Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಸಚಿವ ಮಾಂಕಾಳ ವೈದ್ಯರನ್ನು...

ಭಟ್ಕಳ: ಸಚಿವ ಮಾಂಕಾಳ ವೈದ್ಯರನ್ನು ಭೇಟಿಯಾದ ಸರಾಬಿ ಹೋರಾಟ ಸಮಿತಿ ನಿಯೋಗ

ವಾರ್ತಾಭಾರತಿವಾರ್ತಾಭಾರತಿ11 March 2024 5:24 PM IST
share
ಭಟ್ಕಳ: ಸಚಿವ ಮಾಂಕಾಳ ವೈದ್ಯರನ್ನು ಭೇಟಿಯಾದ ಸರಾಬಿ ಹೋರಾಟ ಸಮಿತಿ ನಿಯೋಗ

ಭಟ್ಕಳ: ಸರಾಬಿ ನದಿ ಸ್ವಚ್ಚತೆ ಕುರಿತಂತೆ ಸಕ್ರೀಯವಾಗಿರುವ ಸರಾಬಿ ನದಿ ಹೋರಾಟ ಸಮಿತಿ ನಿಯೋಗವು ಇತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯರನ್ನು ಭೇಟಿಯಾಗಿ ಸರಬಿ ನದಿಯನ್ನು ಕೂಡಲೇ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ನಿಯೋಗದೊಂದಿಗೆ ಮಾತನಾಡಿದ ಸಚಿವ ಮಾಂಕಾಳ ವೈದ್ಯ ಸರಾಬಿ ನದಿ ಹೂಳು ತೆಗೆಯುವುದು ಒಂದು ದೊಡ್ಡ ಯೋಜನೆಯಾಗಿದೆ. ಕೇವಲ ಹಿಟಾಚಿ, ಜೆಸಿಬಿ ಯಂತ್ರಗಳ ಮೂಲಕ ನದಿಯ ಹೂಳು ತೆಗೆದು ನದಿಯನ್ನು ಆಳಗೊಳಿಸುವ ಕೆಲಸ ಆಗುವುದಿಲ್ಲ, ಇದಕ್ಕಾಗಿ ಡ್ರೆಜ್ಜಿಂಗ್ ಯಂತ್ರ ತಂದು ಆಳಗೊಳಿಸುವ ಕಾಮಗಾರಿ ಆರಂಭಿಸಬೇಕು, ಆದ್ದರಿಂದ ನಾನು ನಿಮಗೆ ಯಾವುದೇ ಸುಳ್ಳು ಬರವಸೆ ನೀಡಲು ಆಗುವುದಿಲ್ಲ. ಈ ಕೆಲಸ ಮುಂದಿನ ವರ್ಷಕ್ಕೆ ಮಾಡಲು ಸಾಧ್ಯವಾಗುತ್ತದೋ ಎಂದು ನೋಡೋಣ ಎಂದು ತಿಳಿಸಿದ್ದು, ಇದರಿಂದಾಗಿ ನಿಯೋಗಕ್ಕೆ ನಿರಾಸೆಯಾಗಿದೆ ಎಂದು ಹೇಳಲಾಗಿದೆ.

ಸರಬಿ ನದಿ ಸ್ವಚ್ಛತೆಗೆ ನಗರದ ತಗ್ಗು ಪ್ರದೇಶಗಳ ಜನರು ಚಿಂತಾಕ್ರಾಂತರಾಗಿರುವ ಸರಬಿ ನದಿ ಹೋರಾಟ ಸಮಿತಿಯ ಪದಾಧಿಕಾರಿಗಳು ಹೆಚ್ಚು ಕಡಿಮೆ ಪ್ರತಿದಿನ ಸಭೆ ನಡೆಸಿ ಮುಂದಿನ ಯೋಜನೆ ರೂಪಿಸುತ್ತಿದ್ದಾರೆ.

