ಭಟ್ಕಳ| ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಆರೋಪ: ಗೋವಿಂದ ನಾಯ್ಕ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿ ಅವಾಚ್ಯ ಪದಗಳನ್ನು ಬಳಸಿದ ಆರೋಪದಡಿ ಹಿಂದುತ್ವ ಸಂಘಟನೆಯ ಮುಖಂಡ ಗೋವಿಂದ ನಾಯ್ಕ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆಯ ಸಂದರ್ಭ ಗೋವಿಂದ ನಾಯ್ಕ ಎಂಬಾತ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳೊಂದಿಗೆ ಅಸಭ್ಯ ಹಾಗೂ ಬೆದರಿಕೆ ಧಾಟಿಯಲ್ಲಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ವಿಡಿಯೊ ಸಾಮಾಜಿಕ ಜಾಲತಾಣ ಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಬಳಿಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರತಿಭಟನೆಯ ವೇಳೆ ಕೆಲವು ಭಾಷಣಗಳು ಮತ್ತು ಘೋಷಣೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸುವ ಹಾಗೂ ಜನರನ್ನು ಪ್ರಚೋದಿಸುವ ಸ್ವರೂಪದಲ್ಲಿದ್ದವು ಎಂಬ ಆರೋಪಗಳೂ ಕೇಳಿಬಂದಿದ್ದು, ಈ ಸಂಬಂಧವೂ ತನಿಖೆಯ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story




