರ್ಥದ ಹೇಳಿಕೆ ನೀಡಿರುವುದನ್ನು ಖಂಡಿಸಿದ ಕಾಂಗ್ರೆಸ್ ಮುಖಂಡರು, “ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಸಂಘರ್ಷಗಳಲ್ಲಿ ಬಲಿಯಾಗುವುದು ಬಡವರ ಮಕ್ಕಳು, ನಾಯಕರ ಮಕ್ಕಳಲ್ಲ” ಎಂದು ಎಚ್ಚರಿಸಿದರು.

ಇತ್ತೀಚೆಗೆ ಸಂಭವಿಸಿದ ಜಲದುರಂತದಲ್ಲಿ 11 ಮಂದಿ ಮೃತಪಟ್ಟ ಸಂದರ್ಭದಲ್ಲೂ ಬಿಜೆಪಿ ಕಾರ್ಯಕರ್ತರು ಸಚಿವ ಮಂಕಾಳ ವೈದ್ಯ ವಿರುದ್ಧ ಘೋಷಣೆ ಕೂಗಿರುವುದು ಅಮಾನವೀಯ ಎಂದು ಅವರು ಹೇಳಿದರು. “ಸಚಿವರು ತುರ್ತು ಸಭೆಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಇಂತಹ ದುಃಖದ ಸಂದರ್ಭದಲ್ಲಿಯೂ ರಾಜಕೀಯ ಮಾಡಲಾಗಿದೆ” ಎಂದು ಆರೋಪಿಸಿದರು.

ಸುನೀಲ್ ನಾಯ್ಕ ಅವರು ದೇವಸ್ಥಾನಗಳ ಅಭಿವೃದ್ಧಿ, ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಸಾರ್ವಜನಿಕ ಕಾರ್ಯಗಳ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ ವೆಂಕಟೇಶ ನಾಯ್ಕ, “ಜನರ ಧಾರ್ಮಿಕ ಭಾವನೆ ಗಳನ್ನು ಕೆರಳಿಸಿ ಚುನಾವಣಾ ಲಾಭ ಪಡೆಯುವುದು ಬಿಜೆಪಿಗೆ ಹೊಸದಲ್ಲ” ಎಂದರು.

ಪರೇಶ್ ಮೇಸ್ತ ಪ್ರಕರಣದಲ್ಲಿಯೂ ಬಿಜೆಪಿ ಸುಳ್ಳು ಪ್ರಚಾರದ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸಿತ್ತು ಎಂದು ಆರೋಪಿಸಿದ ಅವರು, “ಆ ಕುಟುಂಬಕ್ಕೆ ಬಿಜೆಪಿ ನೀಡಿದ ಕೊಡುಗೆ ಏನು?” ಎಂದು ಪ್ರಶ್ನಿಸಿದರು.

ನೀಟ್ ಪರೀಕ್ಷೆಯ ವೈಫಲ್ಯದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಉಲ್ಲೇಖಿಸಿದ ಅವರು, “ಅದರ ಹೊಣೆ ಯಾರು ಹೊರುತ್ತಾರೆ?” ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಮಾ ಮೊಗೇರ, ಭಟ್ಕಳ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ, ನಾರಾಯಣ ನಾಯ್ಕ, ಟಿ.ಡಿ. ನಾಯ್ಕ, ರಮೇಶ್ ನಾಯ್ಕ, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ರಾಜು ನಾಯ್ಕ, ಸುಧಾ ನಾಯ್ಕ, ನಯನಾ ನಾಯ್ಕ, ಜಯಶ್ರೀ ಮೊಗೇರ, ಮಂಜುನಾಥ ನಾಯ್ಕ, ಭಾಸ್ಕರ ಮೊಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X