Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಪ್ರವಾಸಿಗರ ಮೇಲೆ ಹಲ್ಲೆ;...

ಭಟ್ಕಳ: ಪ್ರವಾಸಿಗರ ಮೇಲೆ ಹಲ್ಲೆ; ದಂಪತಿಗೆ ಗಾಯ, ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Oct 2025 12:18 PM IST
share
ಭಟ್ಕಳ: ಪ್ರವಾಸಿಗರ ಮೇಲೆ ಹಲ್ಲೆ; ದಂಪತಿಗೆ ಗಾಯ, ಪ್ರಕರಣ ದಾಖಲು

ಭಟ್ಕಳ: ಪಿಕ್ನಿಕ್ ತೆರಳಿದ್ದ ಭಟ್ಕಳದ ಕುಟುಂಬವೊಂದರ ಸದಸ್ಯರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ಕುಂಟುವಾಣಿ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ವಿವಿರ:

ಭಟ್ಕಳದ ಫಾರೂಖಿ ಸ್ಟ್ರೀಟ್ ನಿವಾಸಿ ಫುಜೈಲ್ ಅರ್ಮಾರ್ ಅವರು ಸುಮಾರು 25 ಮಂದಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸೋಮವಾರ ಬೆಳಿಗ್ಗೆ ಹಾಡವಳ್ಳಿ ಪಂಚಾಯತ್ ವ್ಯಾಪ್ತಿಯ ಆಗಾ ಗ್ರಾಮಕ್ಕೆ ಪಿಕ್ನಿಕ್‌ಗೆ ತೆರಳಿದ್ದರು. ಸಂಜೆ 5.30ರ ಸುಮಾರಿಗೆ ಹಿಂದಿರುಗುವಾಗ, ಕುಂಟುವಾಣಿಯಲ್ಲಿ ಚಹಾ ಮತ್ತು ಉಪಹಾರಕ್ಕಾಗಿ ವಾಹನ ನಿಲ್ಲಿಸಿದ್ದರು. ಕೆಲವು ಸಮಯದ ನಂತರ ಇತರ ವಾಹನಗಳು ಭಟ್ಕಳದತ್ತ ತೆರಳಿದರೂ, ಫುಜೈಲ್ ಅವರ ಕಾರಿನಲ್ಲಿ ಬಂದಿದ್ದವರು ಮತ್ತು ಬೈಕ್‌ನಲ್ಲಿ ಬಂದಿದ್ದ ಸ್ನೇಹಿತ ಜಿಯಾ ಮತ್ತು ಅವರ ಪತ್ನಿ ಅಲ್ಲಿ ಉಳಿದಿದ್ದರು.

ಕೆಲ ಹೊತ್ತಿನ ಬಳಿಕ ಫುಜೈಲ್ ಅವರು ಕಾರು ಸ್ಟಾರ್ಟ್ ಮಾಡಲು ಸಿದ್ಧವಾಗುತ್ತಿದ್ದಂತೆಯೇ, ಒಬ್ಬ ಯುವಕ ಅವರೊಂದಿಗೆ ವಾಗ್ವಾದ ಪ್ರಾರಂಭಿಸಿ, “ನೀವು ಸಾಫ್ಟ್ ಡ್ರಿಂಕ್ ಬಾಟಲಿಗಳನ್ನು ರಸ್ತೆಯ ಬದಿಯಲ್ಲಿರುವ ಬ್ಯಾನರ್ ಕೆಳಗೆ ಎಸೆದಿದ್ದೀರಿ” ಎಂದು ಆರೋಪಿಸಿದ. ಫುಜೈಲ್ ಅವರು “ಅವು ನಮ್ಮವರು ಹಾಕಿಲ್ಲ” ಎಂದು ಸ್ಪಷ್ಟಪಡಿಸಿದರೂ, ವಿಷಯ ಮುಗಿಸಲು ತಾವೇ ಬಾಟಲಿಗಳನ್ನು ತೆಗೆದು ಹಾಕಿದರು. ಆದರೂ ಆ ಯುವಕ ನಿಂದನೆ ಮಾಡತೊಡಗಿದನು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸುತ್ತಿದ್ದಾಗ ಮತ್ತೊಬ್ಬ ವ್ಯಕ್ತಿ ಹಠಾತ್ ಹಿಂಬದಿ ಯಿಂದ ಬಂದು ಫುಜೈಲ್ ಮೇಲೆ ಹಲ್ಲೆ ನಡೆಸಿದ. ಬಳಿಕ ಅಲ್ಲಿ ಇನ್ನೂ ಹಲವರು ಸೇರಿ ಕಾರಿನಲ್ಲಿದ್ದ ಮಹಿಳೆಯರು ಮತ್ತು ಮಕ್ಕಳನ್ನು ಅಸಭ್ಯ ಶಬ್ದಗಳನ್ನು ಬಳಸಿ ನಿಂದಿಸಿದರು ಎಂದು ಆರೋಪಿಸಲಾಗಿದೆ.

