Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಮೃಗತ್ವ ನಿವಾರಣೆ ಮಾಡಿ ಮನುಷ್ಯತ್ವ...

ಮೃಗತ್ವ ನಿವಾರಣೆ ಮಾಡಿ ಮನುಷ್ಯತ್ವ ಬೆಳೆಸುವ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕಿದೆ: ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ4 Dec 2024 8:40 PM IST
share
ಮೃಗತ್ವ ನಿವಾರಣೆ ಮಾಡಿ ಮನುಷ್ಯತ್ವ ಬೆಳೆಸುವ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕಿದೆ: ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ

ಶಿರಸಿ: ಬ್ರಿಟೀಷರಿಂದ ಬಂದ ಗುಲಾಮಿ ಮನಸ್ಥಿತಿ ಇಂದಿಗೂ ಮುಂದುವರಿದ ಈಗಿನ ಕಾಲಘಟ್ಟದಲ್ಲಿ ಮೃಗತ್ವ ನಿವಾರಣೆ ಮಾಡಿ ಮನುಷ್ಯತ್ವ ಬೆಳೆಸುವ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕಿದೆ ಎಂದು ಹಿರಿಯ ಸಾಹಿತಿ ಬಿ.ಟಿ.ಲಲಿತಾ ನಾಯಕ ಹೇಳಿದರು.

ಶಿರಸಿ ನಗರದ ರಂಗಧಾಮದಲ್ಲಿ ಆಯೋಜಿಸಿರುವ ಉತ್ತರ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬ್ರಿಟಿಷ್ ಆಡಳಿತ ಮುಕ್ತಾಯಗೊಂಡರೂ ಗುಲಾಮಿ ಮನಸ್ಥಿತಿ ಇಂದಿಗೂ ಮುಂದುವರೆದಿದೆ. ಪ್ರತಿಯೊಬ್ಬನ ತಲೆಯಿಂದ ಗುಲಾಮಿ ಮನಸ್ಥಿತಿಯನ್ನು ತೆಗೆದು ಹಾಕಬೇಕು. ಎಲ್ಲ ಮನುಷ್ಯನೂ ಸ್ವಾಭಿಮಾನದಿಂದ ಬದುಕಬೇಕು. ಮೋಸಕ್ಕೆ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲದ ನಾಡನ್ನು ಕಟ್ಟಲು ನಾವು ಶ್ರಮಿಸಬೇಕು. ನಾಡನ್ನು ಭ್ರಷ್ಟಾಚಾರ, ಭ್ರಮೆಯಿಂದ ಮುಕ್ತ ಮಾಡ ಬೇಕು. ಪಾಶ್ಚಾತ್ಯ ಹಾಗೂ ಸಾಂಪ್ರದಾಯಿಕ ಸಂಸ್ಕೃತಿ ನಡುವೆ ಸಮಾಜ ಕಟ್ಟುವ ಕೆಲಸ ಆಗಬೇಕು. ಮೃಗತ್ವ ಕಳೆದು ಮನುಷ್ಯತ್ವ ಹೆಚ್ಚಿಸಿಕೊಳ್ಳುವತ್ತ ಚಿಂತನೆ ನಡೆಸಬೇಕಿದೆ ಎಂದರು.

