Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬಿಳಲಖಂಡದಲ್ಲಿ ಕಸ ಎಸೆಯುವವರ ಮೇಲೆ...

ಬಿಳಲಖಂಡದಲ್ಲಿ ಕಸ ಎಸೆಯುವವರ ಮೇಲೆ ಸಿಸಿಟಿವಿ ಕಣ್ಗಾವಲು: ನಿಯಮ ಉಲ್ಲಂಘಿಸಿದವರಿಗೆ ದಂಡ

ವಾರ್ತಾಭಾರತಿವಾರ್ತಾಭಾರತಿ22 July 2026 9:07 PM IST
share
ಬಿಳಲಖಂಡದಲ್ಲಿ ಕಸ ಎಸೆಯುವವರ ಮೇಲೆ ಸಿಸಿಟಿವಿ ಕಣ್ಗಾವಲು: ನಿಯಮ ಉಲ್ಲಂಘಿಸಿದವರಿಗೆ ದಂಡ

ಭಟ್ಕಳ: ತಾಲೂಕಿನ ಬಿಳಲಖಂಡ ಗ್ರಾಮದ ಸಾಗರ ರಸ್ತೆ ಸೇರಿದಂತೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಕಸ ಎಸೆಯುವವರ ವಿರುದ್ಧ ಮುಟ್ಟಳ್ಳಿ ಗ್ರಾಮ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಗ್ರಾಮವನ್ನು ಸ್ವಚ್ಛ ಹಾಗೂ ನೈರ್ಮಲ್ಯಯುತವಾಗಿಡುವ ಉದ್ದೇಶದಿಂದ ಎರಡು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬಿಳಲಖಂಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೆಲವರು ಬಳಕೆಯಲ್ಲದ ವಸ್ತುಗಳು ಮತ್ತು ಇತರ ತ್ಯಾಜ್ಯವನ್ನು ಸಾಗರ ರಸ್ತೆಯ ಬದಿಯಲ್ಲಿ ತಂದು ಸುರಿಯುತ್ತಿರುವ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ನಿರಂತರ ದೂರು ನೀಡುತ್ತಿದ್ದರು. ಪಂಚಾಯಿತಿ ಹಾಗೂ ಸ್ಥಳೀಯರು ಹಲವು ಬಾರಿ ಸ್ವಚ್ಛತಾ ಕಾರ್ಯ ನಡೆಸಿ, ಸಾರ್ವಜನಿಕರಿಗೆ ರಸ್ತೆ ಬದಿಯಲ್ಲಿ ಕಸ ಎಸೆಯದಂತೆ ಮನವಿ ಮಾಡಿದರೂ ಪರಿಸ್ಥಿತಿಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿರಲಿಲ್ಲ.

ಇದೇ ಪ್ರದೇಶದ ಸಮೀಪ ಪುರಸಭೆಯ ಘನತ್ಯಾಜ್ಯ ಸಂಸ್ಕರಣಾ ಘಟಕವಿದ್ದರೂ, ಕೆಲವರು ರಸ್ತೆ ಬದಿಯಲ್ಲೇ ಕಸ ಸುರಿದು ಪರಿಸರ ಹಾಗೂ ಸಾರ್ವಜನಿಕ ನೈರ್ಮಲ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವುದು ಮುಂದುವರಿದಿತ್ತು. ಈ ಹಿನ್ನೆಲೆಯಲ್ಲಿ ಮುಟ್ಟಳ್ಳಿ ಗ್ರಾಮ ಪಂಚಾಯಿತಿಯು ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಇಟಗಿ ಅವರ ನೇತೃತ್ವದಲ್ಲಿ ಕಸ ಎಸೆಯುವವರನ್ನು ಗುರುತಿಸುವ ಉದ್ದೇಶದಿಂದ ಎರಡು ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಿದೆ.

ಈ ಕುರಿತು ಮಾತನಾಡಿದ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಇಟಗಿ, "ಬಿಳಲಖಂಡ–ಸಾಗರ ರಸ್ತೆ ಭಾಗದಲ್ಲಿ ದೀರ್ಘಕಾಲದಿಂದ ರಸ್ತೆ ಬದಿಯಲ್ಲಿ ಕಸ ಸುರಿಯುವ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕ್ಯಾಮೆರಾ ಅಳವಡಿಸಿದ ಬಳಿಕ ಇಂತಹ ಪ್ರಕರಣಗಳು ಕಡಿಮೆಯಾಗಿರುವುದು ಗಮನಕ್ಕೆ ಬಂದಿದೆ. ಆದರೂ ನಿರಂತರವಾಗಿ ನಿಗಾ ವಹಿಸಲಾಗು ವುದು. ಕಸ ಎಸೆಯುತ್ತಿರುವುದು ಕಂಡುಬಂದರೆ ಮೊದಲಿಗೆ ದಂಡ ವಿಧಿಸಲಾಗುವುದು. ಮರುಕಳಿಸಿದರೆ ಘನತ್ಯಾಜ್ಯ ನಿರ್ವಹಣಾ ನಿಯಮಗಳಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.

"ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಾರ್ವಜನಿಕರು ಗ್ರಾಮ ಪಂಚಾಯಿತಿ ಯೊಂದಿಗೆ ಸಹಕರಿಸಿ ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದೆ ಪರಿಸರ ಸಂರಕ್ಷಣೆಗೆ ಕೈಜೋಡಿಸ ಬೇಕು" ಎಂದು ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X