Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ಪ್ರಮುಖ ರೈಲುಗಳನ್ನು...

ಭಟ್ಕಳದಲ್ಲಿ ಪ್ರಮುಖ ರೈಲುಗಳನ್ನು ನಿಲುಗಡೆಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ7 Oct 2023 6:12 PM IST
share
ಭಟ್ಕಳದಲ್ಲಿ ಪ್ರಮುಖ ರೈಲುಗಳನ್ನು ನಿಲುಗಡೆಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಮನವಿ

ಭಟ್ಕಳ: ಭಟ್ಕಳದ ಮೂಲಕ ಮಂಗಳೂರು, ಉಡುಪಿ ಕೇರಳ ಸಂಪರ್ಕಿಸುವ ವಿವಿಧ ಪ್ರಮುಖ ರೈಲುಗಳನ್ನು ಭಟ್ಕಳದಲ್ಲಿ ನಿಲುಗಡೆಗೆ ಆಗ್ರಹಿಸಿ ತಂಝೀಮ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಶನಿವಾರ ಕೇಂದ್ರ ರೈಲು ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಭಟ್ಕಳ ತಾಲೂಕು ಒಂದು ಪ್ರಮುಖ ಪ್ರವಾಸಿ ತಾಣವಾಗಿದ್ದು ರಾಜ್ಯದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶದಾದ್ಯಂತ ಪ್ರವಾಸಿಗರು ಭಟ್ಕಳ, ಮುರುಢೇಶ್ವರವನ್ನು ಕಣ್ತುಂಬಿಕೊಳ್ಳಲು ಭಟ್ಕಳ ನಗರಕ್ಕೆ ಬೇಟಿ ನೀಡುತ್ತಾರೆ. ಅಲ್ಲದೆ ಭಟ್ಕಳದ ಬಹುತೇಕರು ಗಲ್ಫ್ ಮತ್ತಿತರ ರಾಷ್ಟ್ರಗಳಲ್ಲಿ ಹಾಗೂ ನಮ್ಮ ದೇಶದ ವಿವಿಧ ರಾಜ್ಯಗಳಲ್ಲಿ ವಾಸಿಸುತ್ತಾರೆ. ಇಲ್ಲಿನ ಜನರ ಅನುಕೂಲಕ್ಕಾಗಿ ರೈಲು ಸಂಖ್ಯೆ. 19258/19259 - ಕೊಚುವೇಲಿ ಭಾವನಗರ ಎಕ್ಸ್‌ಪ್ರೆಸ್, 16312/16313 - ಕೊಚುವೇಲಿ ಗಾಣಗಾನಗರ ಎಕ್ಸ್‌ಪ್ರೆಸ್, 16633/16634 - ತಿರುವನಂತಪುರ ವೆರಾವಲ್ ಎಕ್ಸ್‌ಪ್ರೆಸ್, 16335/16336 - ನಾಗರ್‌ ಕೋಯಿಲ್ ಗಾಂಧಿ ಧಾಮ್ ಎಕ್ಸ್‌ಪ್ರೆಸ್, 22148/22149 - ಎರ್ನಾಕುಲಂ ಪುಣೆ ಸೂಪರ್‌ಫಾಸ್ಟ್ (ಎರಡು ವಾರಕ್ಕೊಮ್ಮೆ), 12201/12202 - ಕೊಚುವೇಲಿ ಮುಂಬೈ LTT (ದ್ವಿ-ವಾರ), 12431/12432 - ತಿರುವನಂತಪುರ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ (ತ್ರಿ-ಸಾಪ್ತಾಹಿಕ) ರೈಲುಗಳನ್ನು ಭಟ್ಕಳದಲ್ಲಿ ನಿಲುಗೊಳಿಸುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಭಟ್ಕಳವು ಒಂದು ಪ್ರಮುಖ ವ್ಯಾಪಾರ ಕೇಂದ್ರವೂ ಆಗಿದ್ದು ಬೇರೆ ಬೇರೆ ರಾಜ್ಯದ ಜನರು ಇಲ್ಲಿಗೆ ಬರುತ್ತಾರೆ ಮತ್ತು ಇಲ್ಲಿಯ ಜನರು ಬೇರೆ ರಾಜ್ಯಗಳಿಗೆ ಪ್ರಯಾಣಿಸುತ್ತಾರೆ. ಅಲ್ಲದೆ ನಿತ್ಯವೂ ನೂರಾರು ಮಂದಿ ಉಡುಪಿ, ಮಂಗಳೂರು, ಕೇರಳಕ್ಕೆ ಆರೋಗ್ಯ, ವ್ಯಾಪಾರ, ಶಿಕ್ಷಣದ ಉದ್ದೇಶಕ್ಕಾಗಿ ಪ್ರಯಾಣಿಸುತ್ತಲೇ ಇರುತ್ತಾರೆ. ಈ ಎಲ್ಲದರ ಹಿನ್ನೆಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತಗೊಂಡು ಭಟ್ಕಳ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ತಂಝೀಮ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಉದ್ಯಮಿ ಡಾ.ಅತಿಕುರ‍್ರಹ್ಮಾನ್ ಮುನೀರಿ, ಭಟ್ಕಳ ನಾಗರೀಕ ಹಿತ ರಕ್ಷಣ ವೇದಿಕೆ ಹಾಗೂ ಸದ್ಭಾವನಾ ಮಂಚ್ ನ ಅಧ್ಯಕ್ಷ ಸತೀಶ್ ಕುಮಾರ್ ನಾಯ್ಕ, ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಮೌಲಾನ ಅಝೀಝುರ‍್ರಹ್ಮಾನ್ ರುಕ್ನುದ್ದೀನ್, ಜೆ.ಸಿ.ಐ ನ ಅಬ್ದುಲ್ ಜಬ್ಬಾರ್, ಅಬ್ದುಲ್ ಹಸೀಬ್ ಅಸ್ಕೇರಿ, ಜಾವೀದ್ ಮುಕ್ರಿ, ಶಾಹೀನಾ ಶೇಖ್, ಇಕ್ಬಾಲ್ ಸಿಟಿ ಮೆಡಿಕಲ್ ಮತ್ತಿತರರು ಉಪಸ್ಥಿತರಿದ್ದರು.

Tags

organization
share
ವಾರ್ತಾಭಾರತಿ
ವಾರ್ತಾಭಾರತಿ
Next Story
X