ಕನ್ನಡ ನಾಡನ್ನು ಮನೆ ಎಂದು ಪರಿಗಣಿಸಬೇಕು. ಆಗ ಮಾತ್ರ ಭಾಷೆ ಗಟ್ಟಿಯಾಗುತ್ತದೆ ಎಂದ ಅವರು, ಸ್ವಾತಂತ್ರ್ಯದ ಜವಾಬ್ದಾರಿ ಹೊರಲು ಶಕ್ತಿ ಬೇಕು. ಅಂಥ ಶಕ್ತಿ ಬರಲು ಉತ್ತಮ ಸಾಹಿತ್ಯ ರಚನೆ ಆಗಬೇಕು ಎಂದು ಹೇಳಿದರು. ವಿವಿಧ ಲೇಖಕರ ಪುಸ್ತಕ ಬಿಡುಗಡೆ ಮಾಡಿದ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಸಾಹಿತ್ಯ, ಕನ್ನಡ ಭಾಷೆಯನ್ನು ಜೀವಂತವಾಗಿಟ್ಟ ಜಿಲ್ಲೆ ಇದಾಗಿದೆ. ದಿನಕರ ದೇಸಾಯಿ ಅವರು ಅಕ್ಷರ ಕ್ರಾಂತಿ ಮಾಡಿದ ಜಿಲ್ಲೆ ಇದಾಗಿದೆ. ಎಲ್ಲ ಭಾಷೆಯನ್ನೂ ಕನ್ನಡಿಗರು ಪ್ರೀತಿಸುತ್ತಾರೆ. ಇದರ ಜೊತೆ ಕನ್ನಡ ಭಾಷೆಯನ್ನೂ ಬಳಸಿ ಬೆಳೆಸುವ ಕಾರ್ಯ ಆಗಬೇಕಿದೆ ಎಂದರು. ಎಲ್ಲ ಕ್ಷೇತ್ರಗಳು ಸಂಪಾದನೆ ಮಾಡುವ ಕ್ಷೇತ್ರಗಳಾಗುತ್ತಿದ್ದು, ಸಾಹಿತ್ಯ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ. ಇಂಥ ಮನಸ್ಥಿತಿ ದೂರಾಗಬೇಕು ಎಂದು ಹೇಳಿದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸಾಹಿತ್ಯ ಶ್ರೀಮಂತಗೊಳಿಸಲು ಜಿಲ್ಲೆಯ ಸಾಹಿತಿಗಳ ಕೊಡುಗೆ ಅಪಾರವಿದೆ. ವಿಚಾರವಂತ ಸಾಹಿತ್ಯಕ್ಕೆ ಜಿಲ್ಲೆ ಹೆಸರಾಗಿದೆ. ಕೇವಲ ಕನ್ನಡ ಭಾಷೆ ಬಳಸುವ ಯಕ್ಷಗಾನ ಕೂಡ ನಮ್ಮದೇ ವಿಶೇಷವಾಗಿದೆ. ಕನ್ನಡಕ್ಕೆ ಅಗ್ರ ಸ್ಥಾನ ಎಂಬುದನ್ನು ಯಾರೂ ಮರೆಯಬಾರದು. ಹಾಗಾಗಿ ಯುವ ಪೀಳಿಗೆಗೆ ಕನ್ನಡ ಭಾಷೆ ಬಳಕೆಗೆ ಪ್ರೋತ್ಸಾಹಿಸಬೇಕಿದೆ. ಎಲ್ಲ ಶಾಲೆಗಳಲ್ಲಿ ಕನ್ನಡ ಪ್ರಥಮ ಭಾಷೆಯಾಗಿ ಬಳಸಲು ಸರ್ಕಾರ ಕ್ರಮವಹಿಸಬೇಕು. ಸಮಾಜ ಬದಲಾವಣೆಯಲ್ಲಿ ಸಾಹಿತ್ಯದ ಪಾಲು ದೊಡ್ಡದಿರಬೇಕು ಎಂದು ಹೇಳಿದರು.


ವಿಮರ್ಶಕ ಆರ್.ಡಿ.ಹೆಗಡೆ ಆಲ್ಮನೆ ಗೌರವಾಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಸರ್ವಾಧ್ಯಕ್ಷ ಶ್ರೀಪಾದ ಶೆಟ್ಟಿ, ಹಿರಿಯ ಸಾಹಿತಿ ಭಾಗೀರಥಿ ಹೆಗಡೆ, ಜಾನಪದ ವಿದ್ವಾಂಸ ಎನ್.ಆರ್.ನಾಯಕ, ಸಾಹಿತಿ ಶಾಂತಿ ನಾಯಕ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಉಪವಿಭಾಗಾಧಿಕಾರಿ ಕೆ.ಕಾವ್ಯಾರಾಣಿ, ಕನ್ನಡ ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಮಂಗಲಾ ನಾಯ್ಕ, ಡಿಡಿಪಿಐ ಬಸವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಸಿಸಿಎಫ್ ಕೆ.ವಿ.ವಸಂತ ರೆಡ್ಡಿ, ಶಿರಸಿ ರೋಟರಿ ಅಧ್ಯಕ್ಷೆ ಡಾ.ಸುಮನ್ , ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಚಾರ್ಜ್ ಫರ್ನಾಂಡಿಸ್, ಇತರರಿದ್ದರು.

ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ ಪ್ರಾಸ್ತಾವಿಕ ಮಾತನಾಡಿದರು. ರೇಷ್ಮಾ ಎಂ ನಾಯ್ಕ ಪುಸ್ತಕ ಹಾಗೂ ನಾಗಪತಿ ಹೆಗಡೆ ವೇದಿಕೆ, ದ್ವಾರಗಳನ್ನು ಪರಿಚಯಿಸಿದರು. ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ ಸ್ವಾಗತಿಸಿದರು. ಕೆ.ಎನ್.ಹೊಸಮನಿ, ಭವ್ಯಾ ಹಳೆಯೂರು ನಿರೂಪಿಸಿದರು. ಸಾಹಿತ್ಯ ಪರಿಷತ್ ಶಿರಸಿ ತಾಲೂಕು ಘಟಕದ ಅಧ್ಯಕ್ಷ ಸುಬ್ರಾಯ ಭಟ್ ಬಕ್ಕಳ ವಂದಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X