Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಹೆಬಳೆ ಪಂಚಾಯತ್ ತ್ಯಾಜ್ಯ ವಿಲೆವಾರಿ...

ಹೆಬಳೆ ಪಂಚಾಯತ್ ತ್ಯಾಜ್ಯ ವಿಲೆವಾರಿ ಸಮಸ್ಯೆ: ಭಟ್ಕಳ ಪುರಸಭೆ ಡಂಪಿಂಗ್ ಯಾರ್ಡ್ ಬಳಕೆಗೆ ತಾತ್ಕಾಲಿಕ ಅನುಮತಿ

ವಾರ್ತಾಭಾರತಿವಾರ್ತಾಭಾರತಿ8 Nov 2023 8:20 PM IST
share
ಹೆಬಳೆ ಪಂಚಾಯತ್ ತ್ಯಾಜ್ಯ ವಿಲೆವಾರಿ ಸಮಸ್ಯೆ: ಭಟ್ಕಳ ಪುರಸಭೆ ಡಂಪಿಂಗ್ ಯಾರ್ಡ್ ಬಳಕೆಗೆ ತಾತ್ಕಾಲಿಕ ಅನುಮತಿ

ಭಟ್ಕಳ: ಹೆಬಳೆ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವಿಲೆವಾರಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರಕಿದ್ದು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಪ್ರತಿನಿಧಿಗಳ ಪರಿಶೀಲನ ಕುಂದುಕೊರತೆಯ ಸಭೆಯಲ್ಲಿ ಹೆಬಳೆ ಪಂಚಾಯತ್ ತ್ಯಾಜ್ಯವನ್ನು ವಿಲೆಮಾಡಲು ಭಟ್ಕಳ ಪುರಸಭೆಯ ಡಂಪಿಂಗ್ ಯಾರ್ಡ್ ಬಳಕೆಗೆ ತಾತ್ಕಾಲಿಕ ಅನುಮತಿ ನೀಡುವಂತೆ ಸಹಾಯಕ ಆಯುಕ್ತರಿಗೆ ಹಾಗೂ ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತ್ಯಾಜ್ಯ ವಿಲೆಗೆ ಸಂಬಂಧಿಸಿದಂತೆ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರ ಬಹುದಿನಗಳ ಹೋರಾಟಕ್ಕೆ ತಾತ್ಕಾಲಿಕ ಜಯಸಿಕ್ಕಿದ್ದು ಮುಂದೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂಬ ಆಗ್ರಹ ಸಾರ್ವಜನಿಕ ರಿಂದ ಕೇಳಿಬಂದಿದೆ.

ತಾಲೂಕಿನ ಹೆಬ್ಳೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸವನ್ನು ಮನೆ ಮನೆಗೆ ಕೊಂಡೊಯ್ಯಲು ಪಂಚಾಯಿತಿ ವ್ಯವಸ್ಥೆ ಮಾಡದ ಕಾರಣ ಜನರು ತಮ್ಮ ಮನೆಗಳ ಕಸವನ್ನು ರಸ್ತೆ ಬದಿ ಎಸೆಯುವ ಸ್ಥಿತಿ ನಿರ್ಮಾಣವಾಗಿದ್ದು, ಕಸದ ರಾಶಿಗಳು ಶೇಖರಣೆ ಯಾಗುತ್ತಿವೆ. ಹನೀಫಾಬಾದ್, ಮಿನಾ ರೋಡ್, ಫಿರ್ದೌಸ್ ನಗರ ಮೊದಲಾದ ಪ್ರದೇಶಗಳಲ್ಲಿ ಖಾಲಿ ಜಾಗ ಹಾಗೂ ರಸ್ತೆ ಬದಿಯ ಕಸದ ರಾಶಿಯಿಂದ ರೋಗ ಹರಡುವ ಭೀತಿ ಉಂಟಾಗಿದ್ದು, ತ್ಯಾಜ್ಯ ವಿಲೇವಾರಿ ಮಾಡಲು ಜಾಗವಿಲ್ಲದೇ ಪರದಾ ಡುವಂತಾಗಿದೆ. ತ್ಯಾಜ್ಯವನ್ನು ಹೊರಹಾಕಲು ಸಾಧ್ಯವಾಗುತ್ತಿಲ್ಲ, ಆದರೆ ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ತಾಲೂಕಾಡಳಿತಕ್ಕೆ ಖಡಕ್ ಸೂಚನೆ ನೀಡಿದ್ದು ಹೆಬ್ಳೆ ಪಂಚಾಯತ್‌ನ ಕಸದ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರಕಿದಂತಾಗಿದೆ.

ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲ ಸರಕಾರಿ ಅಧಿಕಾರಿ ಗಳು ಹಾಗೂ ಭಟ್ಕಳದ ಸಾರ್ವಜನಿಕ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯಲ್ಲಿ ಜಾಲಿಪಟ್ಟಣ ಪಂಚಾಯತ್ ಸದಸ್ಯ ಸೈಯದ್ ಇಮ್ರಾನ್ ಲಂಕಾ ಹೆಬಳೆ, ಮಾವಳಿ ಸೇರಿದಂತೆ ಇತರೆ ಪಂಚಾಯಿತಿಗಳಿಗೆ ತ್ಯಾಜ್ಯ ವಿಲೇವಾರಿಗೆ ಹತ್ತು ಎಕರೆ ಅರಣ್ಯ ಭೂಮಿ ನೀಡಬೇಕು. ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಅನುಮೋದನೆ ನೀಡಿದರೆ ತ್ಯಾಜ್ಯ ಸಮಸ್ಯೆ. ಪಂಚಾಯಿತಿಗಳ ವಿಲೇವಾರಿ ಪರಿಹಾರ ಸಾಧ್ಯ ಎಂದು ಪ್ರಸ್ತಾಪಿಸಿದ್ದು, ಹೆಬಳೆ ಪಂಚಾಯಿತಿ ಕಸವನ್ನು ತಾತ್ಕಾಲಿಕವಾಗಿ ಪುರಸಭೆಯ ಡಂಪಿಂಗ್ ಯಾರ್ಡ್‌ಗೆ ಹಾಕಲು ಅವಕಾಶ ನೀಡಬೇಕು, ಪುರಸಭೆಗೆ 10 ಎಕರೆ ಅರಣ್ಯ ಜಮೀನಿದೆ, ಅದಕ್ಕೆ ಹೊಂದಿಕೊಂಡಂತೆ ಇನ್ನೂ ಹತ್ತು ಎಕರೆ ಭೂಮಿಯನ್ನು ತ್ಯಾಜ್ಯ ವಿಲೆ ಮಾಡಲು ಒದಗಿಸ ಬೇಕು. ಇದರಿಂದ ಭವಿಷ್ಯದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಸ್ಥಳಾವಕಾಶದ ಸಮಸ್ಯೆ ಎದುರಾಗುವುದಿಲ್ಲ ಎಂದು ಸಲಹೆ ನೀಡಿದರು.

ಮೂರು ಪ್ರಸ್ತಾವನೆಗಳನ್ನು ಸ್ವೀಕರಿಸಿದ ಮಾಂಕಾಳ್ ವೈದ್ಯ ಅವರು ಹೆಬಳೆ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಮಾಡಲು ಪುರಸಭೆಯ ಡಂಪಿಂಗ್ ಯಾರ್ಡ್ ಬಳಕೆಗೆ ತಾತ್ಕಾಲಿಕವಾಗಿ ಅನುಮತಿ ನೀಡುವಂತೆ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆ ಕಳುಹಿಸುವಂತೆ ಭಟ್ಕಳ ಸಹಾಯಕ ಆಯುಕ್ತರು ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು.

ಸಾಗರ ರಸ್ತೆಯಲ್ಲಿ ನಗರಸಭೆಯ ಡಂಪಿಂಗ್ ಯಾರ್ಡ್ ಪಕ್ಕದ ಹತ್ತು ಎಕರೆ ಜಾಗಕ್ಕೆ ಅರಣ್ಯ ಇಲಾಖೆಗೆ ಪ್ರಸ್ತಾವನೆ ಕಳುಹಿಸುವಂತೆ ತಾಲೂಕಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕನಮನೆ ಅವರಿಗೆ ಮಾಂಕಾಳ್ ವೈದ್ಯ ಸೂಚಿಸಿದರು. ಕನಿಷ್ಠ ಒಂದು ಸ್ಥಳವಾದರೂ ತ್ಯಾಜ್ಯ ವಿಲೇವಾರಿಗೆ ಇದ್ದರೆ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಂದಿಗೂ ಬರುವುದಿಲ್ಲ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಸಮ್ಮುಖದಲ್ಲಿ ಮಂಕಾಳ್ ವೈದ್ಯ ಅವರು ಪ್ರಸ್ತಾವನೆ ಸ್ವೀಕರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಅವರಿಗೆ ಸೂಚಿಸಿದರು.

ಸಚಿವರ ನಿರ್ದೇಶನದ ಮೇರೆಗೆ ಸಾಗರ ರಸ್ತೆಯ ಡಂಪಿಂಗ್ ಯಾರ್ಡ್ ಪಕ್ಕದ ಹತ್ತು ಎಕರೆ ಜಾಗ ನೀಡುವಂತೆ ಅರಣ್ಯ ಇಲಾಖೆಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ಇನ್ನೊಂದೆಡೆ ಅರಣ್ಯ ಇಲಾಖೆಗೆ ಐದು ಎಕರೆ ಅರಣ್ಯ ಭೂಮಿ ನೀಡುವಂತೆ ತಾಲೂಕು ಪಂಚಾಯಿತಿಯಿಂದ ಮನವಿ ಮಾಡಲಾಗಿದೆ ಎಂದು ಭಟ್ಕಳ ಪುರಸಭಾಧಿಕಾರಿ ನೀಲಕಂಠ ಮೇಸ್ತ ಮಾಧ್ಯಮ ಗಳಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X