Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಕವಿ ಸೈಯದ್ ಸಮೀವುಲ್ಲಾ ಬರ್ಮಾವರ್...

ಭಟ್ಕಳ: ಕವಿ ಸೈಯದ್ ಸಮೀವುಲ್ಲಾ ಬರ್ಮಾವರ್ ʼಮಥಿಯಾಸ್ ಫ್ಯಾಮಿಲಿ ಕಾವ್ಯ ಪ್ರಶಸ್ತಿʼಗೆ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ23 Dec 2024 6:55 PM IST
share
ಭಟ್ಕಳ: ಕವಿ ಸೈಯದ್ ಸಮೀವುಲ್ಲಾ ಬರ್ಮಾವರ್ ʼಮಥಿಯಾಸ್ ಫ್ಯಾಮಿಲಿ ಕಾವ್ಯ ಪ್ರಶಸ್ತಿʼಗೆ ಆಯ್ಕೆ

ಭಟ್ಕಳ: ಭಟ್ಕಳದ ಹೆಸರಾಂತ ನವಾಯತ್ ಕವಿ ಮತ್ತು ಗಾಯಕ ಸೈಯದ್ ಸಮೀವುಲ್ಲಾ ಬರ್ಮಾವರ್ ಅವರನ್ನು ಕವಿತಾ ಟ್ರಸ್ಟ್‌ನ ಮಥಿಯಾಸ್ ಫ್ಯಾಮಿಲಿ ಕಾವ್ಯ ಪ್ರಶಸ್ತಿ - 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಶಸ್ತಿಯು 25,000 ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಪ್ರಶಂಸಾ ಪತ್ರ ಹೊಂದಿದೆ. ಜ.12 ರಂದು ಉಡುಪಿಯ ಸಾಸ್ತಾನದಲ್ಲಿ ನಡೆಯುವ 19ನೇ ಕವಿತಾ ಫೆಸ್ಟ್ ವೇಳೆ ಪ್ರಶಸ್ತಿ ಬರ್ಮಾವರ್ ಅವರಿಗೆ ಪ್ರದಾನ ಮಾಡಲಾಗುವುದು.

1956ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಜನಿಸಿದ ಬರ್ಮಾವರ್ ಅವರು ತಮ್ಮ ನವಾಯತಿ ಕಾವ್ಯದ ಅಪಾರ ಕೊಡುಗೆಗಾಗಿ ಪ್ರಸಿದ್ಧರು. ಉರ್ದುವಿನಲ್ಲಿ ಆರಂಭವಾಗಿ, ನಂತರ ನವಾಯತಿ ಭಾಷೆಗೆ ತಮ್ಮನ್ನು ಸಮರ್ಪಿಸಿಕೊಂಡ ಅವರು, ಸಮುದಾಯದ ಪ್ರಮುಖ ಸಾಹಿತ್ಯಿಕ ಚಲನಶೀಲ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಕಾವ್ಯ ನಂಬಿಕೆ, ಪ್ರೀತಿ, ಸಾಮಾಜಿಕ ಸಮಸ್ಯೆಗಳು, ಮತ್ತು ಪರಂಪರೆಯ ಆಳವನ್ನು ಪರಾಮರ್ಶಿಸುತ್ತದೆ.

2012ರಲ್ಲಿ ಪ್ರಕಟಿತ "ನೀಟ್ ವಾಟ್"(ನವಾಯತಿ ಭಾಷೆ) ಎಂಬ ಚೊಚ್ಚಲ ಕವನ ಸಂಕಲನದ ಮೂಲಕ ಅವರು ನವಾಯತಿ ಸಾಹಿತ್ಯದಲ್ಲಿ ತಮ್ಮ ವಿಶಿಷ್ಟ ಸ್ಥಾನವನ್ನು ಸೃಷ್ಠಿಸಿದ್ದಾರೆ. ನವಾಯತಿ ಮುಷಾಯಿರಾಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದು, ಭಾಷೆಯ ಶ್ರೀಮಂತ ಪರಂಪರೆಯನ್ನು ಕಾಪಾಡುವ ಜೊತೆಗೆ ಉರ್ದುವಿನಿಂದ ನವಾಯತಿ ಭಾಷೆಗೆ ಸಾಹಿತ್ಯಿಕ ಒತ್ತನ್ನು ವಿಸ್ತರಿಸಿದ್ದಾರೆ.

