Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ತಂಝೀಮ್ ನೇತೃತ್ವದಲ್ಲಿ ಗೋವಾದಿಂದ...

ಭಟ್ಕಳ: ತಂಝೀಮ್ ನೇತೃತ್ವದಲ್ಲಿ ಗೋವಾದಿಂದ ಮಂಗಳೂರುವರೆಗಿನ ಮುಸ್ಲಿಮರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧತೆ

► ಶುಕ್ರವಾರ ಕರಾವಳಿ ಕರ್ನಾಟಕದ್ಯಂತ ವಕ್ಫ್ ಸಂಶೋಧನಾ ಬಿಲ್ ವಿರೋಧಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಕೆ ►ಕರಾವಳಿ ಜಿಲ್ಲೆಗಳ ಮುಸ್ಲಿಮ್ ಮುಖಂಡರ ಸಭೆಯಲ್ಲಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ15 April 2025 7:22 PM IST
share
ಭಟ್ಕಳ: ತಂಝೀಮ್ ನೇತೃತ್ವದಲ್ಲಿ ಗೋವಾದಿಂದ ಮಂಗಳೂರುವರೆಗಿನ ಮುಸ್ಲಿಮರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧತೆ

ಭಟ್ಕಳ: ವಕ್ಫ್ ಸಂಶೋಧನಾ ಬಿಲ್ ವಿರೋಧಿಸಲು ಗೋವಾದಿಂದ ಮಂಗಳೂರುವರೆಗಿನ ಕರಾವಳಿ ಜಿಲ್ಲೆಗಳ ಮುಸ್ಲಿಮ್ ಮುಖಂಡರ ಒಗ್ಗಟ್ಟಿನ ಪ್ರದರ್ಶನಕ್ಕೆ ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ವೇದಿಕೆ ಸಿದ್ಧಗೊಳ್ಳುತ್ತಿದೆ. ಮಂಗಳವಾರ ಇಲ್ಲಿನ ನವಾಯತ್ ಕಾಲೋನಿಯ ರಾಬಿತಾ ಸೊಸೈಟಿಯ ಸಭಾಂಗಣದಲ್ಲಿ ನಡೆದ ಮುಸ್ಲಿಮ್ ಮುಖಂಡರ, ಉಲೇಮಾಗಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಮುಸ್ಲಿಮರ ಐಕ್ಯತೆಯ ಮಹತ್ವವನ್ನು ಒತ್ತಿ ಹೇಳಲಾಯಿತು. ತಂಝೀಮ್ ನೇತೃತ್ವದಲ್ಲಿ ಕರಾವಳಿಯ ಸಮಸ್ತ ಮುಸ್ಲಿಮರ ಏಕತೆಯ ಸಂಕೇತವಾಗಿ ಒಂದು ವೇದಿಕೆಯನ್ನು ರಚಿ ಸಲು ಒಪ್ಪಿಗೆ ಸಿಕ್ಕಿತು. ವಕ್ಫ್ ಬಿಲ್ ಸೇರಿದಂತೆ ಕೇಂದ್ರ ಸರಕಾರದ ಕರಾಳ ಕಾನೂನುಗಳ ವಿರುದ್ಧ ನಿರಂತರ ಪ್ರತಿಭಟನೆಗೆ ಸಭೆಯಲ್ಲಿ ಸನ್ನದ್ಧತೆ ವ್ಯಕ್ತವಾಯಿತು. ಶುಕ್ರವಾರ ಜಿಲ್ಲೆಯಾದ್ಯಂತ ಪ್ರತಿಭಟನಾ ಸಭೆಗಳು, ಮನವಿ ಪತ್ರ ಸಲ್ಲಿಕೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು.

ಮುಂಬರುವ ದಿನಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ರೀತಿಯಲ್ಲಿ ವಕ್ಪ್ ಕಾಯ್ದೆಯನ್ನು ವಿರೋಧಿಸಿ ಸತತ ಪ್ರತಿಭಟನೆಗಳಿಗೆ ಕರಾವಳಿಯ ಮುಸ್ಲಿಮ್ ಸಮುದಾಯವು ಒಗ್ಗಟ್ಟಾಗಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.

ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಂಬಂದ್ರಿ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಮಂಗಳೂರಿನ ಮಾಜಿ ಮೇಯರ್ ಅಶ್ರಫ್ ಬ್ಯಾರಿ, ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯ ಮೌಲಾನಾ ಮುಹಮ್ಮದ್ ಇಲಿಯಾಸ್ ನದ್ವಿ, ಮಾಜಿ ಶಾಸಕ ಮೋಹಿದ್ದೀನ್ ಬಾವ, ರಾಬಿತಾ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಡಾ. ಅತಿಕುರ್ರಹ್ಮಾನ್ ಮುನಿರಿ, ಉಡುಪಿ ಮುಸ್ಲಿಮ್ ಒಕ್ಕೂಟದ ಮುಹಮ್ಮದ್ ಮೌಲಾ, ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಸೈಯ್ಯದ್ ಇಮ್ರಾನ್ ಲಂಕಾ, ಜಮಾಅತೆ ಇಸ್ಲಾಮಿ ಹಿಂದ್ ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಅಬ್ದುಲ್ ಮನ್ನಾನ್ ಸಿರ್ಸಿ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ತೌಫೀಖ್ ಬ್ಯಾರಿ, ನಮ್ಮ ನಾಡು ಒಕ್ಕೂಟದ ಕಾರ್ಯದರ್ಶಿ ಹುಸೇನ್ ಹೈಕಾಡಿ, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿ ಬೇಂಗ್ರೆ ಸೇರಿದಂತೆ ಗೋವಾ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಜಮಾಅತ್‌ಗಳ ಮುಖಂಡರು ಮತ್ತು ಪ್ರತಿನಿಧಿಗಳು ಭಾಗವಹಿಸಿ ಸಲಹೆಗಳನ್ನು ನೀಡಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X