ನಿಯೋಗದ ಪರವಾಗಿ ಮಾತನಾಡಿದ ಪುರಸಭಾ ಸದಸ್ಯ ಕೈಸರ್ ಮೊಹತೆಶಮ್, ಚೌತ್ನಿ ಮತ್ತು ಮುಂಡಳ್ಳಿ ಕಡೆಗೆ ನದಿಯ ಬದಿಗಳಲ್ಲಿ ಬೇಲಿ ಹಾಕಿರುವುದರಿಂದ ಮಳೆಯ ಸಂದರ್ಭದಲ್ಲಿ ತಗ್ಗು ಪ್ರದೇಶದ ಎಲ್ಲಾ ಜನರಿಗೆ ದೊಡ್ಡ ಸಮಸ್ಯೆ ಯಾಗಬಹುದು. ಆದರೆ ಘೌಸಿಯಾ ಸ್ಟ್ರೀಟ್, ಮುಶ್ಮಾ ಸ್ಟ್ರೀಟ್, ಖಲೀಫಾ ಸ್ಟ್ರೀಟ್, ಡಾರಂಟ, ಡೊಂಗರಪಳ್ಳಿ, ಬೆಳ್ನಿ ಮುಂತಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿಯ ಉದ್ದಕ್ಕೂ ಬೇಲಿ ಹಾಕದ ಕಾರಣ ಭಾರೀ ಮಳೆಯ ಸಂದರ್ಭ ನದಿಯ ನೀರು ಎಲ್ಲಾ ತಗ್ಗು ಪ್ರದೇಶಗಳಿಗೆ ಪ್ರವೇಶಿಸುತ್ತದೆ. ಪ್ರವಾಹದಂತಹ ಪರಿಸ್ಥಿತಿ ಎದುರಾಗಬಹುದು ಎಂದು ತಿಳಿಸಿದ್ದಾರೆ.

ಗೌಷಿಯಾ ಬೀದಿಯಲ್ಲಿರುವ ಪಂಪಿಂಗ್ ಸ್ಟೇಷನ್‌ನ ಸಮಸ್ಯೆಗಳು ಮತ್ತು ಕಲುಷಿತಗೊಂಡ ಬಾವಿಗಳಲ್ಲಿ ಚರಂಡಿ ಸಂಗ್ರಹವಾಗಿರುವ ಬಗ್ಗೆಯೂ ದೂರು ಬಂದಿದ್ದು, ಸಚಿವರಿಂದ ತೃಪ್ತಿಕರ ಪ್ರತಿಕ್ರಿಯೆ ಸಿಕ್ಕಿಲ್ಲ. ಇದೇ ಕಾರಣಕ್ಕೆ ನಿಯೋಗ ನಿರಾಸೆಯಿಂದ ಹಿಂತಿರುಗಬೇಕಾಯಿತು ಎನ್ನಲಾಗಿದೆ.

ನಿಯೋಗದಲ್ಲಿ ಮೌಲವಿ ಅಂಜುಮ್ ಗಂಗಾವಳಿ ನದ್ವಿ, ಮುಹಮ್ಮದ್ ಹುಸೇನ್ ಅಸ್ಕರಿ, ಮುಬಶ್ಶಿರ್ ಹುಸೇನ್ ಹಲ್ಲಾರೆ, ಇಮ್ಶಾದ್ ಅಖ್ತರ್, ಅಶ್ಫಾಕ್ ಕೆ.ಎಂ, ಮುಸ್ತಫಾ ಅಸ್ಕರಿ, ಶಮೂನ್ ಹಾಜಿ ಫಖಿ, ಮೌಲವಿ ಇರ್ಷಾದ್ ನಾಯ್ತೆ ನದ್ವಿ, ಇರ್ಶಾದ್ ಸಿದ್ದಿಖಾ, ತಂಝೀಮ್ ಮುಖಂಡರಾದ ಎಸ್.ಎಂ.ಸೈಯದ್ ಪರ್ವೇಝ್, ನ್ಯಾಯವಾದಿ ಇಮ್ರಾನ್ ಲಂಕಾ, ಇಮ್ತಿಯಾಝ್ ಉ‌ದ್ಯಾವರ್, ಇರ್ಷಾದ್ ಗವಾಯಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X