Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ‘ಆದರ್ಶ ಹಾಸ್ಪಿಟಲ್ ಕನೆಕ್ಟ್';...

ಭಟ್ಕಳ | ‘ಆದರ್ಶ ಹಾಸ್ಪಿಟಲ್ ಕನೆಕ್ಟ್'; ಲೈಫ್ ಕೇರ್ ಜೊತೆ ವೈದ್ಯಕೀಯ ಸಂವಾದ

ವಾರ್ತಾಭಾರತಿವಾರ್ತಾಭಾರತಿ16 Jan 2026 9:43 AM IST
share
ಭಟ್ಕಳ | ‘ಆದರ್ಶ ಹಾಸ್ಪಿಟಲ್ ಕನೆಕ್ಟ್; ಲೈಫ್ ಕೇರ್ ಜೊತೆ ವೈದ್ಯಕೀಯ ಸಂವಾದ

ಭಟ್ಕಳ, ಜ.16: ಲೈಫ್ ಕೇರ್ ಸ್ಪೆಷಾಲಿಟಿ ಹಾಸ್ಪಿಟಲ್, ಭಟ್ಕಳ ಹಾಗೂ ಉಡುಪಿಯ ಆದರ್ಶ ಹಾಸ್ಪಿಟಲ್ ಜಂಟಿ ಆಶ್ರಯದಲ್ಲಿ ‘ಆದರ್ಶ ಹಾಸ್ಪಿಟಲ್ ಕನೆಕ್ಟ್’ ಎಂಬ ವೈದ್ಯಕೀಯ ಸಂವಾದ ಮತ್ತು ಶೈಕ್ಷಣಿಕ ಕಾರ್ಯಕ್ರಮ ರವಿವಾರ ಸಂಜೆ ಇಲ್ಲಿ ನಡೆಯಿತು.

ನಗರದ ರಾಯಲ್ ಓಕ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಟ್ಕಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ವೈದ್ಯರು ಮತ್ತು ಆರೋಗ್ಯ ಕ್ಷೇತ್ರದ ವೃತ್ತಿಪರರು ಭಾಗವಹಿಸಿದ್ದರು. ಹಿರಿಯ ಅರಿವಳಿಕೆ ತಜ್ಞ ಡಾ. ಸವಿತಾ ಕಾಮತ್ ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದರು.

ತುರ್ತು ಚಿಕಿತ್ಸಾ ವ್ಯವಸ್ಥೆ, ಸಮಯೋಚಿತ ತಪಾಸಣೆ ಹಾಗೂ ಸಮನ್ವಯಿತ ಚಿಕಿತ್ಸೆಯ ಮಹತ್ವದ ಕುರಿತು ಕಾರ್ಯಕ್ರಮದಲ್ಲಿ ವಿವಿಧ ಉಪನ್ಯಾಸಗಳು ನಡೆದವು. ಹೃದಯ ತಜ್ಞ ಡಾ.ಸುಹಾಸ್ ಜಿ.ಸಿ. ಇಸಿಜಿ ತುರ್ತು ಪರಿಸ್ಥಿತಿಗಳ ಕುರಿತು ಮಾತನಾಡಿ, ಹೃದಯ ಸಂಬಂಧಿ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ತಕ್ಷಣ ಚಿಕಿತ್ಸೆ ನೀಡುವ ಅಗತ್ಯವಿದೆ ಎಂದು ಹೇಳಿದರು.

ನೆಫ್ರಾಲಜಿಸ್ಟ್ ಡಾ. ಮೇಘಾ ಪೈ ಗ್ಲೊಮೆರೂಲರ್ ಕಾಯಿಲೆಗಳ ಕುರಿತು ಉಪನ್ಯಾಸ ನೀಡಿ, ಕಿಡ್ನಿ ಆರೋಗ್ಯದ ಮೇಲೆ ಇವುಗಳ ಪರಿಣಾಮ ಹಾಗೂ ಮುಂಚಿತ ನಿರ್ಣಯದ ಮಹತ್ವವನ್ನು ವಿವರಿಸಿದರು. ನ್ಯೂರೋ ಸರ್ಜನ್ ಡಾ. ರಾಜೇಶ್ ನಾಯರ್ ತಲೆಯ ಗಾಯಗಳ ಕುರಿತು ಮಾತನಾಡಿ, ಪ್ರಾಥಮಿಕ ಮೌಲ್ಯಮಾಪನ ಮತ್ತು ನಿರ್ವಹಣೆಯ ಪ್ರಮುಖ ಅಂಶಗಳನ್ನು ವಿವರಿಸಿದರು.

ಲೈಫ್ ಕೇರ್ ಸ್ಪೆಷಾಲಿಟಿ ಹಾಸ್ಪಿಟಲ್ ವೈದ್ಯ ಡಾ.ಕೆನ್ನೆತ್ ಕ್ರಿಸ್ಪಿನ್ ಮಧುಮೇಹಿಗಳಲ್ಲಿ ಕಿಡ್ನಿ ಸುರಕ್ಷೆಗೆ ಸಮಯೋಚಿತ ತಪಾಸಣೆ ಅಗತ್ಯವಿದೆ ಎಂದು ಹೇಳಿದರು. ರೇಡಿಯಾಲಜಿಸ್ಟ್ ಡಾ. ಎಂ.ಡಿ. ನೌಷಾದ್ ಅಕ್ಯೂಟ್ ಸ್ಟ್ರೋಕ್ ಸಂದರ್ಭಗಳಲ್ಲಿ ಇಮೇಜಿಂಗ್ ನ ಪಾತ್ರ ಮತ್ತು ತ್ವರಿತ ನಿರ್ಣಯದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಲೈಫ್ ಕೇರ್ ಹಾಸ್ಪಿಟಲ್, ಭಟ್ಕಳದ ಮೆಡಿಕಲ್ ಡೈರೆಕ್ಟರ್ ಡಾ.ಮುಹಮ್ಮದ್ ನವಾಬ್ ಹಾಗೂ ಆದರ್ಶ ಹಾಸ್ಪಿಟಲ್, ಉಡುಪಿಯ ಮೆಡಿಕಲ್ ಡೈರೆಕ್ಟರ್ ಡಾ. ಜಿ.ಎಸ್. ಚಂದ್ರಶೇಖರ್ ಉಪಸ್ಥಿತರಿದ್ದು, ವೈದ್ಯರೊಂದಿಗೆ ಸಂವಾದ ನಡೆಸಿದರು.

ಲೈಫ್ ಕೇರ್ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ಡಾ. ಝುಬೈರ್ ಕೋಲಾ, ಸಲ್ಮಾನ್ ಜುಬಾಪು, ಸಾಮಾಜಿಕ ಕಾರ್ಯಕರ್ತ ನಝೀರ್ ಕಾಶಿಂಜಿ ಸೇರಿದಂತೆ ಅನೇಕ ಹಿರಿಯ ವೈದ್ಯರು ಮತ್ತು ಆರೋಗ್ಯ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

Bhatkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X