Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ | ನ.20ರಂದು ವಿಜ್ಞಾನ ಮೇಳ :...

ಭಟ್ಕಳ | ನ.20ರಂದು ವಿಜ್ಞಾನ ಮೇಳ : ಲಿಯಾಖತ್ ಅಲಿ

ವಾರ್ತಾಭಾರತಿವಾರ್ತಾಭಾರತಿ18 Nov 2025 10:31 PM IST
share
ಭಟ್ಕಳ | ನ.20ರಂದು ವಿಜ್ಞಾನ ಮೇಳ : ಲಿಯಾಖತ್ ಅಲಿ

ಭಟ್ಕಳ, ನ.18: ಭಟ್ಕಳದ ತರ್ಬಿಯತ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಮ್ಸ್ ಪದವಿ ಪೂರ್ವ ಕಾಲೇಜ್ ನ.20ರಂದು ಎರಡನೇ ವಿಜ್ಞಾನ ಮೇಳವನ್ನು ಆಯೋಜಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಲಿಯಾಖತ್ ಅಲಿ ಹೇಳಿದ್ದಾರೆ.

ಡಾ.ಎಂ.ಟಿ.ಹಸನ್ ಬಾಪಾ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಟ್ಕಳ ಸೈನ್ಸ್ ಫೇರ್ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ವಿಜ್ಞಾನ ಮೇಳದ ಮುಖ್ಯ ಉದ್ದೇಶ ಕೇವಲ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸುವುದಲ್ಲ. ಬದಲಿಗೆ, ವಿದ್ಯಾರ್ಥಿಗಳು ಸಮಾಜವು ಎದುರಿಸುತ್ತಿರುವ ಸಮಸ್ಯೆಗಳನ್ನು ಗುರುತಿಸಬೇಕು, ಅವುಗಳ ಕುರಿತು ಸಂಶೋಧನಾ ಮನಸ್ಥಿತಿಯೊಂದಿಗೆ ಕಾರ್ಯನಿರ್ವಹಿಸಿ ಪರಿಹಾರಗಳನ್ನು ಹೊರತರುವಂತೆ ಮಾಡುವುದು ಇದರ ಗುರಿಯಾಗಿದೆ ಎಂದು ಹೇಳಿದರು.

ಕಾಲೇಜ್‌ನ ಆಡಳಿತ ಪ್ರಾಂಶುಪಾಲ ಮುಹಮ್ಮದ್ ರಝಾ ಮಾತನಾಡಿ, ಶಮ್ಸ್ ಪದವಿ ಪೂರ್ವ ಕಾಲೇಜು ರಾಯಚೂರಿನ ಎಜೆ ಅಕಾಡಮಿ ಆಫ್ ರಿಸರ್ಚ್ ಆಂಡ್ ಡೆವಲಪ್‌ಮೆಂಟ್‌ನ ಸಹಯೋಗದೊಂದಿಗೆ ವಿಜ್ಞಾನ ಮೇಳವನ್ನು ಆಯೋಜಿಸಿದೆ. ಈ ಮೇಳಕ್ಕಾಗಿ ಭಟ್ಕಳ ತಾಲೂಕಿನ ಶಾಲೆ-ಕಾಲೇಜುಗಳನ್ನು ಆಹ್ವಾನಿಸಲಾಗಿತ್ತು. ಒಟ್ಟು 155 ತಂಡಗಳು ನೋಂದಾಯಿಸಿದ್ದು, ಅದರಲ್ಲಿ 46 ತಂಡಗಳನ್ನು ಆಯ್ಕೆ ಮಾಡಲಾಗಿತ್ತು. ವಿದ್ಯಾರ್ಥಿಗಳು ಮೂರರಿಂದ ನಾಲ್ಕು ತಿಂಗಳುಗಳ ಕಾಲ ಸಂಶೋಧನೆ ನಡೆಸಿರುವ ಫಲಿತಾಂಶಗಳು ನ.20ರಂದು ಹೊರಬರಲಿವೆ ಎಂದರು.

ವಿಜ್ಞಾನ ಮೇಳದ ಉದ್ಘಾಟನಾ ಸಮಾರಂಭವು ಬೆಳಗ್ಗೆ 9:30ಕ್ಕೆ ನಡೆಯಲಿದ್ದು ಅಂಜುಮನ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಾ. ಮುಹಮ್ಮದ್ ಝುಬೇರ್ ಕೋಲಾ ಮುಖ್ಯ ಅತಿಥಿಯಾಗಿ ಮತ್ತು ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ವೀರೇಂದ್ರ ಶಾನಭಾಗ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.ವಿದ್ಯಾರ್ಥಿಗಳನ್ನು ಉತ್ತೇಜಿಸಲು ‘ವಿಜ್ಞಾನಿ ಪ್ರಶಸ್ತಿ’ , ‘ಬಡ್ಡಿಂಗ್ ಸೈಂಟಿಸ್ಟ್’ ಮತ್ತು ‘ಎಮರ್ಜಿಂಗ್ ಸೈಂಟಿಸ್ಟ್’ ನಂತಹ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X