Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ದ್ವೇಷ ಭಾಷಣಗಳ ಮಧ್ಯೆ ನೆಮ್ಮದಿಯ ಮಾತು...

ದ್ವೇಷ ಭಾಷಣಗಳ ಮಧ್ಯೆ ನೆಮ್ಮದಿಯ ಮಾತು ಕೇಳಲು ದೇಶ ಹಾತೊರೆಯುತ್ತಿದೆ : ಮುಹಮ್ಮದ್ ಕುಂಞಿ

ಸದ್ಭಾವನಾ ಪ್ರಶಸ್ತಿ ಮತ್ತು ಸ್ನೇಹಾ ಸಮ್ಮಿಲನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ5 Aug 2023 7:41 PM IST
share
ದ್ವೇಷ ಭಾಷಣಗಳ ಮಧ್ಯೆ ನೆಮ್ಮದಿಯ ಮಾತು ಕೇಳಲು ದೇಶ ಹಾತೊರೆಯುತ್ತಿದೆ : ಮುಹಮ್ಮದ್ ಕುಂಞಿ

ಭಟ್ಕಳ: ದೇಶದಲ್ಲೀಗ ದ್ವೇಷ ಭಾಷಣೆಗಳು ಸದ್ದು ಮಾಡುತ್ತಿವೆ. ಇದರಿಂದಾಗಿ ದೇಶದ ತುಂಬೆಲ್ಲ ಕಲಹ, ಗಲಭೆಗಳು ಸೃಷ್ಟಿಯಾಗುತ್ತಿವೆ. ಇವುಗಳ ನಡುವೆ ದೇಶದ ಜನತೆ ನಮ್ಮೆದಿಯ ಮತ್ತು ಸಾಂತ್ವಾನದ ಮಾತುಗಳನ್ನು ಆಲಿಸಲು ಹಾತೊರೆಯುತ್ತಿದೆ ಎಂದು ಸದ್ಭಾವನಾ ಮಂಚ್ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.

ಅವರು ಶುಕ್ರವಾರ ಸಂಜೆ ನವಾಯತ್ ಕಾಲೋನಿಯ ರಾಬಿತಾ ಸಭಾಂಗಣದಲ್ಲಿ ಸದ್ಭಾವನಾ ಮಂಚ್ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆ ಆಯೋಜಿಸಿದ್ದ ಸದ್ಭಾವನಾ ಪ್ರಶಸ್ತಿ ಮತ್ತು ಸ್ನೇಹಾ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಾಂಬುಗಳಿಗಿಂತಲೂ ಹೆಚ್ಚು ವಿನಾಶಕಾರಿಯಾಗಿರುವ ದ್ವೇಷದ ಮಾತುಗಳು. ದೆಹಲಿಯಲ್ಲಿ ಯಾರೋ ಮಾಡಿದ ದ್ವೇಷ ಭಾಷಣಗಳು ಕರ್ನಾಟಕ ಸೇರಿದಂತೆ ದೇಶದ ನಾನಾ ರಾಜ್ಯಗಳಲ್ಲಿ ವಿವಿಧ ಜನಸಮುದಾಯಗಳ ನಡುವೆ ಕಿಚ್ಚನ್ನು ಹಚ್ಚುವ ಕೆಲಸ ಮಾಡುತ್ತದೆ. ಹಾಗೆಯೆ ಉಡುಪಿ, ಮಂಗಳೂರಿನಲ್ಲಿ ಮಾಡಿದ ದ್ವೇಷ ಭಾಷಣದ ಪರಿಣಾಮ ದೇಶದ ಉತ್ತರ ಭಾಗದಲ್ಲಿ ಕೋಮುಗಲಭೆ ಸೃಷ್ಟಿಯಾಗಲು ಕಾರಣವಾಗುತ್ತದೆ. ಮಾತು ಬಾಂಬುಗಳಿಗಿಂತಲೂ ಅಪಾಯಕಾರಿಯಾಗಿದೆ ಎಂದ ಅವರು ನಾವು ಇನ್ನೋಬ್ಬರನ್ನು ನೋಯಿಸುವ ದ್ವೇಷಿಸುವ ಮಾತುಗಳನ್ನು ಆಡುವುದನ್ನು ನಿಲ್ಲಿಸಬೇಕು ಎಂದು ಕರೆ ನೀಡಿದರು.