ಬರ್ಮಾವರ್ ಅವರು ನವಾಯತಿ ಕಾವ್ಯವನ್ನು ಕಿರಿಯ ಪ್ರೇಕ್ಷಕರಿಗೂ ಪರಿಚಯಿಸುವಂತೆ ಹಲವಾರು ಆಡಿಯೋ ಕ್ಯಾಸೆಟ್‌ ಗಳು ಮತ್ತು ಸಿಡಿಗಳನ್ನು ರಚಿಸಿದ್ದು, ನವಾಯತ್ ಮೆಹ್ಫಿಲ್ ಸಂಸ್ಥೆಯ ಸಂಸ್ಥಾಪಕರಾಗಿ ಭಾಷಾ ಮತ್ತು ಸಂಸ್ಕೃತಿಯ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಪ್ರಯತ್ನಗಳಿಗೆ ಹಲವಾರು ಪ್ರಶಸ್ತಿಗಳು ಮತ್ತು ಪುರಸ್ಕಾರಗಳನ್ನು ಅವರು ಪಡೆದಿದ್ದಾರೆ.

ಮಥಿಯಾಸ್ ಫ್ಯಾಮಿಲಿ ಕಾವ್ಯ ಪ್ರಶಸ್ತಿ 2008ರಲ್ಲಿ ದುಬೈನ ಮೇರಿಟ್ ಫ್ರೈಟ್ ಸಿಸ್ಟಮ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಜೋಸೆಫ್ ಮಥಿಯಾಸ್ ತಮ್ಮ ಕುಟುಂಬದ ಪರಂಪರೆಯನ್ನು ಗೌರವಿಸಲು ಸ್ಥಾಪಿಸಿದ ಈ ಪ್ರಶಸ್ತಿಯ 17ನೇ ಪುರಸ್ಕೃತ ರಾಗಿರುವ ಬರ್ಮಾವರ್, ನವಾಯತ್ ಸಾಹಿತ್ಯದ ಪ್ರಗತಿಗೆ ಮತ್ತು ಯುವ ಕವಿಗಳಿಗೆ ಸ್ಫೂರ್ತಿಯಾಗಿದ್ದಾರೆ.

ಜ.12ರಂದು ಉಡುಪಿಯ ಎಕ್ಸ್‌ಪ್ರೆಶನ್ಸ್ ಸಹಯೋಗದಲ್ಲಿ ಕವಿತಾ ಟ್ರಸ್ಟ್ ಕವಿಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ದೇಶದ ಹೆಸರಾಂತ ಕವಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಶಸ್ತಿಗೆ ಭಾಜನರಾದ ಸೈಯ್ಯದ್ ಸಮಿಯುಲ್ಲಾ ಬರ್ಮಾವರ್ ತಮ್ಮ ಸಂತೋಷವನ್ನು ಮಾಧ್ಯಮಗಳೊಂದಿಗೆ ಹಂಚಿ ಕೊಂಡಿದ್ದು, ನವಾಯತ್ ಮತ್ತು ಕೊಂಕಣಿ ಭಾಷೆಗಳು ಸಹೋದರ ಭಾಷೆಯಾಗಿದ್ದು ಈ ಭಾಷೆಯಲ್ಲಿ ಸಾಹಿತ್ಯ ರಚನೆ ಇನ್ನಷ್ಟು ಆಗಬೇಕಿದೆ ಎಂದು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X