ಈ ವೇಳೆ ಜಿಯಾ ಮತ್ತು ಅವರ ಪತ್ನಿ ವಿಚಾರವನ್ನು ತಿಳಿಯಲು ಮುಂದೆ ಬಂದಾಗ, ಸುಮಾರು 15 ಮಂದಿ ಒಳಗೊಂಡ ಗುಂಪೊಂದು ಅವರ ಮೇಲೂ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ. ಈ ವೇಳೆ ಆರೋಪಿಗಳು ಜಿಯಾ ಅವರ ಪತ್ನಿಯ ಕೈ ಹಿಡಿದು ಎಳೆದಿದ್ದು, ಅವರು ನೆಲಕ್ಕೆ ಬಿದ್ದು ತಲೆಗೆ ತೀವ್ರ ಪೆಟ್ಟಾಗಿದೆ. ಏನೇನೋ ಪ್ರಯತ್ನ ಮಾಡಿ ಅಲ್ಲಿಂದ ಪಾರಾದರೂ, ಸಾಗರ ರಸ್ತೆಯ ಬಸ್ ಡಿಪೋ ಹತ್ತಿರ ತಲುಪುತ್ತಿದ್ದಂತೆಯೇ, ಆಟೋ ಹಾಗೂ ಬೈಕ್‌ನಲ್ಲಿ ಬಂದ ಕೆಲವರು ಅವರನ್ನು ಹಿಂಬಾಲಿಸಿ ಬೈಕ್‌ಗೆ ಢಿಕ್ಕಿ ಹೊಡೆದು ಕೆಳಗೆ ಬೀಳಿಸಿ ಮತ್ತೆ ಹಲ್ಲೆ ನಡೆಸಿದರು ಎನ್ನಲಾಗಿದೆ.

ನಂತರ ಜಿಯಾ ಅವರು ತಮ್ಮ ಸ್ನೇಹಿತ ಫುಜೈಲ್ ಅವರಿಗೆ ಮಾಹಿತಿ ನೀಡಿದ್ದು, ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಜಿಯಾ ಹಾಗೂ ಅವರ ಪತ್ನಿಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಇಬ್ಬರನ್ನೂ ಲೈಫ್ ಕೇರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಜಿಯಾ ಅವರ ಪತ್ನಿಯ ತಲೆಯ ಕೆಳಭಾಗದಲ್ಲಿ ರಕ್ತ ಹೆಪ್ಪು ಗಟ್ಟಿದ್ದು, ಕೈ ಮೂಳೆ ಮುರಿದಿದೆ. ಜಿಯಾ ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ದೊರೆತ ಕೂಡಲೇ ಡಿ.ವೈ.ಎಸ್.ಪಿ ಮಹೇಶ್, ವೃತ್ತ ನಿರೀಕ್ಷಕ ಮಂಜುನಾಥ ಲಿಂಗಾರೆಡ್ಡಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ವಿವರಗಳನ್ನು ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಭಟ್ಕಳ ಮುಸ್ಲಿಂ ಯೂತ್ ಫೆಡರೇಷನ್ ಪರವಾಗಿ ಅಡ್ವ. ಆಫಾಕ್ ಕೋಲಾ, ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಸಂಸ್ಥೆಯ ಪ್ರತಿನಿಧಿಗಳಾದ ಇರ್ಷಾದ್ ಗವಾಯಿ, ಅಝೀಝುರ್ರಹ್ಮಾನ್, ರುಕ್ನುದ್ದೀನ್ ನದ್ವಿ, ಸೈಯದ್ ಅಲಿ, ಇರ್ಷಾದ್ ಸಿದ್ದೀಕಿ ಮತ್ತು ಅನೇಕ ಯುವಕರು ಉಪಸ್ಥಿತರಿದ್ದರು.

ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X