Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ದಾಂಡೇಲಿ: ಕುಟುಂಬಸ್ಥರಿಂದಲೇ ಸರಪಳಿಯಲ್ಲಿ...

ದಾಂಡೇಲಿ: ಕುಟುಂಬಸ್ಥರಿಂದಲೇ ಸರಪಳಿಯಲ್ಲಿ ಬಂಧಿಸಲ್ಪಟ್ಟಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

ಹೊಲದ ಮಧ್ಯೆ ಇರುವ ವಾಸಕ್ಕೆ ಯೋಗ್ಯವಲ್ಲದ ಕಟ್ಟಡದಲ್ಲಿ ಬಂಧಿಯಾಗಿದ್ದ ಯುವಕ

ವಾರ್ತಾಭಾರತಿವಾರ್ತಾಭಾರತಿ16 July 2025 11:06 AM IST
share
ದಾಂಡೇಲಿ: ಕುಟುಂಬಸ್ಥರಿಂದಲೇ ಸರಪಳಿಯಲ್ಲಿ ಬಂಧಿಸಲ್ಪಟ್ಟಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ

ಉತ್ತರ ಕನ್ನಡ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೋರ್ವನನ್ನು ಅವರ ಕುಟುಂಬಸ್ಥರೇ ವಾಸಕ್ಕೆ ಯೋಗ್ಯವಲ್ಲದ ಕಟ್ಟಡದಲ್ಲಿ ಸರಪಳಿಯಿಂದ ಕಟ್ಟಿ ಹಾಕಿದ್ದ ಅಮಾನವೀಯ ಘಟನೆ ದಾಂಡೇಲಿ ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಯುವಕನನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಜನಶಕ್ತಿ ವೇದಿಕೆಯು ಸಕಾಲಿಕ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.

ಆಲೂರು ಗ್ರಾಮದ ನಿವಾಸಿ ವಿನಾಯಕ ವಸಂತ ಸೋನಶೇಟ್ ರಕ್ಷಿಸಲ್ಪಟ್ಟ ಯುವಕ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಹಿನ್ನೆಲೆ:

ವಿನಾಯಕ ವಸಂತ ಸೋನಶೇಟ್ ಕೆಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆನ್ನಲಾಗಿದೆ. ತಮ್ಮ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚುವಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆಂಬ ಕಾರಣಕ್ಕೆ ವಿನಾಯಕರನ್ನು ಅವರ ಕುಟುಂಬದ ಸದಸ್ಯರೇ ಹೊಲದ ಮಧ್ಯೆ ಇರುವ ವಾಸಕ್ಕೆ ಯೋಗ್ಯವಲ್ಲದ ಕಟ್ಟಡವೊಂದರಲ್ಲಿ ಕಾಲಿಗೆ ಸರಪಳಿ ಕಟ್ಟಿ ಕೂಡಿ ಹಾಕಿದ್ದರು.

ವಿನಾಯಕ ಅವರ ತಂದೆ ಅಂಚೆ ಇಲಾಖೆಯ ಸಿಬ್ಬಂದಿಯಾಗಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ನಿಧನರಾಗಿದ್ದರು. ಈ ವೇಳೆ ಆರೋಗ್ಯದಿಂದಿದ್ದ ವಿನಾಯಕರಿಗೆ ಅನುಕಂಪದ ಆಧಾರದ ಮೇಲೆ ಪೋಸ್ಟ್ ಮ್ಯಾನ್ ನೌಕರಿ ಲಭಿಸಿತ್ತು. ಆದರೆ ಬಳಿಕ ಮಾನಸಿಕ ಅಸ್ವಸ್ಥರಾದ ವಿನಾಯಕ ಉಪಟಳ ನೀಡುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಬೇರೆ ದಾರಿ ಕಾಣದೆ ಕುಟುಂಬಸ್ಥರು ಅವರನ್ನು ಕಾಲಿಗೆ ಸರಪಳಿ ಬಿಗಿದು ಕಟ್ಟಡವೊಂದರಲ್ಲಿ ಕೂಡಿ ಹಾಕಿದ್ದರು ಎಂದು ತಿಳಿದುಬಂದಿದೆ.

ರಕ್ಷಣಾ ಕಾರ್ಯಾಚರಣೆ

ವಿನಾಯಕರನ್ನು ಅಮಾನವೀಯವಾಗಿ ಕೂಡಿ ಹಾಕಿರುವ ಬಗ್ಗೆ ಮಾಹಿತಿ ತಿಳಿದ ಭಾರತೀಯ ರೆಡ್ ಕ್ರಾಸ್ ಮತ್ತು ಜನಶಕ್ತಿ ವೇದಿಕೆಯು ಸಂಬಂಧಪಟ್ಟವರಿಗೆ ಮಾಹಿತಿ ನೀಡಿತ್ತು. ಪೊಲೀಸ್ ಇಲಾಖೆ, ಸಾರ್ವಜನಿಕ ಆರೋಗ್ಯ ಇಲಾಖೆ ಮತ್ತು ತಾಲೂಕಾಡಳಿತದ ಸಹಕಾರದಲ್ಲಿ ಮಂಗಳವಾರ ಸ್ಥಳಕ್ಕೆ ತೆರಳಿ ವಿನಾಯಕರನ್ನು ಸರಪಳಿಯಿಂದ ಮುಕ್ತಿಗೊಳಿಸಿ ರಕ್ಷಿಸಿದ್ದಾರೆ. ಬಳಿಕ ಅವರನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಾನಸಿಕ ಚಿಕಿತ್ಸಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

ಈ ಕಾರ್ಯಾಚರಣೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಜಿಲ್ಲಾ ಮುಖ್ಯಸ್ಥರು ಹಾಗೂ ಜನಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಮಾಧವ ನಾಯ್ಕ, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ, ಪಿಎಸ್ಸೈ ಅಮೀನ್ ಅತ್ತಾರ, ಆರೋಗ್ಯ ನಿರೀಕ್ಷಕ ಗೋಪಿ ಚೌವ್ಹಾಣ್, ರೆಡ್ ಕ್ರಾಸ್ ಸಂಸ್ಥೆಯ ರಾಮಾ ನಾಯ್ಕ, ಜನಶಕ್ತಿ ವೇದಿಕೆಯ ಬಾಬು ಶೇಟ್, ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X