ನಿಮಗೆ ದೇವರ ಮೇಲೆ ನಂಬಿಕೆ ಇದ್ದರೆ, ದೇಶಕ್ಕೆ, ಸಮುದಾಯಕ್ಕೆ, ಸಮಾಜಕ್ಕೆ ಒಳಿತಾಗುವ ಮಾತನ್ನೇ ಆಡಬೇಕು. ನೀವು ಅತ್ಯಂತ ನೇರವಾದ, ಗೌರವಾರ್ಹವಾದ, ಸರಳವಾದ ಮಾತುಗಳನ್ನೇ ಆಡಬೇಕು ಎಂದು ಪವಿತ್ರ ಕುರ್‌ಆನ್ ಕಲಿಸಿಕೊಟ್ಟಿದೆ ಎಂದ ಅವರು ನಮಗೆಲ್ಲ ಬಹಳ ದೊಡ್ಡ ಶ್ರೀಮಂತ ಇತಿಹಾಸವಿದೆ. ಸಹೋದರತೆಯ, ಸಹಬಾಳ್ವೆಯ, ಪ್ರೀತಿಯ, ಸಹಿಷ್ಣುತೆಯ, ಪರಸ್ಪರ ಒಗ್ಗಟ್ಟಿನ ಪರಂಪರೆ ನಮ್ಮದು. ಇಂತಹ ಮಹಾನ್ ಪರಂಪರೆಗೆ ಇಂದು ದಕ್ಕೆ ತರು ವಂತಹ ದ್ವೇಷ ಭಾಷಣಗಳ ಸದ್ದು ಎಲ್ಲೆಡೆ ಕೇಳಿಸತೊಡಗಿದೆ. ಗೂಂಡಾಗಳು, ಅಪರಾಧಿಗಳು ಸಮಾಜದಲ್ಲಿ ಲೀಡರ್ ಆಗುತ್ತಿದ್ದಾರೆ ಅದಕ್ಕಾಗಿ ಸಮಾಜವನ್ನು ತಿದ್ದುವ, ಬದಾಯಿಸುವ ಹೆಚ್ಚೆಚ್ಚು ಕೆಲಸ ಕಾರ್ಯಗಳು ಮಾನುಷ್ಯಪ್ರೇಮಿಗಳಿಂದ ನಡೆಬೇಕು ಎಂದು ಕರೆ ನೀಡಿದರು.

ಸದ್ಭಾವನಾ ಸಿರಿ-2023 ಪಶಸ್ತಿ ಪುರಸ್ಕೃತ ಶ್ರೀಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ವೀರೇಂದ್ರ ಶಾನಭಾಗ ಮಾತನಾಡಿ, ಸಧ್ಯದ ಪರಿಸ್ಥಿತಿಯಲ್ಲಿ ದೇಶಕ್ಕೆ ಸದ್ಭಾವನೆ ಬೇಕಾಗಿದೆ. ಭಟ್ಕಳದಲ್ಲಿ ಯಾವಾ ಗಲೂ ಶಾಂತಿ, ಸೌಹಾರ್ದತೆ ಇದೆ. ಇಂತಹ ಸದ್ಭಾವನೆ ವೇದಿಗಳ ಮೂಲಕ ದೇಶದಲ್ಲಿ ಪ್ರೀತಿ ಪ್ರೇಮ ಮೂಡುವಂತಾಗಲಿ ಎಂದರು. ಸದ್ಬಾವನಾ ಸೇವಾ-2023 ಗೌರವ ಪುರಸ್ಕೃತ ಭಟ್ಕಳ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸವಿತಾ ಕಾಮಾತ್, ಮುಖ್ಯ ಅತಿಥಿ ರಾಬಿತಾ ಸಂಸ್ಥೆಯ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ, ಪ್ರಧಾನ ಕಾರ್ಯದರ್ಶಿ ಡಾ. ಅತಿಕುರ‍್ರಹ್ಮಾನ್ ಮುನಿರಿ, ಭಟ್ಕಳ ಡಿ.ವೈ.ಎಸ್.ಪಿ ಶ್ರೀಕಾಂತ್ ಪಿ., ತಂಝೀಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿದರು.

ಸದ್ಭಾವನಾ ಸೇವಾ -2023 ಗೌರವ ಪುರಸ್ಕೃತ ಹಿರಿಯ ಸಮಾಜ ಸೇವಕ ನಝೀರ್ ಕಾಶಿಮಜಿ, ಸದ್ಭಾವನಾ ಮಂಚ್ ಗೌರವ ಅಧ್ಯಕ್ಷ ಮೌಲಾನ ಮುನವ್ವರ್ ಪೇಶಮಾಮ್, ಜಮಾಅತೆ ಇಸ್ಲಾಮಿ ಹಿಂದ್ ಉತ್ತರಕನ್ನಡ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯದರ್ಶಿ ಎಂ.ಆರ್. ಮಾನ್ವಿ ಕಾರ್ಯಕ್ರಮ ನಿರೂಪಿಸಿದರು. ಜ.ಇ.ಹಿಂದ್ ಭಟ್ಕಳ ಶಾಖೆಯ ಕಾರ್ಯದರ್ಶಿ ಅಬ್ದುಲ್ ರವೂಫ್ ಸವಣೂರು ಸದ್ಭಾವನಾ ಮಂಚ್ ಕಾರ್ಯವನ್ನು ಪರಿಚಯಿಸಿದರು. ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಧನ್ಯವಾದ ಅರ್ಪಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X