Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಜಾನುವಾರುಗಳ ಕಳ್ಳಸಾಗಾಟದ ದೂರು;...

ಭಟ್ಕಳ: ಜಾನುವಾರುಗಳ ಕಳ್ಳಸಾಗಾಟದ ದೂರು; ಸದ್ಯ ಬೀಫ್ ಖರೀದಿ, ಸೇವನೆ ಬೇಡ ಎಂದು ತಂಝೀಮ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ7 Dec 2023 9:42 AM IST
share
ಭಟ್ಕಳ: ಜಾನುವಾರುಗಳ ಕಳ್ಳಸಾಗಾಟದ ದೂರು; ಸದ್ಯ ಬೀಫ್ ಖರೀದಿ, ಸೇವನೆ ಬೇಡ ಎಂದು ತಂಝೀಮ್ ನಿರ್ಧಾರ

ಭಟ್ಕಳ: ಜಾನುವಾರುಗಳ ಕಳ್ಳಸಾಗಾಟ ಮಾಡಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಯಲ್ಲಿ ಇಲ್ಲಿನ ಮುಸ್ಲಿಮರ ಕೇಂದ್ರ ಸಂಘಟನೆ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ಸಭೆ ಸೇರಿದ ಭಟ್ಕಳದ ಉಲೇಮಾಗಳು, ವಿದ್ವಾಂಸರು ತಾತ್ಕಾಲಿಕವಾಗಿ ಬೀಫ್ ಖರೀದಿ ಮತ್ತು ಸೇವನೆ ಮಾಡದಂತೆ ನಿರ್ಧರಿಸಿ ಆದೇಶಿಸಿದ್ದಾರೆ.

ಭಟ್ಕಳದಲ್ಲಿ ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳ ಕಳುವುಗೈದು ಅದನ್ನು ಮಾಂಸದ ವ್ಯಾಪಾರಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಹಲವು ದಿನಗಳಿಂದ ಕೇಳಿಬರುತ್ತಿದ್ದು ಇದಕ್ಕೆ ಪುಷ್ಟಿ ಎಂಬಂತೆ ಗೋವುಕಳ್ಳಸಾಗಾಟದ ಹಲವು ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

ಕಳ್ಳತನದಿಂದ ಖರೀದಿ ಮಾಡಿದ ಜಾನುವಾರುಗಳ ಮಾಂಸ ತಿನ್ನುವುದು ಇಸ್ಲಾಂ ಧರ್ಮದಲ್ಲಿ ಹರಾಮ್ (ನಿಷಿದ್ಧ) ಆಗಿದೆ . ಈ ಹಿನ್ನೆಯಲ್ಲಿ ಮಾಂಸ ಮಾರಾಟಗಾರರು ಹಾಗೂ ದನದ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದ ಮುಸ್ಲಿಮ್ ಮುಖಂಡರು ಮತ್ತು ವಿದ್ವಾಂಸರು ಕಳ್ಳತನಗೈದ ಮತ್ತು ಅಕ್ರಮವಾಗಿ ಸಾಗಾಟ ಮಾಡಿದ ಜಾನುವಾರುಗಳನ್ನು ಮಾರಾಟ ಮಾಡುವುದನ್ನು ಮತ್ತು ಮಾಂಸದಂಗಡಿಗಳಿಸೆ ಸರಬರಾಜು ಮಾಡುವುದನ್ನು ನಿಲ್ಲಿಸುವವರೆಗೂ ಭಟ್ಕಳದಲ್ಲಿ ಬೀಫ್ ಮಾರಾಟ ಮಾಡಕೂಡದು ಮತ್ತು ಅಂತಹ ಮಾಂಸವನ್ನು ಖರೀದಿಸಿ ಸೇವಿಸಬಾರದು ಎಂದು ನೊಟೀಸ್ ಜಾರಿ ಮಾಡಿ ಜನರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಕದ್ದ ಜಾನುವಾರುಗಳ ಕುರಿತ ವರದಿಗಳು ಭಟ್ಕಳದಲ್ಲಿ ಗೊಂದಲ ಉಂಟು ಮಾಡಿವೆ . ಈ ಬಗ್ಗೆ ವಿವರವಾಗಿ ಮಾಹಿತಿ ಪಡೆಯಲಾಗುತ್ತಿದ್ದು ಈ ಗೊಂದಲ ನಿವಾರಣೆ ಆಗುವವರೆಗೆ ಜನರು ಬೀಫ್ ಖರೀದಿಸಬಾರದು ಎಂದು ತಂಝೀಮ್ ಹೇಳಿದೆ.

ಇತ್ತೀಚೆಗೆ ನಡೆದ ಸಭೆಯಲ್ಲಿ ಭಟ್ಕಳದ ಖಾಝಿಗಳು, ವಿದ್ವಾಂಸರು ಮತ್ತು ತಂಝೀಮ್ ಪದಾಧಿಕಾರಿಗಳು ಮಾಂಸ ವ್ಯಾಪಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಕೆಲವು ಮಾಂಸ ವ್ಯಾಪಾರಿಗಳು ಅನುಮಾನಾಸ್ಪದ ಮಾಂಸದ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಸಂಶಯಾಸ್ಪದ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಮಾತು ಕೇಳಿ ಬಂದಿದೆ . ಇದಕ್ಕಾಗಿ ಮುಸ್ಲಿಂ ಧರ್ಮಗುರುಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, ಶುದ್ಧ ಮತ್ತು ಹಲಾಲ್ ಮಾಂಸವನ್ನು ಮಾತ್ರ ಮಾರಾಟ ಮಾಡುವ ಅನಿವಾರ್ಯತೆಯನ್ನು ಒತ್ತಿಹೇಳಿದ್ದಾರೆ. ಹರಾಮ್ ಮಾಂಸದ ಮಾರಾಟವನ್ನು ಸಹಿಸುವುದಿಲ್ಲ ಎಂದು ವಿದ್ವಾಂಸರು ಎಚ್ಚರಿಕೆಯನ್ನು ನೀಡಿದ್ದಾರೆ.

ಪರಿಸ್ಥಿತಿಯನ್ನು ಸಮಗ್ರವಾಗಿ ತಿಳಿದುಕೊಳ್ಳಲು , ತಂಝೀಮ್ ಸಂಸ್ಥೆಯು ಸಮಿತಿಯನ್ನು ರಚಿಸಿದ್ದು ಹತ್ತು ದಿನಗಳ ಒಳಗಾಗಿ ಭಟ್ಕಳದಲ್ಲಿ ಆರೋಗ್ಯಕರ ಮತ್ತು ಹಲಾಲ್ ಜಾನುವಾರುಗಳ ಮಾಂಸ ಪೂರೈಸಲು ಕ್ರಮವಹಿಸುವುದಾಗಿ ತಂಝೀಮ್ ಮುಖಂಡರು ಮಾಹಿತಿ ನೀಡಿದ್ದಾರೆ. ಅನುಮಾನಾಸ್ಪದ ಪ್ರಾಣಿಗಳ ವಧೆ ಮತ್ತು ಸಂಶಯಾಸ್ಪದ ಮಾಂಸದ ಪೂರೈಕೆಯನ್ನು ನಿಲ್ಲಿಸುವುದು ಇದರಲ್ಲಿ ಸೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X